ವಾಣಿಜ್ಯ

ಅಮೆರಿಕನ್​ ಡಾಲರ್ ವಿರುದ್ಧ ಭಾರತದ ರೂಪಾಯಿ ಮೌಲ್ಯ ಕುಸಿತ

ಶುಕ್ರವಾರದ ಸೆಷನ್‌ನಲ್ಲಿ ರೂಪಾಯಿ ಕೇವಲ ಒಂದು ಪೈಸೆಯಷ್ಟು ಇಳಿಕೆ ಕಂಡು, ಡಾಲರ್ ಎದುರು 81.71 ಕ್ಕೆ ತಲುಪಿತ್ತು.

ಮುಂಬೈ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಅಮೆರಿಕನ್​ ಡಾಲರ್ ವಿರುದ್ಧ ಭಾರತದ ರೂಪಾಯಿ ಮೌಲ್ಯ 6 ಪೈಸೆ ಕುಸಿತ ಕಂಡಿದ್ದು, ರೂಪಾಯಿ ಮೌಲ್ಯ 81.77 ಕ್ಕೆ ತಲುಪಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಕಡಿಮೆಯಾಗಿರುವುದು ಮತ್ತು ತಾಜಾ ವಿದೇಶಿ ನಿಧಿಯ ಒಳಹರಿವು ರೂಪಾಯಿ ಮೌಲ್ಯ ಕುಸಿತದ ಮೇಲೆ ಪರಿಣಾಮ ಬೀರಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.ಅಂತರಬ್ಯಾಂಕ್ ವಿದೇಶಿ ವಿನಿಮಯದಲ್ಲಿ, ದೇಶೀಯ ಘಟಕವು ಡಾಲರ್ ವಿರುದ್ಧ 81.81 ರೂಪಾಯಿ ಮೌಲ್ಯದೊಂದಿಗೆ ದುರ್ಬಲವಾಗಿ ಇಂದಿನ ವಹಿವಾಟು ಆರಂಭಿಸಿ, 6 ಪೈಸೆ ಕುಸಿತ ಕಂಡು 81.77 ರ ಮಟ್ಟವನ್ನು ತಲುಪಿತು. ಶುಕ್ರವಾರದ ಸೆಷನ್‌ನಲ್ಲಿ ರೂಪಾಯಿ ಕೇವಲ ಒಂದು ಪೈಸೆಯಷ್ಟು ಇಳಿಕೆ ಕಂಡು, ಡಾಲರ್ ಎದುರು 81.71 ಕ್ಕೆ ತಲುಪಿತ್ತು.
ಆರು ಕರೆನ್ಸಿಗಳ ವಿರುದ್ಧ ಗ್ರೀನ್‌ಬ್ಯಾಕ್‌ನ ಬಲವನ್ನು ಅಳೆಯುವ ಡಾಲರ್ ಸೂಚ್ಯಂಕವು ಶೇಕಡಾ 0.41 ರಷ್ಟು ಏರಿಕೆಯಾಗಿ 106.39 ಕ್ಕೆ ತಲುಪಿದೆ. ಜಾಗತಿಕ ತೈಲ ಮಾನದಂಡವಾದ ಬ್ರೆಂಟ್ ಕ್ರೂಡ್ ಫ್ಯೂಚರ್ಸ್ ಪ್ರತಿ ಬ್ಯಾರೆಲ್‌ಗೆ ಶೇಕಡಾ 2.58 ರಷ್ಟು ಕುಸಿದು USD 81.47 ಕ್ಕೆ ತಲುಪಿದೆ

andolanait

Recent Posts

ಮಂಡ್ಯ | ಬುದನೂರು ಉತ್ಸವದಲ್ಲಿ 3 ದಿನ ಹೆಲಿ ಟೂರಿಸಂ

ಮಂಡ್ಯ : ಫೆ.21, 22ರಂದು ನಡೆಯಲಿರುವ ಬೂದನೂರು ಉತ್ಸವ-2026ರ ಪ್ರಯುಕ್ತ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಮೂರು ದಿನಗಳ ಹೆಲಿ ಟೂರಿಸಂ…

52 seconds ago

ಅದ್ಧೂರಿಯಾಗಿ ಬೂದನೂರು ಉತ್ಸವ ಆಚರಣೆ : ಪಿ.ರವಿಕುಮಾರ್

ಮಂಡ್ಯ : ಕಳೆದ 2024ರಲ್ಲಿ ಬೂದನೂರು ಉತ್ಸವವನ್ನು ವಿಜೃಂಭಣೆಯಿಂದ ನಡೆಸಲಾಗಿತ್ತು. ಸದರಿ ವರ್ಷವೂ ಸಹ ಅದ್ಧೂರಿಯಾಗಿ ಉತ್ಸವವನ್ನು ಆಚರಿಸಲಾಗುವುದು ಎಂದು…

15 mins ago

ಬಾಲ ನಟ, ನಟಿ : ಜಿಲ್ಲಾಧಿಕಾರಿಯಿಂದ ಅನುಮತಿ ಕಡ್ಡಾಯ

ಮೈಸೂರು : ಚಲನಚಿತ್ರಗಳು, ಧಾರಾವಾಹಿಗಳು, ಟಿವಿ ಕಾರ್ಯಕ್ರಮಗಳು, ಜಾಹೀರಾತುಗಳು ಹಾಗೂ ಇತರ ವಾಣಿಜ್ಯ ಶ್ರವಣ-ದೃಶ್ಯ ಮಾಧ್ಯಮಗಳಲ್ಲಿ ಮಕ್ಕಳು (ಬಾಲ ಕಲಾವಿದರು)…

34 mins ago

ಗ್ರಾಮ ಪಂಚಾಯ್ತಿ ಚುನಾವಣೆ : ಸಿದ್ಧತೆಗೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಸರ್ಕಾರ

ಬೆಂಗಳೂರು : 2026-31ನೇ ಸಾಲಿನ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ…

2 hours ago

ಗ್ರಾಮ ಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ್ದು ಗಾಂಧಿಜೀ : ಸಿಎಂ

ಬೆಂಗಳೂರು : ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕಲ್ಪನೆಗೆ…

2 hours ago

ಮದುವೆ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ಚಾಕು ಇರಿತ ; ವಧು ಮಾಜಿ ಲವರ್‌ನಿಂದ ಕೃತ್ಯ ಶಂಕೆ

ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ…

4 hours ago