ವಾಣಿಜ್ಯ

ನೆಸ್ಲೆ ಇಂಡಿಯಾಗೆ ಅತ್ಯುತ್ತಮ ಉದ್ಯಮ ಪ್ರಶಸ್ತಿ

ಮೈಸೂರು : IIMR – ICAR‌ ನ ನ್ಯೂಟ್ರಿಹಬ್‌ ಆಯೋಜಿಸಿದ್ದ ನ್ಯೂಟ್ರಿ ಕನ್ವೆನ್ಸನ್‌ ನಲ್ಲಿ ಆಹಾರ ಉತ್ಪನ್ನಗಳ ತಯಾರಿಕಾ ಕಂಪನಿಯಾದ ನೆಸ್ಲೆ ಇಂಡಿಯಾ ಅತ್ಯುತ್ತಮ ಉದ್ಯಮ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ಮೈಸೂರಿನಲ್ಲಿ IIMR – ICAR ನ ನ್ಯೂಟ್ರಿ ಹಬ್ ಆಯೋಜನೆ ಮಾಡಿದ್ದ ಅಂತರಾಷ್ಟ್ರೀಯ ನ್ಯೂಟ್ರಿ ಸೀರಿಯಲ್‌ ಕನ್ವೆನ್ಸನ್‌ 5.0 ರಲ್ಲಿ ನೆಸ್ಲೆ ಇಂಡಿಯಾ ಕಂಪನಿಯು ಅತ್ಯುತ್ತಮ ಉದ್ಯಮ ಪ್ರಾಡಕ್ಟ್‌ ಇನ್ನೋವೇಶನ್‌ ಫಾರ್‌ ಮೇನ್‌ ಸ್ಟರೀಮಿಂಗ್‌ ಮಿಲ್ಲೆಟ್ಸ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ಇನ್ನು ಪ್ರಶಸ್ತಿಯನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ನೆಸ್ಲೆ ಇಂಡಿಯಾ ಕಂಪನಿಯ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಸುರೇಶ್‌ ನಾರಾಯಣ್‌ ಅವರು ಅತ್ಯುತ್ತಮ ಉದ್ಯಮ ಪ್ರಾಡಕ್ಟ್‌ ಇನ್ನೋವೇಶನ್‌ ಫಾರ್‌ ಮೇನ್‌ ಸ್ಟರೀಮಿಂಗ್‌ ಮಿಲ್ಲೆಟ್ಸ್‌ ಅವಾರ್ಡ್‌ ಪಡೆಯುತ್ತಿರುವುದಕ್ಕೆ ನೆಸ್ಲೆ ಇಂಡಿಯಾಗೆ ಹೆಮ್ಮೆ ಅನ್ನಿಸುತ್ತಿದೆ. ನೆಸ್ಲೆ ಇಂಡಿಯಾಗೆ ಈ ಪ್ರಶಸ್ತಿ ಲಭಿಸಿರುವುದು ಆಹಾರ ಉದ್ಯಮದಲ್ಲಿನ ಉತ್ಕೃಷ್ಟತೆ ಹಾಗೂ ನಾವೀನ್ಯತೆಗೆ ಸಂಸ್ಥೆ ಹೊಂದಿರುವ ಬದ್ಧತೆಗೆ ಹಿಡಿದ ಕನ್ನಡಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಕಾರ್ಯಕ್ರಮದಲ್ಲಿ ಹಲವು ಕಂಪನಿಗಳ ಉತ್ಪಾದಕರು, ನೀತಿ ನಿರೂಪಕರು, ಉತ್ಪನ್ನಗಳ ಸಂಸ್ಕರಣಾಕಾರರು, ಶಿಕ್ಷಣ ತಜ್ಞರು, ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗಳು, ಇನ್ಕ್ಯೂಬೇಟರ್‌ ಗಳು, ಸ್ಟಾರ್ಟಪ್‌ ಗಳು, ಮೈಕ್ರೋ ಉದ್ಯಮಿಗಳು, ಮಿಲೆಟ್ಸ್‌ ಪರಿಸರ ವ್ಯವಸ್ಥೆಯಲ್ಲಿ ತೊಡಗಿಸಿಕೊಂಡಿರುವ ಎನ್‌ಜಿಒಗಳು ಸೇರಿದಂತೆ ಹಲವಾರು ಕ್ಷೇತ್ರಗಳ ಪರಿಣಿತರು ಭಾಗಿಯಾಗಿದ್ದರು.

ನೆಸ್ಲೆ ಇಂಡಿಯಾ ಕಂಪನಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನ ಉತ್ಪನ್ನಗಳ ರುಚಿಯ ಜೊತೆಗೆ ಬದಲಾಗುತ್ತಿರುವ ಜೀವನ ಶೈಲಿಗೆ ತಕ್ಕಂತೆ ಗ್ರಾಹಕರ ಅಗತ್ಯತೆಗಳನ್ನು ಸಮರ್ಪಕವಾಗಿ ಪೂರೈಸುತ್ತಾ ಬಂದಿದೆ. ಗ್ರಾಹಕರಿಗೆ ಕೈಗೆಟಕುವ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ನೀಡುವ ಮೂಲಕ ಗ್ರಾಹಕರ ವಿಶ್ವಾಸ ಗಳಿಸಿಕೊಂಡಿದೆ.

lokesh

Share
Published by
lokesh
Tags: foodNestlé

Recent Posts

ನನ್ನ ಮೊದಲ ಕವಿತೆಯ ಕಥೆ….

ಕನ್ನಡದ ನಾಲ್ವರು ಖ್ಯಾತ ಕವಿಗಳು ತಮ್ಮ ಮೊದಲ ಕವಿತೆಯ ನೆನಪಲ್ಲಿ ಹೇಗೆ ಕಳೆದು ಹೋಗಿದ್ದಾರೆ ನೋಡಿ. ಬಹುಶಃ, ಮೊದಲ ಕವಿತೆ…

23 mins ago

ಅಣ್ಣಯ್ಯ ಸೇರಿ ಐವರಿಗೆ ಅಂಬೇಡ್ಕರ್‌ ಪ್ರಶಸ್ತಿ

ಬೆಂಗಳೂರು : ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್…

54 mins ago

ಮೂಡದ ಒಮ್ಮತ : ಅಮೆರಿಕ-ಇರಾನ್ 21 ಗಂಟೆಗಳ ಮಾತುಕತೆ ವಿಫಲ

ಇಸ್ಲಾಮಾಬಾದ್ : ಪಶ್ಚಿಮ ಏಷ್ಯಾ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ 21…

1 hour ago

ಬಿರುಗಾಳಿ ಸಹಿತ ಭಾರಿ ಮಳೆ : ಧರೆಗುರುಳಿದ ತೆಂಗಿನ ಮರಗಳು.

ಮಂಡ್ಯ : ತಾಲ್ಲೂಕಿನ ಹೊಳಲು ಗ್ರಾಮದಲ್ಲಿ ಶುಕ್ರವಾರ ಸಂಜೆ ಸುರಿದ ಭಾರೀ ಬಿರುಗಾಳಿ ಸಹಿತ ಮಳೆಯಿಂದ ಹೊಳಲು ಗ್ರಾಮದ ವೃತ್ತದಲ್ಲಿ…

2 hours ago

ಅಡಿಯ ಜನಾಂಗದ ಕಾಡಿನ ಮಕ್ಕಳು ನನ್ನ ಕಾಪಾಡಿದರು….

ಕೊಡಗಿನಲ್ಲಿ ಕಾಡುಪಾಲಾಗಿದ್ದ ಕೇರಳದ ಶರಣ್ಯ ಅನುಭವ ಕಥನ ನಾನು ಶರಣ್ಯ. ಕೇರಳದ ಕೋಝಿಕೋಡ್ ಜಿಲ್ಲೆಯ ನಾದಾಪುರಂನ ಯುವತಿ. ಕೊಚ್ಚಿಯಲ್ಲಿ ಐಟಿ…

4 hours ago

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

13 hours ago