ವಾಣಿಜ್ಯ

ನೆಸ್ಲೆ ಇಂಡಿಯಾಗೆ ಅತ್ಯುತ್ತಮ ಉದ್ಯಮ ಪ್ರಶಸ್ತಿ

ಮೈಸೂರು : IIMR – ICAR‌ ನ ನ್ಯೂಟ್ರಿಹಬ್‌ ಆಯೋಜಿಸಿದ್ದ ನ್ಯೂಟ್ರಿ ಕನ್ವೆನ್ಸನ್‌ ನಲ್ಲಿ ಆಹಾರ ಉತ್ಪನ್ನಗಳ ತಯಾರಿಕಾ ಕಂಪನಿಯಾದ ನೆಸ್ಲೆ ಇಂಡಿಯಾ ಅತ್ಯುತ್ತಮ ಉದ್ಯಮ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ಮೈಸೂರಿನಲ್ಲಿ IIMR – ICAR ನ ನ್ಯೂಟ್ರಿ ಹಬ್ ಆಯೋಜನೆ ಮಾಡಿದ್ದ ಅಂತರಾಷ್ಟ್ರೀಯ ನ್ಯೂಟ್ರಿ ಸೀರಿಯಲ್‌ ಕನ್ವೆನ್ಸನ್‌ 5.0 ರಲ್ಲಿ ನೆಸ್ಲೆ ಇಂಡಿಯಾ ಕಂಪನಿಯು ಅತ್ಯುತ್ತಮ ಉದ್ಯಮ ಪ್ರಾಡಕ್ಟ್‌ ಇನ್ನೋವೇಶನ್‌ ಫಾರ್‌ ಮೇನ್‌ ಸ್ಟರೀಮಿಂಗ್‌ ಮಿಲ್ಲೆಟ್ಸ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ಇನ್ನು ಪ್ರಶಸ್ತಿಯನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ನೆಸ್ಲೆ ಇಂಡಿಯಾ ಕಂಪನಿಯ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಸುರೇಶ್‌ ನಾರಾಯಣ್‌ ಅವರು ಅತ್ಯುತ್ತಮ ಉದ್ಯಮ ಪ್ರಾಡಕ್ಟ್‌ ಇನ್ನೋವೇಶನ್‌ ಫಾರ್‌ ಮೇನ್‌ ಸ್ಟರೀಮಿಂಗ್‌ ಮಿಲ್ಲೆಟ್ಸ್‌ ಅವಾರ್ಡ್‌ ಪಡೆಯುತ್ತಿರುವುದಕ್ಕೆ ನೆಸ್ಲೆ ಇಂಡಿಯಾಗೆ ಹೆಮ್ಮೆ ಅನ್ನಿಸುತ್ತಿದೆ. ನೆಸ್ಲೆ ಇಂಡಿಯಾಗೆ ಈ ಪ್ರಶಸ್ತಿ ಲಭಿಸಿರುವುದು ಆಹಾರ ಉದ್ಯಮದಲ್ಲಿನ ಉತ್ಕೃಷ್ಟತೆ ಹಾಗೂ ನಾವೀನ್ಯತೆಗೆ ಸಂಸ್ಥೆ ಹೊಂದಿರುವ ಬದ್ಧತೆಗೆ ಹಿಡಿದ ಕನ್ನಡಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಕಾರ್ಯಕ್ರಮದಲ್ಲಿ ಹಲವು ಕಂಪನಿಗಳ ಉತ್ಪಾದಕರು, ನೀತಿ ನಿರೂಪಕರು, ಉತ್ಪನ್ನಗಳ ಸಂಸ್ಕರಣಾಕಾರರು, ಶಿಕ್ಷಣ ತಜ್ಞರು, ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗಳು, ಇನ್ಕ್ಯೂಬೇಟರ್‌ ಗಳು, ಸ್ಟಾರ್ಟಪ್‌ ಗಳು, ಮೈಕ್ರೋ ಉದ್ಯಮಿಗಳು, ಮಿಲೆಟ್ಸ್‌ ಪರಿಸರ ವ್ಯವಸ್ಥೆಯಲ್ಲಿ ತೊಡಗಿಸಿಕೊಂಡಿರುವ ಎನ್‌ಜಿಒಗಳು ಸೇರಿದಂತೆ ಹಲವಾರು ಕ್ಷೇತ್ರಗಳ ಪರಿಣಿತರು ಭಾಗಿಯಾಗಿದ್ದರು.

ನೆಸ್ಲೆ ಇಂಡಿಯಾ ಕಂಪನಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನ ಉತ್ಪನ್ನಗಳ ರುಚಿಯ ಜೊತೆಗೆ ಬದಲಾಗುತ್ತಿರುವ ಜೀವನ ಶೈಲಿಗೆ ತಕ್ಕಂತೆ ಗ್ರಾಹಕರ ಅಗತ್ಯತೆಗಳನ್ನು ಸಮರ್ಪಕವಾಗಿ ಪೂರೈಸುತ್ತಾ ಬಂದಿದೆ. ಗ್ರಾಹಕರಿಗೆ ಕೈಗೆಟಕುವ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ನೀಡುವ ಮೂಲಕ ಗ್ರಾಹಕರ ವಿಶ್ವಾಸ ಗಳಿಸಿಕೊಂಡಿದೆ.

lokesh

Share
Published by
lokesh
Tags: foodNestlé

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

2 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

5 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

8 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

11 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

11 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

11 hours ago