ವಾಣಿಜ್ಯ

ಕೊಬ್ಬರಿ ಕನಿಷ್ಠ ಬೆಂಬಲ ಬೆಲೆ ಏರಿಸಿದ ಕೇಂದ್ರ ಸರ್ಕಾರ

ಕೊಬ್ಬರಿ ಬೆಲೆ ಕುಸಿತದಿಂದ ಚಿಂತೆಗೀಡಾಗಿದ್ದ ತೆಂಗು ಬೆಳೆದಾರರ ಬೆನ್ನಿಗೆ ಈಗ ಕೇಂದ್ರ ಸರ್ಕಾರ ನಿಂತಿದೆ. ಕೇಂದ್ರ ಸರ್ಕಾರವು ಕೊಬ್ಬರಿ ಬೆಂಬಲ ಬೆಲೆಯನ್ನು ಕ್ವಿಂಟಾಲ್‌ಗೆ 300 ರೂಪಾಯಿ ಏರಿಕೆ ಮಾಡಿದೆ. ಉಂಡೆ ಕೊಬ್ಬರಿಗೆ 250 ರೂಪಾಯಿಗಳನ್ನು ಏರಿಕೆ ಮಾಡಲು ತೀರ್ಮಾನಿಸಿದೆ.

ನರೇಂದ್ರ ಮೋದಿ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್‌ ಸಮಿತಿಯು 2024ರ ಋತುವಿಗೆ ಕೊಬ್ಬರಿ ಬೆಂಬಲ ಬೆಲೆಯನ್ನು ಅನುಮೋದಿಸಿದೆ ಎಂದು ಅಧಿಕೃತ ವರದಿಯಲ್ಲಿ ತಿಳಿಸಿದೆ. ಇನ್ನು ಕಳೆದ ವರ್ಷ ಸರ್ಕಾರವು ಮಿಲ್ಲಿಂಗ್ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು ಕ್ವಿಂಟಾಲ್‌ಗೆ 270 ರೂಪಾಯಿ ಹೆಚ್ಚಿಸಿದ್ದ ಕೇಂದ್ರ ಉಂಡೆ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು ಕ್ವಿಂಟಾಲ್‌ಗೆ 750 ರೂಪಾಯಿ ಹೆಚ್ಚಳ ಮಾಡಿತ್ತು.

ಕೃಷಿ ವೆಚ್ಚಗಳು ಮತ್ತು ಬೆಲೆಗಳ ಆಯೋಗದ ಶಿಫಾರಸುಗಳು ಹಾಗೂ ತೆಂಗು ಬೆಳೆಯುವ ವಿವಿಧ ರಾಜ್ಯಗಳ ಅಭಿಪ್ರಾಯಗಳ ಆಧಾರದ ಮೇಲೆ ಈ ಏರಿಕೆಯನ್ನು ಮಾಡಲಾಗಿದೆ ಎಂದು ಸಮಿತಿ ತಿಳಿಸಿದೆ. “2024ರ ಋತುವಿನಲ್ಲಿ ಮಿಲ್ಲಿಂಗ್‌ ಕೊಬ್ಬರಿಗೆ ಕ್ವಿಂಟಾಲ್‌ಗೆ 11,160 ರೂ. ನಿಗದಿಪಡಿಸಲಾಗಿದ್ದರೆ, ಉಂಡೆ ಕೊಬ್ಬರಿಗೆ 12,000 ರೂ. ನಿಗದಿಪಡಿಸಲಾಗಿದೆ. ಈ ಮೂಲಕ ಹಿಂದಿನ ಋತುವಿಗೆ ಹೋಲಿಸಿದರೆ ಮಿಲ್ಲಿಂಗ್‌ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕ್ವಿಂಟಾಲ್‌ಗೆ 300 ರೂ. ಏರಿಕೆ ಮಾಡಲಾಗಿದ್ದರೆ, ಉಂಡೆ ಕೊಬ್ಬರಿಗೆ ಕ್ವಿಂಟಾಲ್‌ಗೆ 250 ರೂ. ಹೆಚ್ಚಳ ಮಾಡಲಾಗಿದೆ” ಎಂದು ಸಮಿತಿ ಹೇಳಿಕೆ ನೀಡಿದೆ.

andolana

Share
Published by
andolana
Tags: agriculture

Recent Posts

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

48 mins ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

53 mins ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

1 hour ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

2 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

2 hours ago

ಬೆಳಗಾವಿ-ಮುಂಬೈ ಇಂಡಿಗೋ ವಿಮಾನ ಸೇವೆ: ದಿನಾಂಕ ಫಿಕ್ಸ್‌

ಬೆಳಗಾವಿ: ಗಡಿನಾಡು ಬೆಳಗಾವಿ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರಿದೆ. ಬೆಳಗಾವಿ ಮತ್ತು ನವಿ ಮುಂಬೈ ನಡುವೆ ನೇರ ವಿಮಾನ…

2 hours ago