ವಾಣಿಜ್ಯ

ಕೊಬ್ಬರಿ ಕನಿಷ್ಠ ಬೆಂಬಲ ಬೆಲೆ ಏರಿಸಿದ ಕೇಂದ್ರ ಸರ್ಕಾರ

ಕೊಬ್ಬರಿ ಬೆಲೆ ಕುಸಿತದಿಂದ ಚಿಂತೆಗೀಡಾಗಿದ್ದ ತೆಂಗು ಬೆಳೆದಾರರ ಬೆನ್ನಿಗೆ ಈಗ ಕೇಂದ್ರ ಸರ್ಕಾರ ನಿಂತಿದೆ. ಕೇಂದ್ರ ಸರ್ಕಾರವು ಕೊಬ್ಬರಿ ಬೆಂಬಲ ಬೆಲೆಯನ್ನು ಕ್ವಿಂಟಾಲ್‌ಗೆ 300 ರೂಪಾಯಿ ಏರಿಕೆ ಮಾಡಿದೆ. ಉಂಡೆ ಕೊಬ್ಬರಿಗೆ 250 ರೂಪಾಯಿಗಳನ್ನು ಏರಿಕೆ ಮಾಡಲು ತೀರ್ಮಾನಿಸಿದೆ.

ನರೇಂದ್ರ ಮೋದಿ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್‌ ಸಮಿತಿಯು 2024ರ ಋತುವಿಗೆ ಕೊಬ್ಬರಿ ಬೆಂಬಲ ಬೆಲೆಯನ್ನು ಅನುಮೋದಿಸಿದೆ ಎಂದು ಅಧಿಕೃತ ವರದಿಯಲ್ಲಿ ತಿಳಿಸಿದೆ. ಇನ್ನು ಕಳೆದ ವರ್ಷ ಸರ್ಕಾರವು ಮಿಲ್ಲಿಂಗ್ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು ಕ್ವಿಂಟಾಲ್‌ಗೆ 270 ರೂಪಾಯಿ ಹೆಚ್ಚಿಸಿದ್ದ ಕೇಂದ್ರ ಉಂಡೆ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು ಕ್ವಿಂಟಾಲ್‌ಗೆ 750 ರೂಪಾಯಿ ಹೆಚ್ಚಳ ಮಾಡಿತ್ತು.

ಕೃಷಿ ವೆಚ್ಚಗಳು ಮತ್ತು ಬೆಲೆಗಳ ಆಯೋಗದ ಶಿಫಾರಸುಗಳು ಹಾಗೂ ತೆಂಗು ಬೆಳೆಯುವ ವಿವಿಧ ರಾಜ್ಯಗಳ ಅಭಿಪ್ರಾಯಗಳ ಆಧಾರದ ಮೇಲೆ ಈ ಏರಿಕೆಯನ್ನು ಮಾಡಲಾಗಿದೆ ಎಂದು ಸಮಿತಿ ತಿಳಿಸಿದೆ. “2024ರ ಋತುವಿನಲ್ಲಿ ಮಿಲ್ಲಿಂಗ್‌ ಕೊಬ್ಬರಿಗೆ ಕ್ವಿಂಟಾಲ್‌ಗೆ 11,160 ರೂ. ನಿಗದಿಪಡಿಸಲಾಗಿದ್ದರೆ, ಉಂಡೆ ಕೊಬ್ಬರಿಗೆ 12,000 ರೂ. ನಿಗದಿಪಡಿಸಲಾಗಿದೆ. ಈ ಮೂಲಕ ಹಿಂದಿನ ಋತುವಿಗೆ ಹೋಲಿಸಿದರೆ ಮಿಲ್ಲಿಂಗ್‌ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕ್ವಿಂಟಾಲ್‌ಗೆ 300 ರೂ. ಏರಿಕೆ ಮಾಡಲಾಗಿದ್ದರೆ, ಉಂಡೆ ಕೊಬ್ಬರಿಗೆ ಕ್ವಿಂಟಾಲ್‌ಗೆ 250 ರೂ. ಹೆಚ್ಚಳ ಮಾಡಲಾಗಿದೆ” ಎಂದು ಸಮಿತಿ ಹೇಳಿಕೆ ನೀಡಿದೆ.

andolana

Share
Published by
andolana
Tags: agriculture

Recent Posts

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

2 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

2 hours ago

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

6 hours ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

6 hours ago

ಓದುಗರ ಪತ್ರ: ಕಾಲಾವಕಾಶ ನೀಡಬೇಕು

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…

6 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಜೆಪಿ ಷಡ್ಯಂತ್ರದಿಂದ ಹಲವು ಪಕ್ಷಗಳು ಒಡಕಿನತ್ತ?

ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…

6 hours ago