ವಾಣಿಜ್ಯ

ಇನ್ಫೋಸಿಸ್‌ ನಾರಾಯಣ ಮೂರ್ತಿಗೆ ಡೀಪ್‌ ಫೇಕ್‌ ಕಾಟ

ಬೆಂಗಳೂರು : ಚಿತ್ರರಂಗದ ಹಲವು ನಟಿಮಣಿಯರನ್ನು ಕಾಡಿದ್ದ ಡೀಪ್‌ ಫೇಕ್‌ ಸಂಕಷ್ಟ ಇದೀಗ ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿಯವರಿಗೂ ಎದುರಾಗಿದೆ.

ನಾರಾಯಣ ಮೂರ್ತಿಯವರು ತಮ್ಮ ಹಾಗೂ ಇಲಾನ್‌ ಮಸ್ಕ್‌ ಅವರ ತಂಡಗಳು ವಿಶ್ವದ ಮೊದಲ ಕ್ವಾಂಟಮ್‌ ಕಂಪ್ಯೂಟರಿಂಗ್‌ ಸಾಫ್ಟ್ ವೇರ್ ಅಭಿವೃದ್ಧಿ ಪಡಿಸಿವೆ. ಕ್ವಾಂಟಮ್‌ ಎಐನಲ್ಲಿ ನೀವು ಮೊದಲ ದಿನವೇ 3000 ಡಾಲರ್‌ ವರೆಗೆ ಹಣ ಸಂಪಾದನೆ ಮಾಡಬಹುದು ಎಂದು ಹೇಳಿರುವ ಡೀಪ್‌ ಫೇಕ್‌ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.

ವೈರಲ್‌ ಆಗಿರುವ ವಿಡಿಯೋಗಳನ್ನು ಡೀಪ್‌ ಫೇಕ್‌ ತಂತ್ರಜ್ಞಾನ ಬಳಸಿ ಎಡಿಟ್‌ ಮಾಡಲಾಗಿದೆ ಎಂದು ತಿಳಿದುಬಂದಿದೆ.

ನಟಿಮಣಿಯರನ್ನು ಟಾರ್ಗೆಟ್‌ ಮಾಡಿದ್ದ ಡೀಪ್‌ ಫೇಕ್‌ ತಂತ್ರಜ್ಞಾನ ಇದೀಗ ತಂತ್ರಜ್ಞಾನದ ಮುಖಂಡರನ್ನೇ ಟಾರ್ಗೆಟ್‌ ಮಾಡಿದೆ.

ಇದೀಗ ವೈರಲ್‌ ಆಗಿದ್ದ ನಾರಾಯಣಮೂರ್ತಿಯವರ ಡೀಪ್‌ ಫೇಕ್‌ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಿಂದ ಡಿಲಿಟ್‌ ಮಾಡಲಾಗಿದೆ.

ವೈರಲ್‌ ವಿಡಿಯೋದಲ್ಲಿ ಕ್ವಾಂಟಮ್‌ ಎಐಗೆ ಕೆಲಸಕ್ಕೆ ಸೇರಿ ಎಂದಿರುವ ನಾರಾಯಣ ಮೂರ್ತಿಯವರು ಇಲ್ಲಿ ಮೊದಲನೇ ದಿನವೇ 3000 ರೂ ವರೆಗೆ ಸಂಪಾದನೆ ಮಾಡಬಹುದಾಗಿದೆ ಎಂದಿದ್ದಾರೆ.

ಅಸಲಿಗೆ ನಾರಾಯಣ ಮೂರ್ತಿ ಅವರು ಬ್ಯುಸಿನೆಸ್‌ ಟುಡೆ ತಾಣಗಳೊಂದಿಗಿನ ಸಂದರ್ಶನದ ವಿಡಿಯೋಗಳನ್ನು ಬಳಸಿಕೊಂಡು ಈ ಫೇಕ್‌ ವಿಡಿಯೋಗಳನ್ನು ಎಡಿಟ್‌ ಮಾಡಲಾಗದೆ.

lokesh

Share
Published by
lokesh

Recent Posts

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

1 min ago

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

48 mins ago

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…

1 hour ago

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ…

1 hour ago

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…

2 hours ago

ರಾಜ್ಯಪಾಲರು-ಸರ್ಕಾರದ ಸಂಘರ್ಷದ ನಡುವೆಯೇ ವಿಧಾನಸೌಧದಲ್ಲಿ ಅಧಿವೇಶನ: ಪೊಲೀಸರಿಂದ ಭದ್ರತೆ

ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…

3 hours ago