ವಾಣಿಜ್ಯ

ಇನ್ಫೋಸಿಸ್‌ ನಾರಾಯಣ ಮೂರ್ತಿಗೆ ಡೀಪ್‌ ಫೇಕ್‌ ಕಾಟ

ಬೆಂಗಳೂರು : ಚಿತ್ರರಂಗದ ಹಲವು ನಟಿಮಣಿಯರನ್ನು ಕಾಡಿದ್ದ ಡೀಪ್‌ ಫೇಕ್‌ ಸಂಕಷ್ಟ ಇದೀಗ ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿಯವರಿಗೂ ಎದುರಾಗಿದೆ.

ನಾರಾಯಣ ಮೂರ್ತಿಯವರು ತಮ್ಮ ಹಾಗೂ ಇಲಾನ್‌ ಮಸ್ಕ್‌ ಅವರ ತಂಡಗಳು ವಿಶ್ವದ ಮೊದಲ ಕ್ವಾಂಟಮ್‌ ಕಂಪ್ಯೂಟರಿಂಗ್‌ ಸಾಫ್ಟ್ ವೇರ್ ಅಭಿವೃದ್ಧಿ ಪಡಿಸಿವೆ. ಕ್ವಾಂಟಮ್‌ ಎಐನಲ್ಲಿ ನೀವು ಮೊದಲ ದಿನವೇ 3000 ಡಾಲರ್‌ ವರೆಗೆ ಹಣ ಸಂಪಾದನೆ ಮಾಡಬಹುದು ಎಂದು ಹೇಳಿರುವ ಡೀಪ್‌ ಫೇಕ್‌ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.

ವೈರಲ್‌ ಆಗಿರುವ ವಿಡಿಯೋಗಳನ್ನು ಡೀಪ್‌ ಫೇಕ್‌ ತಂತ್ರಜ್ಞಾನ ಬಳಸಿ ಎಡಿಟ್‌ ಮಾಡಲಾಗಿದೆ ಎಂದು ತಿಳಿದುಬಂದಿದೆ.

ನಟಿಮಣಿಯರನ್ನು ಟಾರ್ಗೆಟ್‌ ಮಾಡಿದ್ದ ಡೀಪ್‌ ಫೇಕ್‌ ತಂತ್ರಜ್ಞಾನ ಇದೀಗ ತಂತ್ರಜ್ಞಾನದ ಮುಖಂಡರನ್ನೇ ಟಾರ್ಗೆಟ್‌ ಮಾಡಿದೆ.

ಇದೀಗ ವೈರಲ್‌ ಆಗಿದ್ದ ನಾರಾಯಣಮೂರ್ತಿಯವರ ಡೀಪ್‌ ಫೇಕ್‌ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಿಂದ ಡಿಲಿಟ್‌ ಮಾಡಲಾಗಿದೆ.

ವೈರಲ್‌ ವಿಡಿಯೋದಲ್ಲಿ ಕ್ವಾಂಟಮ್‌ ಎಐಗೆ ಕೆಲಸಕ್ಕೆ ಸೇರಿ ಎಂದಿರುವ ನಾರಾಯಣ ಮೂರ್ತಿಯವರು ಇಲ್ಲಿ ಮೊದಲನೇ ದಿನವೇ 3000 ರೂ ವರೆಗೆ ಸಂಪಾದನೆ ಮಾಡಬಹುದಾಗಿದೆ ಎಂದಿದ್ದಾರೆ.

ಅಸಲಿಗೆ ನಾರಾಯಣ ಮೂರ್ತಿ ಅವರು ಬ್ಯುಸಿನೆಸ್‌ ಟುಡೆ ತಾಣಗಳೊಂದಿಗಿನ ಸಂದರ್ಶನದ ವಿಡಿಯೋಗಳನ್ನು ಬಳಸಿಕೊಂಡು ಈ ಫೇಕ್‌ ವಿಡಿಯೋಗಳನ್ನು ಎಡಿಟ್‌ ಮಾಡಲಾಗದೆ.

lokesh

Share
Published by
lokesh

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

3 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

5 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

5 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

6 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

9 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

9 hours ago