ವಾಣಿಜ್ಯ

ನೀತಾ ಅಂಬಾನಿ ಧರಿಸಿದ್ದ ವಾಚ್‌ ಬೆಲೆ ಎಷ್ಟು ಗೊತ್ತಾ ?

ಭಾರತ ದೇಶದ ಅತ್ಯಂತ ಶ್ರೀಮಂತ ಮುಖೇಶ್‌ ಅಂಬಾನಿ ಪತ್ನಿ ನೀತಾ ಅಂಬಾನಿ ತಮ್ಮ ಐಶಾರಾಮಿ ಜೀವನ ಶೈಲಿಯಿಂದ ಆಗಾಗ ಸುದ್ದಿಯಲ್ಲಿರುತ್ತಾರೆ. ನೀತಾ ಅಂಬಾನಿ ಅವರಿಗೆ ಅತಿ ದುಬಾರಿ ಹಾಗೂ ಅಪರೂಪದ ವಸ್ತುಗಳನ್ನು ಸಂಗ್ರಹಿಸುವ ಹವ್ಯಾಸವಿದೆ. ಇದೀಗ ನೀತಾ ಅಂಬಾನಿ ಪಾರ್ಟಿಯೋದರಲ್ಲಿ ಧರಿಸಿದ್ದ ವಾಚ್‌ ನ ಬೆಲೆ ಎಲ್ಲರೂ ಹುಬ್ಬೇರಿಸುವಂತೆ ಮಾಡಿದೆ.

ನೀತಾ ಅಂಬಾನಿ ಅವರು ಅತಿ ದುಬಾರಿ ಬೆಲೆಯ ಬಟ್ಟೆಗಳು, ಬ್ಯಾಗ್‌, ಸ್ಲಿಪ್ಪರ್ ಸೇರಿದಂತೆ ಇನ್ನಿತರ ವಸ್ತುಗಳ ಸಂಗ್ರಹವನ್ನು ಹೊಂದಿದ್ದಾರೆ. ಇದೀಗ ಅವರ ವಾಚ್‌ ಬೆಲೆ ಕೇಳಿ ಎಲ್ಲರೂ ದಂಗಾಗಿದ್ದಾರೆ.

ನೀತಾ ಅಂಬಾನಿ ಧರಿಸಿದ್ದ ವಿಶಿಷ್ಟವಾದ ವಾಚ್‌ ನ ಬೆಲೆ ಬರೋಬ್ಬರಿ 3 ಕೋಟಿ ರೂ. ಇತ್ತೀಚೆಗೆ ನೀತಾ ಅಂಬಾನಿಯವರು ತಮ್ಮ ಮಗಳು ಇಶಾ ಅಂಬಾನಿ ಅವರ ಮಕ್ಕಳ ಹುಟ್ಟು ಹಬ್ಬದಲ್ಲಿ ಜಾಕೋಬ್‌ ಅಂಡ್‌ ಕೋ ಆಸ್ಟ್ರೋನೋಮಿಯಾ ಫ್ಲೂರ್ಸ್‌ ಡಿ ಜಾರ್ಡಿನ್‌ ವಾಚ್‌ ಅನ್ನು ಧರಿಸಿದ್ದಾರೆ.

ನೀತಾ ಅಂಬಾನಿಯವರು ಧರಿಸಿದ್ದ ವಾಚ್‌ ನ ವಿನ್ಯಾಸ ಅತ್ಯಾಕರ್ಷಣೀಯವಾಗಿದೆ. ಇದು 18k ಚಿನ್ನದ ಕೇಸ್‌ ಹೊಂದಿದೆ. ಹಸಿರು, ನೀಲಿ, ಕೆಂಪು, ಹಳದಿ, ಗುಲಾಬಿ ಬಣ್ಣಗಳನ್ನೊಳಗೊಂಡಿರುವ ಈ ವಾಚ್‌ ರೋಮನ್‌ ಅಂಕಿಗಳಲ್ಲಿ ಸಮಯವನ್ನು ಪ್ರದರ್ಶಿಸುತ್ತದೆ.

ವಾಚ್‌ ನ ಸುತ್ತಲು ಎರಡು ರಿಂಗ್‌ ಗಳ ವಿನ್ಯಾಸವಿದೆ. ಒಳಗೆ ಚಿಟ್ಟೆಯಾಕಾರದ ಹಾಗೂ ನಕ್ಷತ್ರಾಕಾರದ ವಿನ್ಯಾಸವಿದೆ.

ಸೂಕ್ಷ್ಮವಾದ ಚಿಟ್ಟೆಯಾಕಾರದ ಹಾರುವ ಟೂರ್‌ ಬಿಲ್ಲನ್‌, ಸಮಯ ಪ್ರದರ್ಶನ ಹಾಗೂ ಮೇಲಿನ ಹಂತದಲ್ಲಿರುವ ಗುಲಾಬಿ ನೀಲಮಣಿ ಹಾಗೂ ಹೂವುಗಳು ಹತ್ತು ನಿಮಿಷಗಳಲ್ಲಿ ಡಯಲ್‌ ಸುತ್ತಲೂ ಪ್ರದಕಷಿಣಾಕಾರದಲ್ಲಿ ತಿರುಗುತ್ತವೆ. ಆದರೆ ಗುಲಾಬಿ ನೀಲಮಣಿಗಳೊಂದಿಗೆ ಹೊಂದಿಸಲಾಗಿರುವ ಮದರ್‌ ಆಫ್‌ ಪರ್ಲ್‌ ಬೇಸ್‌ ಅದೇ ವೇಗದಲ್ಲಿ ಅಪ್ರದಕ್ಷಿಣಾಕಾರವಾಗಿ ತಿರುಗುತ್ತದೆ.

ಇತ್ತೀಚೆಗೆ ಮುಖೇಶ್‌ ಅಂಬಾನಿಯವರು ತಮ್ಮ ಪತ್ನಿ ನೀತಾ ಅಂಬಾನಿ ಅವರಿಗೆ ದುಬಾರಿ ಬೆಲೆಯ ರೋಲ್ಸ್‌ ರಾಯ್ಸ್‌ ಕಾರ್‌ ಅನ್ನು ಉಡುಗೊರೆಯನ್ನಾಗಿ ನೀಡಿದ್ದರು.

ಕಪ್ಪು ಬಣ್ಣದ ಬ್ಯಾಡ್ಜ್‌ ಆವೃತ್ತಿಯನ್ನೋಳಗೊಂಡ ಐಶಾರಾಮಿ ಕಾರು ಇದಾಗಿದೆ. ಈ ಕಾರಿನ ಆನ್‌ ರೋಡ್‌ ಬೆಲೆ ಸುಮಾರು 10 ಕೋಟಿ ರೂ. ಆಗುತ್ತದೆ. ಇದು ಭಾರತದ ಅತ್ಯಂದ ದುಬಾರಿ ಕಾರು ಹಾಗೂ ದುಬಾರಿ ಉಡುಗೊರೆಯಾಗಿದೆ.

lokesh

Share
Published by
lokesh

Recent Posts

ಓದುಗರ ಪತ್ರ: ಸುಂಕ ಕದನಕೆ ತೆರೆ!

ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…

1 hour ago

ಓದುಗರ ಪತ್ರ: ಶಾಲೆಗೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…

1 hour ago

ಓದುಗರ ಪತ್ರ: ಜಿಲ್ಲಾ ನ್ಯಾಯಾಲಯಗಳಿಗೆ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…

1 hour ago

ಓದುಗರ ಪತ್ರ: ಬೈಕ್ ವ್ಹೀಲಿಂಗ್ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಿ

ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…

1 hour ago

ಓದುಗರ ಪತ್ರ: ಮಹಾರಾಣಿ ಕಾಲೇಜಿನಲ್ಲಿ ಕ್ಯಾಂಟೀನ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…

1 hour ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಸೆರೆಬ್ರಲ್ ಪಾಲ್ಸಿಯನ್ನು ಮಣಿಸಿ ಬದುಕು ಕಟ್ಟಿಕೊಂಡ ಸುಮಿತ್

‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…

1 hour ago