ವಾಣಿಜ್ಯ

ಡಾಲರ್ ಎದುರು ರೂಪಾಯಿ ದರ ಚೇತರಿಕೆ.. 8 ಪೈಸೆ ಏರಿಕೆಯಾಗಿ 81.25ಕ್ಕೆ ಸ್ಥಿರ

ಮುಂಬೈ: ಡಾಲರ್​ ಎದುರು ಸತತವಾಗಿ ದುರ್ಬಲಗೊಂಡು ತೀವ್ರ ನಷ್ಟ ಅನುಭವಿಸಿದ್ದ ರೂಪಾಯಿ ಸೋಮವಾರದ ಆರಂಭಿಕ ವಹಿವಾಟಿನಲ್ಲಿ 8 ಪೈಸೆಯಷ್ಟು ಹೆಚ್ಚಳವಾಗಿ ಚೇತರಿಕೆ ದಾಖಲಿಸಿದೆ. ಸದ್ಯ ಡಾಲರ್​ ಎದುರು ಭಾರತದ ರೂಪಾಯಿ 81.25 ರಷ್ಟಿದೆ.
2 ದಿನಗಳ ಹಿಂದೆ ರೂಪಾಯಿ ಮೌಲ್ಯ ಡಾಲರ್ ಎದುರು 7 ಪೈಸೆ ಇಳಿಕೆಯಾಗಿ 81.33ಕ್ಕೆ ಕುಸಿದಿತ್ತು. ಇಂದು ಅಂತರಬ್ಯಾಂಕ್ ವಿದೇಶಿ ವಿನಿಮಯದಲ್ಲಿ ರೂಪಾಯಿ 81.26 ರಲ್ಲಿ ವಹಿವಾಟು ಆರಂಭಿಸಿತು. ನಂತರ ಅದು 81.25 ಕ್ಕೆ ತಲುಪಿ ಅತ್ಯಲ್ಪ ಚೇತರಿಕೆ ಕಂಡಿತು. ಆರಂಭಿಕ ವಹಿವಾಟು ಮುಕ್ತಾಯಕ್ಕೂ ಮೊದಲು ರೂಪಾಯಿ 8 ಪೈಸೆಯಷ್ಟು ಏರಿಕೆಯನ್ನು ದಾಖಲಿಸಿತು.ಈ ಮಧ್ಯೆ ವಿವಿಧ ರಾಷ್ಟ್ರಗಳ ಆರು ಕರೆನ್ಸಿಗಳ ಮುಂದೆ ಡಾಲರ್ ಶೇಕಡಾ 0.37 ರಷ್ಟು ಕುಸಿದು 104.15 ಕ್ಕೆ ತಲುಪಿದೆ. ವಿದೇಶಿ ವಿನಿಮಯ ವ್ಯಾಪಾರಿಗಳು ದೇಶೀಯ ಷೇರುಗಳ ಮೇಲೆ ಹೂಡಿಕೆ ಹೆಚ್ಚಿಸಿದ ಕಾರಣ ರೂಪಾಯಿ ತುಸು ಏರಿಕೆ ಕಂಡಿದೆ.
ಕಚ್ಚಾ ತೈಲ ದರ ಏರಿಕೆ: ರೂಪಾಯಿ ದರ ಇಳಿಕೆ ಕಂಡ ಬೆನ್ನಲ್ಲೇ, ಜಾಗತಿಕ ಕಚ್ಚಾ ತೈಲ ದರ ಪ್ರತಿ ಬ್ಯಾರೆಲ್‌ಗೆ ಶೇಕಡಾ 1.05 ರಷ್ಟು ಏರಿಕೆ ಕಂಡು 86.47 ರಷ್ಟಿದೆ.ಸೆನ್ಸೆಕ್ಸ್​ ಪಾಯಿಂಟ್ಸ್​ ಕುಸಿತ: ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಬಿಎಸ್‌ಇ ಸೆನ್ಸೆಕ್ಸ್ 139.99 ಪಾಯಿಂಟ್ ಕುಸಿತ ಕಂಡು 62,728.51 ಕ್ಕೆ ವಹಿವಾಟು ನಡೆಸುತ್ತಿದೆ. ಎನ್‌ಎಸ್‌ಇ ನಿಫ್ಟಿ 22.60 ಪಾಯಿಂಟ್‌ ಇಳಿದು 18,673.50 ಕ್ಕೆ ತಲುಪಿದೆ.

andolanait

Share
Published by
andolanait

Recent Posts

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

3 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

3 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

4 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

5 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

5 hours ago

ಅಧಿಕಾರ ಶಾಶ್ವತವಲ್ಲ : ‘ನನ್ನ ತಂದೆಯ ಇಚ್ಛೆಯಂತೆಯೇ ನಡೆಯುವೆ’ ; ಯತೀಂದ್ರ

ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…

5 hours ago