ವಾಣಿಜ್ಯ

ಡಾಲರ್ ಎದುರು ರೂಪಾಯಿ ದರ ಚೇತರಿಕೆ.. 8 ಪೈಸೆ ಏರಿಕೆಯಾಗಿ 81.25ಕ್ಕೆ ಸ್ಥಿರ

ಮುಂಬೈ: ಡಾಲರ್​ ಎದುರು ಸತತವಾಗಿ ದುರ್ಬಲಗೊಂಡು ತೀವ್ರ ನಷ್ಟ ಅನುಭವಿಸಿದ್ದ ರೂಪಾಯಿ ಸೋಮವಾರದ ಆರಂಭಿಕ ವಹಿವಾಟಿನಲ್ಲಿ 8 ಪೈಸೆಯಷ್ಟು ಹೆಚ್ಚಳವಾಗಿ ಚೇತರಿಕೆ ದಾಖಲಿಸಿದೆ. ಸದ್ಯ ಡಾಲರ್​ ಎದುರು ಭಾರತದ ರೂಪಾಯಿ 81.25 ರಷ್ಟಿದೆ.
2 ದಿನಗಳ ಹಿಂದೆ ರೂಪಾಯಿ ಮೌಲ್ಯ ಡಾಲರ್ ಎದುರು 7 ಪೈಸೆ ಇಳಿಕೆಯಾಗಿ 81.33ಕ್ಕೆ ಕುಸಿದಿತ್ತು. ಇಂದು ಅಂತರಬ್ಯಾಂಕ್ ವಿದೇಶಿ ವಿನಿಮಯದಲ್ಲಿ ರೂಪಾಯಿ 81.26 ರಲ್ಲಿ ವಹಿವಾಟು ಆರಂಭಿಸಿತು. ನಂತರ ಅದು 81.25 ಕ್ಕೆ ತಲುಪಿ ಅತ್ಯಲ್ಪ ಚೇತರಿಕೆ ಕಂಡಿತು. ಆರಂಭಿಕ ವಹಿವಾಟು ಮುಕ್ತಾಯಕ್ಕೂ ಮೊದಲು ರೂಪಾಯಿ 8 ಪೈಸೆಯಷ್ಟು ಏರಿಕೆಯನ್ನು ದಾಖಲಿಸಿತು.ಈ ಮಧ್ಯೆ ವಿವಿಧ ರಾಷ್ಟ್ರಗಳ ಆರು ಕರೆನ್ಸಿಗಳ ಮುಂದೆ ಡಾಲರ್ ಶೇಕಡಾ 0.37 ರಷ್ಟು ಕುಸಿದು 104.15 ಕ್ಕೆ ತಲುಪಿದೆ. ವಿದೇಶಿ ವಿನಿಮಯ ವ್ಯಾಪಾರಿಗಳು ದೇಶೀಯ ಷೇರುಗಳ ಮೇಲೆ ಹೂಡಿಕೆ ಹೆಚ್ಚಿಸಿದ ಕಾರಣ ರೂಪಾಯಿ ತುಸು ಏರಿಕೆ ಕಂಡಿದೆ.
ಕಚ್ಚಾ ತೈಲ ದರ ಏರಿಕೆ: ರೂಪಾಯಿ ದರ ಇಳಿಕೆ ಕಂಡ ಬೆನ್ನಲ್ಲೇ, ಜಾಗತಿಕ ಕಚ್ಚಾ ತೈಲ ದರ ಪ್ರತಿ ಬ್ಯಾರೆಲ್‌ಗೆ ಶೇಕಡಾ 1.05 ರಷ್ಟು ಏರಿಕೆ ಕಂಡು 86.47 ರಷ್ಟಿದೆ.ಸೆನ್ಸೆಕ್ಸ್​ ಪಾಯಿಂಟ್ಸ್​ ಕುಸಿತ: ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಬಿಎಸ್‌ಇ ಸೆನ್ಸೆಕ್ಸ್ 139.99 ಪಾಯಿಂಟ್ ಕುಸಿತ ಕಂಡು 62,728.51 ಕ್ಕೆ ವಹಿವಾಟು ನಡೆಸುತ್ತಿದೆ. ಎನ್‌ಎಸ್‌ಇ ನಿಫ್ಟಿ 22.60 ಪಾಯಿಂಟ್‌ ಇಳಿದು 18,673.50 ಕ್ಕೆ ತಲುಪಿದೆ.

andolanait

Share
Published by
andolanait

Recent Posts

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

7 hours ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

7 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ…

7 hours ago

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು: 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…

8 hours ago

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

11 hours ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

12 hours ago