ವಾಣಿಜ್ಯ

ಡಾಲರ್ ಎದುರು ರೂಪಾಯಿ ದರ ಚೇತರಿಕೆ.. 8 ಪೈಸೆ ಏರಿಕೆಯಾಗಿ 81.25ಕ್ಕೆ ಸ್ಥಿರ

ಮುಂಬೈ: ಡಾಲರ್​ ಎದುರು ಸತತವಾಗಿ ದುರ್ಬಲಗೊಂಡು ತೀವ್ರ ನಷ್ಟ ಅನುಭವಿಸಿದ್ದ ರೂಪಾಯಿ ಸೋಮವಾರದ ಆರಂಭಿಕ ವಹಿವಾಟಿನಲ್ಲಿ 8 ಪೈಸೆಯಷ್ಟು ಹೆಚ್ಚಳವಾಗಿ ಚೇತರಿಕೆ ದಾಖಲಿಸಿದೆ. ಸದ್ಯ ಡಾಲರ್​ ಎದುರು ಭಾರತದ ರೂಪಾಯಿ 81.25 ರಷ್ಟಿದೆ.
2 ದಿನಗಳ ಹಿಂದೆ ರೂಪಾಯಿ ಮೌಲ್ಯ ಡಾಲರ್ ಎದುರು 7 ಪೈಸೆ ಇಳಿಕೆಯಾಗಿ 81.33ಕ್ಕೆ ಕುಸಿದಿತ್ತು. ಇಂದು ಅಂತರಬ್ಯಾಂಕ್ ವಿದೇಶಿ ವಿನಿಮಯದಲ್ಲಿ ರೂಪಾಯಿ 81.26 ರಲ್ಲಿ ವಹಿವಾಟು ಆರಂಭಿಸಿತು. ನಂತರ ಅದು 81.25 ಕ್ಕೆ ತಲುಪಿ ಅತ್ಯಲ್ಪ ಚೇತರಿಕೆ ಕಂಡಿತು. ಆರಂಭಿಕ ವಹಿವಾಟು ಮುಕ್ತಾಯಕ್ಕೂ ಮೊದಲು ರೂಪಾಯಿ 8 ಪೈಸೆಯಷ್ಟು ಏರಿಕೆಯನ್ನು ದಾಖಲಿಸಿತು.ಈ ಮಧ್ಯೆ ವಿವಿಧ ರಾಷ್ಟ್ರಗಳ ಆರು ಕರೆನ್ಸಿಗಳ ಮುಂದೆ ಡಾಲರ್ ಶೇಕಡಾ 0.37 ರಷ್ಟು ಕುಸಿದು 104.15 ಕ್ಕೆ ತಲುಪಿದೆ. ವಿದೇಶಿ ವಿನಿಮಯ ವ್ಯಾಪಾರಿಗಳು ದೇಶೀಯ ಷೇರುಗಳ ಮೇಲೆ ಹೂಡಿಕೆ ಹೆಚ್ಚಿಸಿದ ಕಾರಣ ರೂಪಾಯಿ ತುಸು ಏರಿಕೆ ಕಂಡಿದೆ.
ಕಚ್ಚಾ ತೈಲ ದರ ಏರಿಕೆ: ರೂಪಾಯಿ ದರ ಇಳಿಕೆ ಕಂಡ ಬೆನ್ನಲ್ಲೇ, ಜಾಗತಿಕ ಕಚ್ಚಾ ತೈಲ ದರ ಪ್ರತಿ ಬ್ಯಾರೆಲ್‌ಗೆ ಶೇಕಡಾ 1.05 ರಷ್ಟು ಏರಿಕೆ ಕಂಡು 86.47 ರಷ್ಟಿದೆ.ಸೆನ್ಸೆಕ್ಸ್​ ಪಾಯಿಂಟ್ಸ್​ ಕುಸಿತ: ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಬಿಎಸ್‌ಇ ಸೆನ್ಸೆಕ್ಸ್ 139.99 ಪಾಯಿಂಟ್ ಕುಸಿತ ಕಂಡು 62,728.51 ಕ್ಕೆ ವಹಿವಾಟು ನಡೆಸುತ್ತಿದೆ. ಎನ್‌ಎಸ್‌ಇ ನಿಫ್ಟಿ 22.60 ಪಾಯಿಂಟ್‌ ಇಳಿದು 18,673.50 ಕ್ಕೆ ತಲುಪಿದೆ.

andolanait

Share
Published by
andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

5 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

6 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

7 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

8 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

12 hours ago