ಮೈಸೂರು: ಕೊರೊನಾ ಕಾರಣದಿಂದ ಎರಡು ವರ್ಷಗಳ ಕಾಲ ಹೊಸ ವರ್ಷದ ಆಚರಣೆಯಿಂದ ದೂರವಿದ್ದ ಜನತೆ ಹೊಸ ವರ್ಷ 2023ನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.
ಹೊಸ ವರುಷಕ್ಕೆ ರಾಜ್ಯದಲ್ಲಿ ಮದ್ಯದ ಹೊಳೆಯೇ ಹರಿದಿದೆ. ಅಬಕಾರಿ ಇಲಾಖೆಗೆ ಕೋಟ್ಯಂತರ ರೂ ಆದಾಯ ಹರಿದು ಬಂದಿದ್ದು ನಮ್ಮಿಂದಲೇ ಸರಕಾರ ನಡೆಯುತ್ತದೆ ಎಂಬ ಕುಡುಕರ ಘೋಷಣೆ ಒಂದು ದಿನದ ಮಟ್ಟಿಗೆ ನಿಜವಾಗಿದೆ. ಕಳೆದ ಎರಡು ವರ್ಷಗಳಲ್ಲಿ ಅಬಕಾರಿ ಆದಾಯದಲ್ಲಿ ಕುಸಿತವಾಗಿತ್ತು.
ಈ ಬಾರಿ ನಿರೀಕ್ಷೆ ಮೀರಿ ಆದಾಯ ಬಂದಿದೆ. ಡಿಸೆಂಬರ್ 23 ರಿಂದ 31 ರ ತನಕ ರಾಜ್ಯದಲ್ಲಿ ಬರೋಬ್ಬರಿ 20.66 ಲಕ್ಷ ಲೀಟರ್ ಐಎಂ ಎಲ್ ಮದ್ಯ ಮಾರಾಟವಾಗಿದೆ. ಡಿಸೆಂಬರ್ 31 ರಂದು ಒಂದೇ ದಿನ 3 ಲಕ್ಷ ಲೀಟರ್ ಬಿಯರ್ ಮಾರಾಟ ವಾಗಿದ್ದರೆ, 2.41 ಲಕ್ಷ ಲೀಟರ್ ಮದ್ಯ ಮಾರಾಟವಾಗಿದೆ.
ಡಿಸೆಂಬರ್ 23ರಿಂದ ಡಿಸೆಂಬರ್ 31ರೊ ಳಗೆ 20.66 ಲಕ್ಷ ಲೀಟರ್ ಐಎಂಎಲ್ ಮದ್ಯ ಹಾಗೂ 15.04 ಲಕ್ಷ . ಬಿಯರ್ ಮಾರಾಟ ಆಗಿದ್ದು ಒಟ್ಟು ಒಂಬತ್ತು ದಿನಗಳಲ್ಲಿ 1,262 ಕೋಟಿ ರೂಪಾಯಿ ಹಣ ಗಳಿಕೆಯಾಗಿದೆ. ಇದರಿಂದ ಅಬಕಾ ರಿ ಇಲಾಖೆಯ ಬೊಕ್ಕಸಕ್ಕೆ 657 ಕೋಟಿ ರೂ . ಹರಿದು ಬಂದಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…