ವಾಣಿಜ್ಯ

EPF: 2023-24ನೇ ಸಾಲಿನ ಕಾರ್ಮಿಕರ ಭವಿಷ್ಯ ನಿಧಿಗೆ ಬಡ್ಡಿ ದರ ನಿಗದಿ; ಕಳೆದ 3 ವರ್ಷಗಳಲ್ಲೇ ಗರಿಷ್ಠ

ಕಾರ್ಮಿಕರ/ಉದ್ಯೋಗಿಗಳ ಭವಿಷ್ಯ ನಿಧಿ ( ಇಪಿಎಫ್‌ ) ಠೇವಣಿ ಮೇಲಿನ 2023-24ನೇ ಸಾಲಿನ ಬಡ್ಡಿ ದರವನ್ನು ಶೇ.8.25ರಷ್ಟು ನಿಗದಿಪಡಿಸಲಾಗಿದೆ. ಇದು ಕಳೆದ 3 ವರ್ಷಗಳಲ್ಲಿದ್ದ ಬಡ್ಡಿ ದರಕ್ಕೆ ಹೋಲಿಸಿದರೆ ಗರಿಷ್ಠವಾಗಿದೆ.

2023ರಲ್ಲಿ ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯು 2022 – 23ನೇ ಸಾಲಿನ ಠೇವಣಿ ಮೇಲಿನ ಬಡ್ಡಿ ದರವನ್ನು ಶೇ. 8.15ಗೆ ನಿಗದಿಪಡಿಸಿತ್ತು. 2021-22 ಸಾಲಿನಲ್ಲಿ ಈ ಬಡ್ಡಿ ದರ ಶೇ. 8.10ರಷ್ಟಿತ್ತು. ಇನ್ನು 2020-21ರಲ್ಲಿ ಇದು ಶೇ. 8.5ರಷ್ಟಿತ್ತು.

ಈ ಕುರಿತಾಗಿ ಕಾರ್ಮಿಕ ಇಲಾಖೆ ಹೇಳಿಕೆಯನ್ನು ಬಿಡುಗಡೆ ಮಾಡಲಾಗಿದ್ದು, ʼಆರ್ಥಿಕ ವರ್ಷ 2024ಕ್ಕೆ ಮಂಡಳಿಯು ಈ ವರ್ಷ ಇಪಿಎಫ್‌ ಸದಸ್ಯರ ಖಾತೆಗಳಿಗೆ 1.07 ಲಕ್ಷ ಕೋಟಿ ರೂಪಾಯಿಗಳನ್ನು ಹಂಚಲು ನಿರ್ಧರಿಸಿದೆ. ಈ ಹಣವು 13 ಲಕ್ಷ ಕೋಟಿ ರೂಪಾಯಿಗೆ ಬಂದ ಬಡ್ಡಿ ದರವಾಗಿದೆ. ಕಳೆದ ಸಾಲಿನಲ್ಲಿ 11.02 ಲಕ್ಷ ಕೋಟಿ ರೂಪಾಯಿಗೆ 91.15 ಸಾವಿರ ಕೋಟಿ ರೂಪಾಯಿ ಬಡ್ಡಿ ಲಭಿಸಿತ್ತುʼ ಎಂದು ತಿಳಿಸಿದೆ.

 

andolana

Share
Published by
andolana

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

5 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

5 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

6 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

6 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

7 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

7 hours ago