ವಾಣಿಜ್ಯ

ಅಮೇರಿಕಾದ ಕಾರ್ನಿಂಗ್‌ನಿಂದ ಭಾರತದಲ್ಲಿ ಕಾರ್ಖಾನೆ ಸ್ಥಾಪನೆ

ಚೆನ್ನೈ : ಐಫೋನ್ ಗಳಿಗೆ ಗೊರಿಲ್ಲಾ ಗ್ಲಾಸ್‌ ಪೂರೈಕೆ ಮಾಡುವ ಅಮೇರಿಕಾ ಮೂಲದ ಕಾರ್ನಿಂಗ್‌ ಸಂಸ್ಥೆಯು ಭಾರತ ದೇಶದಲ್ಲಿ ಪ್ರತ್ಯೇಕ ಘಟಕ ಸ್ಥಾಪನೆ ಮಾಡಲು ಮುಂದಾಗಿದೆ.
ಎಕನಾಮಿಕ್ ಟೈಮ್ಸ್‌ ವರದಿಯ ಪ್ರಕಾರ ಕಾರ್ನಿಂಗ್‌ ಕಂಪನಿಯು ತಮಿಳುನಾಡಿನಲ್ಲಿ ಗೊರಿಲ್ಲಾ ಗ್ಲಾಸ್‌ ಉತ್ಪಾದನಾ ಘಟಕ ಸ್ಥಾಪಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ತಮಿಳುನಾಡಿನ ಶ್ರೀ ಪೆರುಂಬುದೂರಿನ ಬಳಿ ಇರುವ ಪಿಳ್ಳೈಪ್ಪಾಕ್ಕಂನಲ್ಲಿ 1000 ಕೋಟಿ ರೂ. ಬಂಡವಾಳದಲ್ಲಿ ಕಾರ್ಖಾನೆ ಆರಂಭವಾಗಲಿದೆ. ಈ ಕಾರ್ಖಾನೆಯಲ್ಲಿ 300 ಜನರಿಗೆ ಉದ್ಯೋಗಾವಕಾಶ ಇರಲಿದೆ ಎಂದು ಹೇಳಲಾಗುತ್ತಿದೆ.
ಇದೇ ಮೊದಲ ಬಾರಿಗೆ ಕಾರ್ನಿಂಗ್‌ ಕಂಪನಿಯು ಭಾರತ ದೇಶಕ್ಕೆ ಪ್ರವೇಶ ಮಾಡುತ್ತಿದೆ. ಕೆಲ ತಿಂಗಳುಗಳ ಹಿಂದೆ ಕಾರ್ನಿಂಗ್‌ ಕಂಪನಿಯು  ತಮ್ಮಲ್ಲಿ ಹೂಡಿಕೆ ಮಾಡಲಿದೆ ಎಂದು ತೆಲಂಗಾಣ ಸರ್ಕಾರ ಹೇಳಿತ್ತು. ಬ್ಯುಸಿನೆಸ್‌ ಸ್ಟಾಂರ್ಡ್‌ ನಲ್ಲಿ ಬಂದಿದ್ದ ವರದಿಯ ಪ್ರಕಾರ ಭಾರತದ ಆಪ್ಟೀಮಸ್‌ ಇನ್ಪ್ರಾಕಾಮ್‌ ಹಾಗೂ ಅಮೇರಿಕಾದ ಕಾರ್ನಿಂಗ್‌ ಸಂಸ್ಥೆಗಳು ಜೊತೆಯಾಗಿ ಉನ್ನತ ಗುಣಮಟ್ಟದ ಸ್ಮಾರ್ಟ್‌ ಫೋನ್‌ ಕವರ್‌ ಗ್ಲಾಸ್‌ ಫ್ಯಾಕ್ಟರಿಯನ್ನು ಆರಂಭಿಸಬಹುದು. 2024 ರ ಕೊನೆಯ ಒಳಗೆ ಈ ಘಟಕಗಳು ತಮ್ಮ ಕಾರ್ಯವನ್ನು ಶುರು ಮಾಡಬಹುದು ಎಂದಿತ್ತು.
ಆಪಲ್‌ ಐಫೋನ್‌ ಅಸೆಂಬ್ಲಿಂಗ್‌ ಮಾಡುವ ಫಾಕ್ಸ್ ಕಾನ್‌ ಹಾಗೂ ಪೆಗಾಟ್ರಾನ್‌ ನ ಘಟಕಗಳು ತಮಿಳುನಾಡಿನಲ್ಲಿಯೇ ಇರುವುದರಿಂದ ತೆಲಂಗಾಣದ ಬದಲಾಗಿ ತಮಿಳುನಾಡಿನಲ್ಲಿ ಗೊರಿಲ್ಲಾ ಗ್ಲಾಸ್‌ ಉತ್ಪಾದನಾ ಘಟಕ ಪ್ರಾರಂಭ ಮಾಡಲು ಕಾರ್ನಿಂಗ್‌ ನಿರ್ಧರಿಸಿದೆ ಎಂದು ಹೇಳಲಾಗಿದೆ.
ಮುಂಬರುವ 2024 ರ ಜನವರಿ ತಿಂಗಳಿನಲ್ಲಿ ನಡೆಯಲಿರುವ ಗ್ಲೋಬಲ್‌ ಇನ್ವೆಸ್ಟರ್‌ ಮೀಟ್‌ ನಲ್ಲಿ ತಮಿಳುನಾಡು ಸರ್ಕಾರ ಹಾಗೂ ಕಾರ್ನಿಂಗ್‌ ಕಂಪನಿಯ ನಡುವೆ ಒಪ್ಪಂದ ನಡೆಯುವ ಸಾಧ್ಯತೆಗಳಿವೆ. ಒಪ್ಪಂದದ ಬಳಿಕ ಗೊರಿಲ್ಲಾ ಗ್ಲಾಸ್‌ ಉತ್ಪಾದನಾ ಘಟಕ ನಿರ್ಮಾಣ ಮಾಡಲು ಒಂದು ವರ್ಷಗಳ ಕಾಲಾವಕಾಶ ಬೇಕಾಗಬಹುದು.
lokesh

Share
Published by
lokesh

Recent Posts

ಬಂಡೀಪುರ ಅರಣ್ಯದಲ್ಲಿ ನೀರಿನ ಸಮಸ್ಯೆಗೆ ಬ್ರೇಕ್: ಸೋಲಾರ್‌ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಪ್ಲಾನ್‌

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…

21 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

45 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

1 hour ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

1 hour ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

2 hours ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

5 hours ago