ವಾಣಿಜ್ಯ

ಅಮೇರಿಕಾದ ಕಾರ್ನಿಂಗ್‌ನಿಂದ ಭಾರತದಲ್ಲಿ ಕಾರ್ಖಾನೆ ಸ್ಥಾಪನೆ

ಚೆನ್ನೈ : ಐಫೋನ್ ಗಳಿಗೆ ಗೊರಿಲ್ಲಾ ಗ್ಲಾಸ್‌ ಪೂರೈಕೆ ಮಾಡುವ ಅಮೇರಿಕಾ ಮೂಲದ ಕಾರ್ನಿಂಗ್‌ ಸಂಸ್ಥೆಯು ಭಾರತ ದೇಶದಲ್ಲಿ ಪ್ರತ್ಯೇಕ ಘಟಕ ಸ್ಥಾಪನೆ ಮಾಡಲು ಮುಂದಾಗಿದೆ.
ಎಕನಾಮಿಕ್ ಟೈಮ್ಸ್‌ ವರದಿಯ ಪ್ರಕಾರ ಕಾರ್ನಿಂಗ್‌ ಕಂಪನಿಯು ತಮಿಳುನಾಡಿನಲ್ಲಿ ಗೊರಿಲ್ಲಾ ಗ್ಲಾಸ್‌ ಉತ್ಪಾದನಾ ಘಟಕ ಸ್ಥಾಪಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ತಮಿಳುನಾಡಿನ ಶ್ರೀ ಪೆರುಂಬುದೂರಿನ ಬಳಿ ಇರುವ ಪಿಳ್ಳೈಪ್ಪಾಕ್ಕಂನಲ್ಲಿ 1000 ಕೋಟಿ ರೂ. ಬಂಡವಾಳದಲ್ಲಿ ಕಾರ್ಖಾನೆ ಆರಂಭವಾಗಲಿದೆ. ಈ ಕಾರ್ಖಾನೆಯಲ್ಲಿ 300 ಜನರಿಗೆ ಉದ್ಯೋಗಾವಕಾಶ ಇರಲಿದೆ ಎಂದು ಹೇಳಲಾಗುತ್ತಿದೆ.
ಇದೇ ಮೊದಲ ಬಾರಿಗೆ ಕಾರ್ನಿಂಗ್‌ ಕಂಪನಿಯು ಭಾರತ ದೇಶಕ್ಕೆ ಪ್ರವೇಶ ಮಾಡುತ್ತಿದೆ. ಕೆಲ ತಿಂಗಳುಗಳ ಹಿಂದೆ ಕಾರ್ನಿಂಗ್‌ ಕಂಪನಿಯು  ತಮ್ಮಲ್ಲಿ ಹೂಡಿಕೆ ಮಾಡಲಿದೆ ಎಂದು ತೆಲಂಗಾಣ ಸರ್ಕಾರ ಹೇಳಿತ್ತು. ಬ್ಯುಸಿನೆಸ್‌ ಸ್ಟಾಂರ್ಡ್‌ ನಲ್ಲಿ ಬಂದಿದ್ದ ವರದಿಯ ಪ್ರಕಾರ ಭಾರತದ ಆಪ್ಟೀಮಸ್‌ ಇನ್ಪ್ರಾಕಾಮ್‌ ಹಾಗೂ ಅಮೇರಿಕಾದ ಕಾರ್ನಿಂಗ್‌ ಸಂಸ್ಥೆಗಳು ಜೊತೆಯಾಗಿ ಉನ್ನತ ಗುಣಮಟ್ಟದ ಸ್ಮಾರ್ಟ್‌ ಫೋನ್‌ ಕವರ್‌ ಗ್ಲಾಸ್‌ ಫ್ಯಾಕ್ಟರಿಯನ್ನು ಆರಂಭಿಸಬಹುದು. 2024 ರ ಕೊನೆಯ ಒಳಗೆ ಈ ಘಟಕಗಳು ತಮ್ಮ ಕಾರ್ಯವನ್ನು ಶುರು ಮಾಡಬಹುದು ಎಂದಿತ್ತು.
ಆಪಲ್‌ ಐಫೋನ್‌ ಅಸೆಂಬ್ಲಿಂಗ್‌ ಮಾಡುವ ಫಾಕ್ಸ್ ಕಾನ್‌ ಹಾಗೂ ಪೆಗಾಟ್ರಾನ್‌ ನ ಘಟಕಗಳು ತಮಿಳುನಾಡಿನಲ್ಲಿಯೇ ಇರುವುದರಿಂದ ತೆಲಂಗಾಣದ ಬದಲಾಗಿ ತಮಿಳುನಾಡಿನಲ್ಲಿ ಗೊರಿಲ್ಲಾ ಗ್ಲಾಸ್‌ ಉತ್ಪಾದನಾ ಘಟಕ ಪ್ರಾರಂಭ ಮಾಡಲು ಕಾರ್ನಿಂಗ್‌ ನಿರ್ಧರಿಸಿದೆ ಎಂದು ಹೇಳಲಾಗಿದೆ.
ಮುಂಬರುವ 2024 ರ ಜನವರಿ ತಿಂಗಳಿನಲ್ಲಿ ನಡೆಯಲಿರುವ ಗ್ಲೋಬಲ್‌ ಇನ್ವೆಸ್ಟರ್‌ ಮೀಟ್‌ ನಲ್ಲಿ ತಮಿಳುನಾಡು ಸರ್ಕಾರ ಹಾಗೂ ಕಾರ್ನಿಂಗ್‌ ಕಂಪನಿಯ ನಡುವೆ ಒಪ್ಪಂದ ನಡೆಯುವ ಸಾಧ್ಯತೆಗಳಿವೆ. ಒಪ್ಪಂದದ ಬಳಿಕ ಗೊರಿಲ್ಲಾ ಗ್ಲಾಸ್‌ ಉತ್ಪಾದನಾ ಘಟಕ ನಿರ್ಮಾಣ ಮಾಡಲು ಒಂದು ವರ್ಷಗಳ ಕಾಲಾವಕಾಶ ಬೇಕಾಗಬಹುದು.
lokesh

Share
Published by
lokesh

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

6 mins ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

13 mins ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

50 mins ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

2 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

2 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

2 hours ago