ವಾಣಿಜ್ಯ

ಅಮೇರಿಕಾದ ಕಾರ್ನಿಂಗ್‌ನಿಂದ ಭಾರತದಲ್ಲಿ ಕಾರ್ಖಾನೆ ಸ್ಥಾಪನೆ

ಚೆನ್ನೈ : ಐಫೋನ್ ಗಳಿಗೆ ಗೊರಿಲ್ಲಾ ಗ್ಲಾಸ್‌ ಪೂರೈಕೆ ಮಾಡುವ ಅಮೇರಿಕಾ ಮೂಲದ ಕಾರ್ನಿಂಗ್‌ ಸಂಸ್ಥೆಯು ಭಾರತ ದೇಶದಲ್ಲಿ ಪ್ರತ್ಯೇಕ ಘಟಕ ಸ್ಥಾಪನೆ ಮಾಡಲು ಮುಂದಾಗಿದೆ.
ಎಕನಾಮಿಕ್ ಟೈಮ್ಸ್‌ ವರದಿಯ ಪ್ರಕಾರ ಕಾರ್ನಿಂಗ್‌ ಕಂಪನಿಯು ತಮಿಳುನಾಡಿನಲ್ಲಿ ಗೊರಿಲ್ಲಾ ಗ್ಲಾಸ್‌ ಉತ್ಪಾದನಾ ಘಟಕ ಸ್ಥಾಪಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ತಮಿಳುನಾಡಿನ ಶ್ರೀ ಪೆರುಂಬುದೂರಿನ ಬಳಿ ಇರುವ ಪಿಳ್ಳೈಪ್ಪಾಕ್ಕಂನಲ್ಲಿ 1000 ಕೋಟಿ ರೂ. ಬಂಡವಾಳದಲ್ಲಿ ಕಾರ್ಖಾನೆ ಆರಂಭವಾಗಲಿದೆ. ಈ ಕಾರ್ಖಾನೆಯಲ್ಲಿ 300 ಜನರಿಗೆ ಉದ್ಯೋಗಾವಕಾಶ ಇರಲಿದೆ ಎಂದು ಹೇಳಲಾಗುತ್ತಿದೆ.
ಇದೇ ಮೊದಲ ಬಾರಿಗೆ ಕಾರ್ನಿಂಗ್‌ ಕಂಪನಿಯು ಭಾರತ ದೇಶಕ್ಕೆ ಪ್ರವೇಶ ಮಾಡುತ್ತಿದೆ. ಕೆಲ ತಿಂಗಳುಗಳ ಹಿಂದೆ ಕಾರ್ನಿಂಗ್‌ ಕಂಪನಿಯು  ತಮ್ಮಲ್ಲಿ ಹೂಡಿಕೆ ಮಾಡಲಿದೆ ಎಂದು ತೆಲಂಗಾಣ ಸರ್ಕಾರ ಹೇಳಿತ್ತು. ಬ್ಯುಸಿನೆಸ್‌ ಸ್ಟಾಂರ್ಡ್‌ ನಲ್ಲಿ ಬಂದಿದ್ದ ವರದಿಯ ಪ್ರಕಾರ ಭಾರತದ ಆಪ್ಟೀಮಸ್‌ ಇನ್ಪ್ರಾಕಾಮ್‌ ಹಾಗೂ ಅಮೇರಿಕಾದ ಕಾರ್ನಿಂಗ್‌ ಸಂಸ್ಥೆಗಳು ಜೊತೆಯಾಗಿ ಉನ್ನತ ಗುಣಮಟ್ಟದ ಸ್ಮಾರ್ಟ್‌ ಫೋನ್‌ ಕವರ್‌ ಗ್ಲಾಸ್‌ ಫ್ಯಾಕ್ಟರಿಯನ್ನು ಆರಂಭಿಸಬಹುದು. 2024 ರ ಕೊನೆಯ ಒಳಗೆ ಈ ಘಟಕಗಳು ತಮ್ಮ ಕಾರ್ಯವನ್ನು ಶುರು ಮಾಡಬಹುದು ಎಂದಿತ್ತು.
ಆಪಲ್‌ ಐಫೋನ್‌ ಅಸೆಂಬ್ಲಿಂಗ್‌ ಮಾಡುವ ಫಾಕ್ಸ್ ಕಾನ್‌ ಹಾಗೂ ಪೆಗಾಟ್ರಾನ್‌ ನ ಘಟಕಗಳು ತಮಿಳುನಾಡಿನಲ್ಲಿಯೇ ಇರುವುದರಿಂದ ತೆಲಂಗಾಣದ ಬದಲಾಗಿ ತಮಿಳುನಾಡಿನಲ್ಲಿ ಗೊರಿಲ್ಲಾ ಗ್ಲಾಸ್‌ ಉತ್ಪಾದನಾ ಘಟಕ ಪ್ರಾರಂಭ ಮಾಡಲು ಕಾರ್ನಿಂಗ್‌ ನಿರ್ಧರಿಸಿದೆ ಎಂದು ಹೇಳಲಾಗಿದೆ.
ಮುಂಬರುವ 2024 ರ ಜನವರಿ ತಿಂಗಳಿನಲ್ಲಿ ನಡೆಯಲಿರುವ ಗ್ಲೋಬಲ್‌ ಇನ್ವೆಸ್ಟರ್‌ ಮೀಟ್‌ ನಲ್ಲಿ ತಮಿಳುನಾಡು ಸರ್ಕಾರ ಹಾಗೂ ಕಾರ್ನಿಂಗ್‌ ಕಂಪನಿಯ ನಡುವೆ ಒಪ್ಪಂದ ನಡೆಯುವ ಸಾಧ್ಯತೆಗಳಿವೆ. ಒಪ್ಪಂದದ ಬಳಿಕ ಗೊರಿಲ್ಲಾ ಗ್ಲಾಸ್‌ ಉತ್ಪಾದನಾ ಘಟಕ ನಿರ್ಮಾಣ ಮಾಡಲು ಒಂದು ವರ್ಷಗಳ ಕಾಲಾವಕಾಶ ಬೇಕಾಗಬಹುದು.
lokesh

Share
Published by
lokesh

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

6 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

10 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

14 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

16 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

17 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

18 hours ago