ವಾಣಿಜ್ಯ

ದಕ್ಷಿಣ ಭಾರತದಲ್ಲಿ ಡಾಬರ್‌ ಕಂಪನಿಯ ಪ್ರೊಡಕ್ಷನ್‌ ಬ್ರಾಂಚ್‌ ಸ್ಥಾಪನೆ

ನವದೆಹಲಿ : ಭಾರತ ದೇಶದಲ್ಲಿನ ಆಯುರ್ವೇದಿಕ್‌ ಉತ್ಪನ್ನಗಳ ಪ್ರಮುಖ ಕಂಪನಿ ಎಂದೆನಿಸಿರುವ ಡಾಬರ್‌ ಇನ್ನೋಂದು ವರ್ಷದೊಳಗೆ ದಕ್ಷಿಣ ಭಾರತದಲ್ಲಿ ತನ್ನ ಹೊಸ ಪ್ರೊಡಕ್ಷನ್‌ ಬ್ರಾಂಚ್‌ ಸ್ಥಾಪನೆ ಮಾಡಲು ಚಿಂತನೆ ನಡೆಸಿದೆ ಎಂದು ಡಾಬರ್‌ ಕಂಪನಿಯ ಸಿಇಒ ಮೋಹಿತ್‌ ಮಲ್ಹೋತ್ರಾ ತಿಳಿಸಿದ್ದಾರೆ.

ಡಾಬರ್‌ ಕಂಪನಿಯು ದೇಶೀಯ ಮಾರಾಟದಲ್ಲಿ ಶೇ.20ರಷ್ಟು ಪಾಲನ್ನು ದಕ್ಷಿಣ ಭಾರತದಲ್ಲಿ ಹೊಂದಿದೆ. ಈ ಭಾಗದಲ್ಲಿ ಡಾಬರ್‌ ಉತ್ಪನ್ನಗಳ ಮಾರಾಟವು ಕಳೆದ ಐದಾರು ವರ್ಷಗಳ ಅವಧಿಯಲ್ಲಿ ದುಪ್ಪಟ್ಟಾಗಿದೆ.

ಮದ್ಯ ಪ್ರಾಚ್ಯ ಹಾಗೂ ಯುರೋಪ್‌ ನ ಗ್ರಾಹಕರ ಬೇಡಿಕೆಗಳನ್ನು ಪೂರೈಸುವ ಸಲುವಾಗಿ ಡಾಬರ್‌ ಉತ್ಪನ್ನಗಳ ತಯಾರಿಕೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ವಿಸ್ತರಿಸಲಿದ್ದೇವೆ. ಡಾಬರ್‌ ಕಂಪನಿಯು ಇಂದೋರ್‌ ನಲ್ಲಿ ತನ್ನ ಹೊಸ ಘಟಕ ಶುರು ಮಾಡಲು ಸುಮಾರು 350 ಕೋಟಿ ಹಣವನ್ನು ಹೂಡಿಕೆ ಮಾಡಿತ್ತು ಎಂದು ಕಂಪನಿ ತಿಳಿಸಿದೆ.

ಈಗಾಗಲೇ ಡಾಬರ್‌ ಕಂಪನಿಯು ದೇಶಾದ್ಯಂತ 13 ಪ್ರೊಡಕ್ಷನ್‌ ಯುನಿಟ್‌ ಗಳನ್ನು ಹೊಂದಿದೆ. ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಉತ್ಪನ್ನಗಳನ್ನು ಪೂರೈಸಲು ಕಂಪನಿಯ ಮತ್ತೊಂದು ಬ್ರಾಂಚ್‌ ಅನ್ನು ದಕ್ಷಿಣ ಭಾರತದಲ್ಲಿ ಸ್ಥಾಪಿಸಲು ತೀರ್ಮಾನಿಸಿದ್ದೇವೆ ಎಂದು ಕಂಪನಿಯ ಸಿಇಒ ಮೋಹಿತ್‌ ಮಲ್ಹೋತ್ರಾ ಹೇಳಿದ್ದಾರೆ.

ಡಾಬರ್‌ ಕಂಪನಿಯು ಭಾರತೀಯ ಬಹುರಾಷ್ಟ್ರೀಯ ಗ್ರಾಹಕ ಸರಕುಗಳ ಪ್ರಸಿದ್ಧ ಕಂಪನಿಯಾಗಿದೆ. ಇದು ಗಾಜಿಯಾಬಾದ್‌ ನಲ್ಲಿ ತನ್ನ ಪ್ರಧಾನ ಕಂಪನಿಯನ್ನು ಹೊಂದಿದೆ. ಇದು ಆಯುರ್ವೇದ, ಔಷಧ ಉತ್ಪನ್ನಗಳನ್ನು ತಯಾರಿಸುವ ಬಹುದೊಡ್ಡ ಕಂಪನಿಯಾಗಿದೆ.

ಈ ಪ್ರಸಿದ್ಧ ಡಾಬರ್‌ ಕಂಪನಿಯನ್ನು 1884 ರಲ್ಲಿ ಕೋಲ್ಕತ್ತಾದಲ್ಲಿ ಡಾ.ಎಸ್.ಕೆ ಬರ್ಮನ್‌ ಅವರು ಸ್ಥಾಪಿಸಿದ್ದರು.ಇವರು ಕೋಲ್ಕತ್ತಾದಲ್ಲಿ ಆಯುರ್ವೇದ ವೈದ್ಯರಾಗಿದ್ದ ಇವರು ತಮ್ಮ ಡಾಬರ್‌ ಕಂಪನಿಯ ಮೂಲಕ ಕಾಲರಾ, ಮಲಬದ್ಧತೆ, ಹಾಗೂ ಮಲೇರಿಯಾದಂತಹ ಮಾರಕ ಖಾಯಿಲೆಗಳಿಗೆ ಆಯುರ್ವೇದ ಔಷಧಿಗಳನ್ನು ತಯಾರಿಸಿದ್ದರು.

lokesh

Share
Published by
lokesh

Recent Posts

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

2 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

15 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

8 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

9 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

15 hours ago