ವಾಣಿಜ್ಯ

ದಕ್ಷಿಣ ಭಾರತದಲ್ಲಿ ಡಾಬರ್‌ ಕಂಪನಿಯ ಪ್ರೊಡಕ್ಷನ್‌ ಬ್ರಾಂಚ್‌ ಸ್ಥಾಪನೆ

ನವದೆಹಲಿ : ಭಾರತ ದೇಶದಲ್ಲಿನ ಆಯುರ್ವೇದಿಕ್‌ ಉತ್ಪನ್ನಗಳ ಪ್ರಮುಖ ಕಂಪನಿ ಎಂದೆನಿಸಿರುವ ಡಾಬರ್‌ ಇನ್ನೋಂದು ವರ್ಷದೊಳಗೆ ದಕ್ಷಿಣ ಭಾರತದಲ್ಲಿ ತನ್ನ ಹೊಸ ಪ್ರೊಡಕ್ಷನ್‌ ಬ್ರಾಂಚ್‌ ಸ್ಥಾಪನೆ ಮಾಡಲು ಚಿಂತನೆ ನಡೆಸಿದೆ ಎಂದು ಡಾಬರ್‌ ಕಂಪನಿಯ ಸಿಇಒ ಮೋಹಿತ್‌ ಮಲ್ಹೋತ್ರಾ ತಿಳಿಸಿದ್ದಾರೆ.

ಡಾಬರ್‌ ಕಂಪನಿಯು ದೇಶೀಯ ಮಾರಾಟದಲ್ಲಿ ಶೇ.20ರಷ್ಟು ಪಾಲನ್ನು ದಕ್ಷಿಣ ಭಾರತದಲ್ಲಿ ಹೊಂದಿದೆ. ಈ ಭಾಗದಲ್ಲಿ ಡಾಬರ್‌ ಉತ್ಪನ್ನಗಳ ಮಾರಾಟವು ಕಳೆದ ಐದಾರು ವರ್ಷಗಳ ಅವಧಿಯಲ್ಲಿ ದುಪ್ಪಟ್ಟಾಗಿದೆ.

ಮದ್ಯ ಪ್ರಾಚ್ಯ ಹಾಗೂ ಯುರೋಪ್‌ ನ ಗ್ರಾಹಕರ ಬೇಡಿಕೆಗಳನ್ನು ಪೂರೈಸುವ ಸಲುವಾಗಿ ಡಾಬರ್‌ ಉತ್ಪನ್ನಗಳ ತಯಾರಿಕೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ವಿಸ್ತರಿಸಲಿದ್ದೇವೆ. ಡಾಬರ್‌ ಕಂಪನಿಯು ಇಂದೋರ್‌ ನಲ್ಲಿ ತನ್ನ ಹೊಸ ಘಟಕ ಶುರು ಮಾಡಲು ಸುಮಾರು 350 ಕೋಟಿ ಹಣವನ್ನು ಹೂಡಿಕೆ ಮಾಡಿತ್ತು ಎಂದು ಕಂಪನಿ ತಿಳಿಸಿದೆ.

ಈಗಾಗಲೇ ಡಾಬರ್‌ ಕಂಪನಿಯು ದೇಶಾದ್ಯಂತ 13 ಪ್ರೊಡಕ್ಷನ್‌ ಯುನಿಟ್‌ ಗಳನ್ನು ಹೊಂದಿದೆ. ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಉತ್ಪನ್ನಗಳನ್ನು ಪೂರೈಸಲು ಕಂಪನಿಯ ಮತ್ತೊಂದು ಬ್ರಾಂಚ್‌ ಅನ್ನು ದಕ್ಷಿಣ ಭಾರತದಲ್ಲಿ ಸ್ಥಾಪಿಸಲು ತೀರ್ಮಾನಿಸಿದ್ದೇವೆ ಎಂದು ಕಂಪನಿಯ ಸಿಇಒ ಮೋಹಿತ್‌ ಮಲ್ಹೋತ್ರಾ ಹೇಳಿದ್ದಾರೆ.

ಡಾಬರ್‌ ಕಂಪನಿಯು ಭಾರತೀಯ ಬಹುರಾಷ್ಟ್ರೀಯ ಗ್ರಾಹಕ ಸರಕುಗಳ ಪ್ರಸಿದ್ಧ ಕಂಪನಿಯಾಗಿದೆ. ಇದು ಗಾಜಿಯಾಬಾದ್‌ ನಲ್ಲಿ ತನ್ನ ಪ್ರಧಾನ ಕಂಪನಿಯನ್ನು ಹೊಂದಿದೆ. ಇದು ಆಯುರ್ವೇದ, ಔಷಧ ಉತ್ಪನ್ನಗಳನ್ನು ತಯಾರಿಸುವ ಬಹುದೊಡ್ಡ ಕಂಪನಿಯಾಗಿದೆ.

ಈ ಪ್ರಸಿದ್ಧ ಡಾಬರ್‌ ಕಂಪನಿಯನ್ನು 1884 ರಲ್ಲಿ ಕೋಲ್ಕತ್ತಾದಲ್ಲಿ ಡಾ.ಎಸ್.ಕೆ ಬರ್ಮನ್‌ ಅವರು ಸ್ಥಾಪಿಸಿದ್ದರು.ಇವರು ಕೋಲ್ಕತ್ತಾದಲ್ಲಿ ಆಯುರ್ವೇದ ವೈದ್ಯರಾಗಿದ್ದ ಇವರು ತಮ್ಮ ಡಾಬರ್‌ ಕಂಪನಿಯ ಮೂಲಕ ಕಾಲರಾ, ಮಲಬದ್ಧತೆ, ಹಾಗೂ ಮಲೇರಿಯಾದಂತಹ ಮಾರಕ ಖಾಯಿಲೆಗಳಿಗೆ ಆಯುರ್ವೇದ ಔಷಧಿಗಳನ್ನು ತಯಾರಿಸಿದ್ದರು.

lokesh

Share
Published by
lokesh

Recent Posts

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

2 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

2 hours ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

2 hours ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

2 hours ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

2 hours ago