ವಾಣಿಜ್ಯ

ದಕ್ಷಿಣ ಭಾರತದಲ್ಲಿ ಡಾಬರ್‌ ಕಂಪನಿಯ ಪ್ರೊಡಕ್ಷನ್‌ ಬ್ರಾಂಚ್‌ ಸ್ಥಾಪನೆ

ನವದೆಹಲಿ : ಭಾರತ ದೇಶದಲ್ಲಿನ ಆಯುರ್ವೇದಿಕ್‌ ಉತ್ಪನ್ನಗಳ ಪ್ರಮುಖ ಕಂಪನಿ ಎಂದೆನಿಸಿರುವ ಡಾಬರ್‌ ಇನ್ನೋಂದು ವರ್ಷದೊಳಗೆ ದಕ್ಷಿಣ ಭಾರತದಲ್ಲಿ ತನ್ನ ಹೊಸ ಪ್ರೊಡಕ್ಷನ್‌ ಬ್ರಾಂಚ್‌ ಸ್ಥಾಪನೆ ಮಾಡಲು ಚಿಂತನೆ ನಡೆಸಿದೆ ಎಂದು ಡಾಬರ್‌ ಕಂಪನಿಯ ಸಿಇಒ ಮೋಹಿತ್‌ ಮಲ್ಹೋತ್ರಾ ತಿಳಿಸಿದ್ದಾರೆ.

ಡಾಬರ್‌ ಕಂಪನಿಯು ದೇಶೀಯ ಮಾರಾಟದಲ್ಲಿ ಶೇ.20ರಷ್ಟು ಪಾಲನ್ನು ದಕ್ಷಿಣ ಭಾರತದಲ್ಲಿ ಹೊಂದಿದೆ. ಈ ಭಾಗದಲ್ಲಿ ಡಾಬರ್‌ ಉತ್ಪನ್ನಗಳ ಮಾರಾಟವು ಕಳೆದ ಐದಾರು ವರ್ಷಗಳ ಅವಧಿಯಲ್ಲಿ ದುಪ್ಪಟ್ಟಾಗಿದೆ.

ಮದ್ಯ ಪ್ರಾಚ್ಯ ಹಾಗೂ ಯುರೋಪ್‌ ನ ಗ್ರಾಹಕರ ಬೇಡಿಕೆಗಳನ್ನು ಪೂರೈಸುವ ಸಲುವಾಗಿ ಡಾಬರ್‌ ಉತ್ಪನ್ನಗಳ ತಯಾರಿಕೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ವಿಸ್ತರಿಸಲಿದ್ದೇವೆ. ಡಾಬರ್‌ ಕಂಪನಿಯು ಇಂದೋರ್‌ ನಲ್ಲಿ ತನ್ನ ಹೊಸ ಘಟಕ ಶುರು ಮಾಡಲು ಸುಮಾರು 350 ಕೋಟಿ ಹಣವನ್ನು ಹೂಡಿಕೆ ಮಾಡಿತ್ತು ಎಂದು ಕಂಪನಿ ತಿಳಿಸಿದೆ.

ಈಗಾಗಲೇ ಡಾಬರ್‌ ಕಂಪನಿಯು ದೇಶಾದ್ಯಂತ 13 ಪ್ರೊಡಕ್ಷನ್‌ ಯುನಿಟ್‌ ಗಳನ್ನು ಹೊಂದಿದೆ. ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಉತ್ಪನ್ನಗಳನ್ನು ಪೂರೈಸಲು ಕಂಪನಿಯ ಮತ್ತೊಂದು ಬ್ರಾಂಚ್‌ ಅನ್ನು ದಕ್ಷಿಣ ಭಾರತದಲ್ಲಿ ಸ್ಥಾಪಿಸಲು ತೀರ್ಮಾನಿಸಿದ್ದೇವೆ ಎಂದು ಕಂಪನಿಯ ಸಿಇಒ ಮೋಹಿತ್‌ ಮಲ್ಹೋತ್ರಾ ಹೇಳಿದ್ದಾರೆ.

ಡಾಬರ್‌ ಕಂಪನಿಯು ಭಾರತೀಯ ಬಹುರಾಷ್ಟ್ರೀಯ ಗ್ರಾಹಕ ಸರಕುಗಳ ಪ್ರಸಿದ್ಧ ಕಂಪನಿಯಾಗಿದೆ. ಇದು ಗಾಜಿಯಾಬಾದ್‌ ನಲ್ಲಿ ತನ್ನ ಪ್ರಧಾನ ಕಂಪನಿಯನ್ನು ಹೊಂದಿದೆ. ಇದು ಆಯುರ್ವೇದ, ಔಷಧ ಉತ್ಪನ್ನಗಳನ್ನು ತಯಾರಿಸುವ ಬಹುದೊಡ್ಡ ಕಂಪನಿಯಾಗಿದೆ.

ಈ ಪ್ರಸಿದ್ಧ ಡಾಬರ್‌ ಕಂಪನಿಯನ್ನು 1884 ರಲ್ಲಿ ಕೋಲ್ಕತ್ತಾದಲ್ಲಿ ಡಾ.ಎಸ್.ಕೆ ಬರ್ಮನ್‌ ಅವರು ಸ್ಥಾಪಿಸಿದ್ದರು.ಇವರು ಕೋಲ್ಕತ್ತಾದಲ್ಲಿ ಆಯುರ್ವೇದ ವೈದ್ಯರಾಗಿದ್ದ ಇವರು ತಮ್ಮ ಡಾಬರ್‌ ಕಂಪನಿಯ ಮೂಲಕ ಕಾಲರಾ, ಮಲಬದ್ಧತೆ, ಹಾಗೂ ಮಲೇರಿಯಾದಂತಹ ಮಾರಕ ಖಾಯಿಲೆಗಳಿಗೆ ಆಯುರ್ವೇದ ಔಷಧಿಗಳನ್ನು ತಯಾರಿಸಿದ್ದರು.

lokesh

Share
Published by
lokesh

Recent Posts

ಸಿಎಂ ರಾಜಕೀಯ ಕಾರ್ಯದರ್ಶಿ ವಜಾ : ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದೇನು?

ಬೆಳಗಾವಿ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್‌ ಅಹಮ್ಮದ್‌ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯೆ…

27 mins ago

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

2 hours ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

2 hours ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

3 hours ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

4 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

4 hours ago