ವಾಣಿಜ್ಯ

ದಕ್ಷಿಣ ಭಾರತದಲ್ಲಿ ಡಾಬರ್‌ ಕಂಪನಿಯ ಪ್ರೊಡಕ್ಷನ್‌ ಬ್ರಾಂಚ್‌ ಸ್ಥಾಪನೆ

ನವದೆಹಲಿ : ಭಾರತ ದೇಶದಲ್ಲಿನ ಆಯುರ್ವೇದಿಕ್‌ ಉತ್ಪನ್ನಗಳ ಪ್ರಮುಖ ಕಂಪನಿ ಎಂದೆನಿಸಿರುವ ಡಾಬರ್‌ ಇನ್ನೋಂದು ವರ್ಷದೊಳಗೆ ದಕ್ಷಿಣ ಭಾರತದಲ್ಲಿ ತನ್ನ ಹೊಸ ಪ್ರೊಡಕ್ಷನ್‌ ಬ್ರಾಂಚ್‌ ಸ್ಥಾಪನೆ ಮಾಡಲು ಚಿಂತನೆ ನಡೆಸಿದೆ ಎಂದು ಡಾಬರ್‌ ಕಂಪನಿಯ ಸಿಇಒ ಮೋಹಿತ್‌ ಮಲ್ಹೋತ್ರಾ ತಿಳಿಸಿದ್ದಾರೆ.

ಡಾಬರ್‌ ಕಂಪನಿಯು ದೇಶೀಯ ಮಾರಾಟದಲ್ಲಿ ಶೇ.20ರಷ್ಟು ಪಾಲನ್ನು ದಕ್ಷಿಣ ಭಾರತದಲ್ಲಿ ಹೊಂದಿದೆ. ಈ ಭಾಗದಲ್ಲಿ ಡಾಬರ್‌ ಉತ್ಪನ್ನಗಳ ಮಾರಾಟವು ಕಳೆದ ಐದಾರು ವರ್ಷಗಳ ಅವಧಿಯಲ್ಲಿ ದುಪ್ಪಟ್ಟಾಗಿದೆ.

ಮದ್ಯ ಪ್ರಾಚ್ಯ ಹಾಗೂ ಯುರೋಪ್‌ ನ ಗ್ರಾಹಕರ ಬೇಡಿಕೆಗಳನ್ನು ಪೂರೈಸುವ ಸಲುವಾಗಿ ಡಾಬರ್‌ ಉತ್ಪನ್ನಗಳ ತಯಾರಿಕೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ವಿಸ್ತರಿಸಲಿದ್ದೇವೆ. ಡಾಬರ್‌ ಕಂಪನಿಯು ಇಂದೋರ್‌ ನಲ್ಲಿ ತನ್ನ ಹೊಸ ಘಟಕ ಶುರು ಮಾಡಲು ಸುಮಾರು 350 ಕೋಟಿ ಹಣವನ್ನು ಹೂಡಿಕೆ ಮಾಡಿತ್ತು ಎಂದು ಕಂಪನಿ ತಿಳಿಸಿದೆ.

ಈಗಾಗಲೇ ಡಾಬರ್‌ ಕಂಪನಿಯು ದೇಶಾದ್ಯಂತ 13 ಪ್ರೊಡಕ್ಷನ್‌ ಯುನಿಟ್‌ ಗಳನ್ನು ಹೊಂದಿದೆ. ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಉತ್ಪನ್ನಗಳನ್ನು ಪೂರೈಸಲು ಕಂಪನಿಯ ಮತ್ತೊಂದು ಬ್ರಾಂಚ್‌ ಅನ್ನು ದಕ್ಷಿಣ ಭಾರತದಲ್ಲಿ ಸ್ಥಾಪಿಸಲು ತೀರ್ಮಾನಿಸಿದ್ದೇವೆ ಎಂದು ಕಂಪನಿಯ ಸಿಇಒ ಮೋಹಿತ್‌ ಮಲ್ಹೋತ್ರಾ ಹೇಳಿದ್ದಾರೆ.

ಡಾಬರ್‌ ಕಂಪನಿಯು ಭಾರತೀಯ ಬಹುರಾಷ್ಟ್ರೀಯ ಗ್ರಾಹಕ ಸರಕುಗಳ ಪ್ರಸಿದ್ಧ ಕಂಪನಿಯಾಗಿದೆ. ಇದು ಗಾಜಿಯಾಬಾದ್‌ ನಲ್ಲಿ ತನ್ನ ಪ್ರಧಾನ ಕಂಪನಿಯನ್ನು ಹೊಂದಿದೆ. ಇದು ಆಯುರ್ವೇದ, ಔಷಧ ಉತ್ಪನ್ನಗಳನ್ನು ತಯಾರಿಸುವ ಬಹುದೊಡ್ಡ ಕಂಪನಿಯಾಗಿದೆ.

ಈ ಪ್ರಸಿದ್ಧ ಡಾಬರ್‌ ಕಂಪನಿಯನ್ನು 1884 ರಲ್ಲಿ ಕೋಲ್ಕತ್ತಾದಲ್ಲಿ ಡಾ.ಎಸ್.ಕೆ ಬರ್ಮನ್‌ ಅವರು ಸ್ಥಾಪಿಸಿದ್ದರು.ಇವರು ಕೋಲ್ಕತ್ತಾದಲ್ಲಿ ಆಯುರ್ವೇದ ವೈದ್ಯರಾಗಿದ್ದ ಇವರು ತಮ್ಮ ಡಾಬರ್‌ ಕಂಪನಿಯ ಮೂಲಕ ಕಾಲರಾ, ಮಲಬದ್ಧತೆ, ಹಾಗೂ ಮಲೇರಿಯಾದಂತಹ ಮಾರಕ ಖಾಯಿಲೆಗಳಿಗೆ ಆಯುರ್ವೇದ ಔಷಧಿಗಳನ್ನು ತಯಾರಿಸಿದ್ದರು.

lokesh

Share
Published by
lokesh

Recent Posts

ಪಿರಿಯಾಪಟ್ಟಣ | ವಿಶೇಷಚೇತನರಿಗೆ ವಿತರಣೆಯಾಗದ ಸಾಧನಗಳು

ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…

1 hour ago

3 ತಿಂಗಳಿಂದ ಬಾರದ ಮಾಸಾಶನ ; ಬಡಜನರು ಕಂಗಾಲು

ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ…

2 hours ago

ಗ್ರಾಪಂನಲ್ಲೇ ವಾಸಸ್ಥಳ ದೃಢೀಕರಣ ಪತ್ರ ; ಇನ್ನು ಹೋಬಳಿ ಕೇಂದ್ರಗಳಿಗೆ ಅಲೆಯುವಂತಿಲ್ಲ: ಸರ್ಕಾರದ ತೀರ್ಮಾನ

ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು : ಬಿಜೆಪಿ -ಜಾ.ದಳ ನಾಯಕರಿಗೆ ಆಘಾತ

ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…

5 hours ago

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

6 hours ago