ವಾಣಿಜ್ಯ

ತಮಿಳುನಾಡಿನಲ್ಲಿ ಐಫೋನ್ ಉತ್ಪಾದನೆ ಆರಂಭಿಸಿದ ಫಾಕ್ಸ್‌ಕಾನ್‌

ಚೆನ್ನೈ‌ : ಆಪಲ್‌ ಇಂಕ್‌ ತಮಿಳುನಾಡಿನಲ್ಲಿ ಐಫೋನ್-15ರ ಉತ್ಪಾದನೆ ಪ್ರಾರಂಭಿಸಿದೆ. ಫಾಕ್ಸ್‌ಕಾನ್ ಟೆಕ್ನಾಲಜಿ ಗ್ರೂಪ್ ಘಟಕವು ಶ್ರೀಪೆರಂಬದೂರಿನಲ್ಲಿರುವ ಉತ್ಪಾದನೆಗೆ ಬೇಕಾದ ಎಲ್ಲ ಸಿದ್ಧತೆ ಆರಂಭಿಸಿದೆ.

ಈ ಮೂಲಕ ಭಾರತ ಮತ್ತು ಚೀನಾದಲ್ಲಿನ ಮುಖ್ಯ ಉತ್ಪಾದನಾ ನೆಲೆಯ ಅಂತರವನ್ನು ಮತ್ತಷ್ಟು ಕಡಿಮೆಗೊಳಿಸುವ ಪ್ರಯತ್ನಕ್ಕೆ ಮುಂದಾಗಿದೆ. ಹೊಸ ಐಫೋನ್ ಬಿಡುಗಡೆ ದಿನಾಂಕವನ್ನ ಸೆಪ್ಟೆಂಬರ್ 12 ರಂದು ಘೋಷಿಸುವ ಸಾಧ್ಯತೆಯಿದೆ.

ಚೀನಾದ ಘಟಕಗಳು ಹೊಸ ಸಾಧನಗಳ ಪೂರೈಕೆ ಆರಂಭಿಸಿದ್ದು, ಇದಾದ ಒಂದು ವಾರಗಳ ಬಳಿಕ ಈ ಬೆಳವಣಿಗೆ ಕಂಡುಬಂದಿದೆ. ಆಪಲ್‌ ಕಂಪನಿಯು ಭಾರತದಲ್ಲಿ ತಯಾರಾಗುವ ಹೊಸ ಐಫೋನ್‌ಗಳ ವಾಲ್ಯೂಮ್‌ ಅನ್ನು ತ್ವರಿತವಾಗಿ ಹೆಚ್ಚಿಸಲು ಪ್ರಯತ್ನಿಸುತ್ತಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಐಫೋನ್ 14 ಉತ್ಪಾದನೆಗೂ ಮುನ್ನ ಆಪಲ್‌ ಭಾರತದಲ್ಲಿ ತನ್ನ ಐಫೋನ್‌ಗಳನ್ನ ಒಂದು ಭಾಗವನ್ನು ಜೋಡಣೆ ಮಾತ್ರ ಮಾಡುತ್ತಿತ್ತು. ಚೀನಾಕ್ಕೆ ಹೋಲಿಸಿದರೆ ಉತ್ಪಾದನೆ 6 ರಿಂದ 9 ತಿಂಗಳವರೆಗೆ ಹಿಂದುಳಿದಿತ್ತು. ಕಳೆದ ಒಂದು ವರ್ಷದಿಂದ ಈ ವಿಳಂಬವನ್ನ ಕಡಿಮೆಗೊಳಿಸಲಾಗಿದೆ. ಮಾರ್ಚ್‌ ಅಂತ್ಯದಲ್ಲಿ ಆಪಲ್ 7% ಐಫೋನ್‌ ಉತ್ಪನ್ನಗಳನ್ನ ಭಾರತದಲ್ಲೇ ಉತ್ಪಾದಿಸಿದೆ. ಈ ವರ್ಷ ಈ ಅಂತರವನ್ನು ಪೂರ್ತಿಯಾಗಿ ತೊಡೆದು ಹಾಕುವ ಗುರಿಯನ್ನು ಕಂಪನಿ ಹೊಂದಿದೆ. ಇದು ಭಾರತದ ಐಫೋನ್ 15 ಉತ್ಪಾದನೆಯ ಪ್ರಮಾಣವು ಹೆಚ್ಚಾಗಿ ಆಮದು ಮಾಡಿಕೊಳ್ಳುವ ಬಿಡಿಭಾಗಗಳ ಲಭ್ಯತೆಯ ಮೇಲೆ ಅವಲಂಬಿತವಾಗಿರುತ್ತದೆ. ಜೊತೆಗೆ ಚೆನ್ನೈನ ಹೊರಗಿರುವ ಫಾಕ್ಸ್‌ಕಾನ್ ಕಾರ್ಖಾನೆಯಲ್ಲಿನ ಉತ್ಪಾದನಾ ಮಾರ್ಗಗಳ ಸುಗಮ ತಯಾರಿಯನ್ನೂ ಅವಲಂಬಿಸಿರುತ್ತದೆ.

ಹೊಸ ಐಫೋನ್ ಬಿಡುಗಡೆ ದಿನಾಂಕವನ್ನು ಸೆಪ್ಟೆಂಬರ್ 12 ರಂದು ಘೋಷಿಸುವ ಸಾಧ್ಯತೆಯಿದೆ. ಮೂರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಾಧನಕ್ಕೆ ಸಂಬಂಧಿಸಿದಂತೆ ಮೊದಲ ಅಪ್‌ಡೇಟ್ ಸಿಗಲಿದೆ. ನವೀಕೃತ ಕ್ಯಾಮೆರಾ ಸಿಸ್ಟಮ್‌, ಪ್ರೊ ಮಾದರಿಗಳಲ್ಲಿ ಸುಧಾರಿತ 3-ನ್ಯಾನೊಮೀಟರ್ ಎ16 ಪ್ರೊಸೆಸರ್ ಇರಲಿದೆ. ಭಾರತದಲ್ಲಿನ ಇತರ ಆಪಲ್ ಪೂರೈಕೆದಾರರಾದ ಪೆಗಾಟ್ರಾನ್ ಕಾರ್ಪ್ ಮತ್ತು ಟಾಟಾ ಗ್ರೂಪ್ ಸ್ವಾಧೀನಪಡಿಸಿಕೊಂಡಿರುವ ವಿಸ್ಟ್ರಾನ್ ಕಾರ್ಪ್ ಘಟಕವೂ ಶೀಘ್ರದಲ್ಲೇ ಐಫೋನ್ 15ರ ಜೋಡಣೆ ಆರಂಭಿಸಲಿದೆ ಎಂದು ತಿಳಿದುಬಂದಿದೆ.

ಆಪಲ್ ಭಾರತ ದೇಶದಾದ್ಯಂತ ಹೂಡಿಕೆ ಮಾಡಲು ಹಾಗೂ ಹೂಡಿಕೆ ಹೆಚ್ಚಿಸಲು ಬದ್ಧವಾಗಿದೆ ಎಂದು ಸಿಇಒ ಟಿಮ್ ಕುಕ್ ಅವರು ಏಪ್ರಿಲ್‌ನಲ್ಲಿ ತಮ್ಮ ಭಾರತ ಪ್ರವಾಸದ ಸಂದರ್ಭದಲ್ಲಿ ಮೋದಿ ಭೇಟಿ ಬಳಿಕ ಹೇಳಿದ್ದರು.

lokesh

Share
Published by
lokesh

Recent Posts

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

4 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

22 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

34 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

10 hours ago