ವಾಣಿಜ್ಯ

ತಮಿಳುನಾಡಿನಲ್ಲಿ ಐಫೋನ್ ಉತ್ಪಾದನೆ ಆರಂಭಿಸಿದ ಫಾಕ್ಸ್‌ಕಾನ್‌

ಚೆನ್ನೈ‌ : ಆಪಲ್‌ ಇಂಕ್‌ ತಮಿಳುನಾಡಿನಲ್ಲಿ ಐಫೋನ್-15ರ ಉತ್ಪಾದನೆ ಪ್ರಾರಂಭಿಸಿದೆ. ಫಾಕ್ಸ್‌ಕಾನ್ ಟೆಕ್ನಾಲಜಿ ಗ್ರೂಪ್ ಘಟಕವು ಶ್ರೀಪೆರಂಬದೂರಿನಲ್ಲಿರುವ ಉತ್ಪಾದನೆಗೆ ಬೇಕಾದ ಎಲ್ಲ ಸಿದ್ಧತೆ ಆರಂಭಿಸಿದೆ.

ಈ ಮೂಲಕ ಭಾರತ ಮತ್ತು ಚೀನಾದಲ್ಲಿನ ಮುಖ್ಯ ಉತ್ಪಾದನಾ ನೆಲೆಯ ಅಂತರವನ್ನು ಮತ್ತಷ್ಟು ಕಡಿಮೆಗೊಳಿಸುವ ಪ್ರಯತ್ನಕ್ಕೆ ಮುಂದಾಗಿದೆ. ಹೊಸ ಐಫೋನ್ ಬಿಡುಗಡೆ ದಿನಾಂಕವನ್ನ ಸೆಪ್ಟೆಂಬರ್ 12 ರಂದು ಘೋಷಿಸುವ ಸಾಧ್ಯತೆಯಿದೆ.

ಚೀನಾದ ಘಟಕಗಳು ಹೊಸ ಸಾಧನಗಳ ಪೂರೈಕೆ ಆರಂಭಿಸಿದ್ದು, ಇದಾದ ಒಂದು ವಾರಗಳ ಬಳಿಕ ಈ ಬೆಳವಣಿಗೆ ಕಂಡುಬಂದಿದೆ. ಆಪಲ್‌ ಕಂಪನಿಯು ಭಾರತದಲ್ಲಿ ತಯಾರಾಗುವ ಹೊಸ ಐಫೋನ್‌ಗಳ ವಾಲ್ಯೂಮ್‌ ಅನ್ನು ತ್ವರಿತವಾಗಿ ಹೆಚ್ಚಿಸಲು ಪ್ರಯತ್ನಿಸುತ್ತಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಐಫೋನ್ 14 ಉತ್ಪಾದನೆಗೂ ಮುನ್ನ ಆಪಲ್‌ ಭಾರತದಲ್ಲಿ ತನ್ನ ಐಫೋನ್‌ಗಳನ್ನ ಒಂದು ಭಾಗವನ್ನು ಜೋಡಣೆ ಮಾತ್ರ ಮಾಡುತ್ತಿತ್ತು. ಚೀನಾಕ್ಕೆ ಹೋಲಿಸಿದರೆ ಉತ್ಪಾದನೆ 6 ರಿಂದ 9 ತಿಂಗಳವರೆಗೆ ಹಿಂದುಳಿದಿತ್ತು. ಕಳೆದ ಒಂದು ವರ್ಷದಿಂದ ಈ ವಿಳಂಬವನ್ನ ಕಡಿಮೆಗೊಳಿಸಲಾಗಿದೆ. ಮಾರ್ಚ್‌ ಅಂತ್ಯದಲ್ಲಿ ಆಪಲ್ 7% ಐಫೋನ್‌ ಉತ್ಪನ್ನಗಳನ್ನ ಭಾರತದಲ್ಲೇ ಉತ್ಪಾದಿಸಿದೆ. ಈ ವರ್ಷ ಈ ಅಂತರವನ್ನು ಪೂರ್ತಿಯಾಗಿ ತೊಡೆದು ಹಾಕುವ ಗುರಿಯನ್ನು ಕಂಪನಿ ಹೊಂದಿದೆ. ಇದು ಭಾರತದ ಐಫೋನ್ 15 ಉತ್ಪಾದನೆಯ ಪ್ರಮಾಣವು ಹೆಚ್ಚಾಗಿ ಆಮದು ಮಾಡಿಕೊಳ್ಳುವ ಬಿಡಿಭಾಗಗಳ ಲಭ್ಯತೆಯ ಮೇಲೆ ಅವಲಂಬಿತವಾಗಿರುತ್ತದೆ. ಜೊತೆಗೆ ಚೆನ್ನೈನ ಹೊರಗಿರುವ ಫಾಕ್ಸ್‌ಕಾನ್ ಕಾರ್ಖಾನೆಯಲ್ಲಿನ ಉತ್ಪಾದನಾ ಮಾರ್ಗಗಳ ಸುಗಮ ತಯಾರಿಯನ್ನೂ ಅವಲಂಬಿಸಿರುತ್ತದೆ.

ಹೊಸ ಐಫೋನ್ ಬಿಡುಗಡೆ ದಿನಾಂಕವನ್ನು ಸೆಪ್ಟೆಂಬರ್ 12 ರಂದು ಘೋಷಿಸುವ ಸಾಧ್ಯತೆಯಿದೆ. ಮೂರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಾಧನಕ್ಕೆ ಸಂಬಂಧಿಸಿದಂತೆ ಮೊದಲ ಅಪ್‌ಡೇಟ್ ಸಿಗಲಿದೆ. ನವೀಕೃತ ಕ್ಯಾಮೆರಾ ಸಿಸ್ಟಮ್‌, ಪ್ರೊ ಮಾದರಿಗಳಲ್ಲಿ ಸುಧಾರಿತ 3-ನ್ಯಾನೊಮೀಟರ್ ಎ16 ಪ್ರೊಸೆಸರ್ ಇರಲಿದೆ. ಭಾರತದಲ್ಲಿನ ಇತರ ಆಪಲ್ ಪೂರೈಕೆದಾರರಾದ ಪೆಗಾಟ್ರಾನ್ ಕಾರ್ಪ್ ಮತ್ತು ಟಾಟಾ ಗ್ರೂಪ್ ಸ್ವಾಧೀನಪಡಿಸಿಕೊಂಡಿರುವ ವಿಸ್ಟ್ರಾನ್ ಕಾರ್ಪ್ ಘಟಕವೂ ಶೀಘ್ರದಲ್ಲೇ ಐಫೋನ್ 15ರ ಜೋಡಣೆ ಆರಂಭಿಸಲಿದೆ ಎಂದು ತಿಳಿದುಬಂದಿದೆ.

ಆಪಲ್ ಭಾರತ ದೇಶದಾದ್ಯಂತ ಹೂಡಿಕೆ ಮಾಡಲು ಹಾಗೂ ಹೂಡಿಕೆ ಹೆಚ್ಚಿಸಲು ಬದ್ಧವಾಗಿದೆ ಎಂದು ಸಿಇಒ ಟಿಮ್ ಕುಕ್ ಅವರು ಏಪ್ರಿಲ್‌ನಲ್ಲಿ ತಮ್ಮ ಭಾರತ ಪ್ರವಾಸದ ಸಂದರ್ಭದಲ್ಲಿ ಮೋದಿ ಭೇಟಿ ಬಳಿಕ ಹೇಳಿದ್ದರು.

lokesh

Share
Published by
lokesh

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

8 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

10 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

11 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

11 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

11 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

11 hours ago