ವಾಣಿಜ್ಯ

ತಮಿಳುನಾಡಿನಲ್ಲಿ ಐಫೋನ್ ಉತ್ಪಾದನೆ ಆರಂಭಿಸಿದ ಫಾಕ್ಸ್‌ಕಾನ್‌

ಚೆನ್ನೈ‌ : ಆಪಲ್‌ ಇಂಕ್‌ ತಮಿಳುನಾಡಿನಲ್ಲಿ ಐಫೋನ್-15ರ ಉತ್ಪಾದನೆ ಪ್ರಾರಂಭಿಸಿದೆ. ಫಾಕ್ಸ್‌ಕಾನ್ ಟೆಕ್ನಾಲಜಿ ಗ್ರೂಪ್ ಘಟಕವು ಶ್ರೀಪೆರಂಬದೂರಿನಲ್ಲಿರುವ ಉತ್ಪಾದನೆಗೆ ಬೇಕಾದ ಎಲ್ಲ ಸಿದ್ಧತೆ ಆರಂಭಿಸಿದೆ.

ಈ ಮೂಲಕ ಭಾರತ ಮತ್ತು ಚೀನಾದಲ್ಲಿನ ಮುಖ್ಯ ಉತ್ಪಾದನಾ ನೆಲೆಯ ಅಂತರವನ್ನು ಮತ್ತಷ್ಟು ಕಡಿಮೆಗೊಳಿಸುವ ಪ್ರಯತ್ನಕ್ಕೆ ಮುಂದಾಗಿದೆ. ಹೊಸ ಐಫೋನ್ ಬಿಡುಗಡೆ ದಿನಾಂಕವನ್ನ ಸೆಪ್ಟೆಂಬರ್ 12 ರಂದು ಘೋಷಿಸುವ ಸಾಧ್ಯತೆಯಿದೆ.

ಚೀನಾದ ಘಟಕಗಳು ಹೊಸ ಸಾಧನಗಳ ಪೂರೈಕೆ ಆರಂಭಿಸಿದ್ದು, ಇದಾದ ಒಂದು ವಾರಗಳ ಬಳಿಕ ಈ ಬೆಳವಣಿಗೆ ಕಂಡುಬಂದಿದೆ. ಆಪಲ್‌ ಕಂಪನಿಯು ಭಾರತದಲ್ಲಿ ತಯಾರಾಗುವ ಹೊಸ ಐಫೋನ್‌ಗಳ ವಾಲ್ಯೂಮ್‌ ಅನ್ನು ತ್ವರಿತವಾಗಿ ಹೆಚ್ಚಿಸಲು ಪ್ರಯತ್ನಿಸುತ್ತಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಐಫೋನ್ 14 ಉತ್ಪಾದನೆಗೂ ಮುನ್ನ ಆಪಲ್‌ ಭಾರತದಲ್ಲಿ ತನ್ನ ಐಫೋನ್‌ಗಳನ್ನ ಒಂದು ಭಾಗವನ್ನು ಜೋಡಣೆ ಮಾತ್ರ ಮಾಡುತ್ತಿತ್ತು. ಚೀನಾಕ್ಕೆ ಹೋಲಿಸಿದರೆ ಉತ್ಪಾದನೆ 6 ರಿಂದ 9 ತಿಂಗಳವರೆಗೆ ಹಿಂದುಳಿದಿತ್ತು. ಕಳೆದ ಒಂದು ವರ್ಷದಿಂದ ಈ ವಿಳಂಬವನ್ನ ಕಡಿಮೆಗೊಳಿಸಲಾಗಿದೆ. ಮಾರ್ಚ್‌ ಅಂತ್ಯದಲ್ಲಿ ಆಪಲ್ 7% ಐಫೋನ್‌ ಉತ್ಪನ್ನಗಳನ್ನ ಭಾರತದಲ್ಲೇ ಉತ್ಪಾದಿಸಿದೆ. ಈ ವರ್ಷ ಈ ಅಂತರವನ್ನು ಪೂರ್ತಿಯಾಗಿ ತೊಡೆದು ಹಾಕುವ ಗುರಿಯನ್ನು ಕಂಪನಿ ಹೊಂದಿದೆ. ಇದು ಭಾರತದ ಐಫೋನ್ 15 ಉತ್ಪಾದನೆಯ ಪ್ರಮಾಣವು ಹೆಚ್ಚಾಗಿ ಆಮದು ಮಾಡಿಕೊಳ್ಳುವ ಬಿಡಿಭಾಗಗಳ ಲಭ್ಯತೆಯ ಮೇಲೆ ಅವಲಂಬಿತವಾಗಿರುತ್ತದೆ. ಜೊತೆಗೆ ಚೆನ್ನೈನ ಹೊರಗಿರುವ ಫಾಕ್ಸ್‌ಕಾನ್ ಕಾರ್ಖಾನೆಯಲ್ಲಿನ ಉತ್ಪಾದನಾ ಮಾರ್ಗಗಳ ಸುಗಮ ತಯಾರಿಯನ್ನೂ ಅವಲಂಬಿಸಿರುತ್ತದೆ.

ಹೊಸ ಐಫೋನ್ ಬಿಡುಗಡೆ ದಿನಾಂಕವನ್ನು ಸೆಪ್ಟೆಂಬರ್ 12 ರಂದು ಘೋಷಿಸುವ ಸಾಧ್ಯತೆಯಿದೆ. ಮೂರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಾಧನಕ್ಕೆ ಸಂಬಂಧಿಸಿದಂತೆ ಮೊದಲ ಅಪ್‌ಡೇಟ್ ಸಿಗಲಿದೆ. ನವೀಕೃತ ಕ್ಯಾಮೆರಾ ಸಿಸ್ಟಮ್‌, ಪ್ರೊ ಮಾದರಿಗಳಲ್ಲಿ ಸುಧಾರಿತ 3-ನ್ಯಾನೊಮೀಟರ್ ಎ16 ಪ್ರೊಸೆಸರ್ ಇರಲಿದೆ. ಭಾರತದಲ್ಲಿನ ಇತರ ಆಪಲ್ ಪೂರೈಕೆದಾರರಾದ ಪೆಗಾಟ್ರಾನ್ ಕಾರ್ಪ್ ಮತ್ತು ಟಾಟಾ ಗ್ರೂಪ್ ಸ್ವಾಧೀನಪಡಿಸಿಕೊಂಡಿರುವ ವಿಸ್ಟ್ರಾನ್ ಕಾರ್ಪ್ ಘಟಕವೂ ಶೀಘ್ರದಲ್ಲೇ ಐಫೋನ್ 15ರ ಜೋಡಣೆ ಆರಂಭಿಸಲಿದೆ ಎಂದು ತಿಳಿದುಬಂದಿದೆ.

ಆಪಲ್ ಭಾರತ ದೇಶದಾದ್ಯಂತ ಹೂಡಿಕೆ ಮಾಡಲು ಹಾಗೂ ಹೂಡಿಕೆ ಹೆಚ್ಚಿಸಲು ಬದ್ಧವಾಗಿದೆ ಎಂದು ಸಿಇಒ ಟಿಮ್ ಕುಕ್ ಅವರು ಏಪ್ರಿಲ್‌ನಲ್ಲಿ ತಮ್ಮ ಭಾರತ ಪ್ರವಾಸದ ಸಂದರ್ಭದಲ್ಲಿ ಮೋದಿ ಭೇಟಿ ಬಳಿಕ ಹೇಳಿದ್ದರು.

lokesh

Share
Published by
lokesh

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

3 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

7 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

9 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

10 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

11 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

14 hours ago