ವಾಣಿಜ್ಯ

ತಮಿಳುನಾಡಿನಲ್ಲಿ ಐಫೋನ್ ಉತ್ಪಾದನೆ ಆರಂಭಿಸಿದ ಫಾಕ್ಸ್‌ಕಾನ್‌

ಚೆನ್ನೈ‌ : ಆಪಲ್‌ ಇಂಕ್‌ ತಮಿಳುನಾಡಿನಲ್ಲಿ ಐಫೋನ್-15ರ ಉತ್ಪಾದನೆ ಪ್ರಾರಂಭಿಸಿದೆ. ಫಾಕ್ಸ್‌ಕಾನ್ ಟೆಕ್ನಾಲಜಿ ಗ್ರೂಪ್ ಘಟಕವು ಶ್ರೀಪೆರಂಬದೂರಿನಲ್ಲಿರುವ ಉತ್ಪಾದನೆಗೆ ಬೇಕಾದ ಎಲ್ಲ ಸಿದ್ಧತೆ ಆರಂಭಿಸಿದೆ.

ಈ ಮೂಲಕ ಭಾರತ ಮತ್ತು ಚೀನಾದಲ್ಲಿನ ಮುಖ್ಯ ಉತ್ಪಾದನಾ ನೆಲೆಯ ಅಂತರವನ್ನು ಮತ್ತಷ್ಟು ಕಡಿಮೆಗೊಳಿಸುವ ಪ್ರಯತ್ನಕ್ಕೆ ಮುಂದಾಗಿದೆ. ಹೊಸ ಐಫೋನ್ ಬಿಡುಗಡೆ ದಿನಾಂಕವನ್ನ ಸೆಪ್ಟೆಂಬರ್ 12 ರಂದು ಘೋಷಿಸುವ ಸಾಧ್ಯತೆಯಿದೆ.

ಚೀನಾದ ಘಟಕಗಳು ಹೊಸ ಸಾಧನಗಳ ಪೂರೈಕೆ ಆರಂಭಿಸಿದ್ದು, ಇದಾದ ಒಂದು ವಾರಗಳ ಬಳಿಕ ಈ ಬೆಳವಣಿಗೆ ಕಂಡುಬಂದಿದೆ. ಆಪಲ್‌ ಕಂಪನಿಯು ಭಾರತದಲ್ಲಿ ತಯಾರಾಗುವ ಹೊಸ ಐಫೋನ್‌ಗಳ ವಾಲ್ಯೂಮ್‌ ಅನ್ನು ತ್ವರಿತವಾಗಿ ಹೆಚ್ಚಿಸಲು ಪ್ರಯತ್ನಿಸುತ್ತಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಐಫೋನ್ 14 ಉತ್ಪಾದನೆಗೂ ಮುನ್ನ ಆಪಲ್‌ ಭಾರತದಲ್ಲಿ ತನ್ನ ಐಫೋನ್‌ಗಳನ್ನ ಒಂದು ಭಾಗವನ್ನು ಜೋಡಣೆ ಮಾತ್ರ ಮಾಡುತ್ತಿತ್ತು. ಚೀನಾಕ್ಕೆ ಹೋಲಿಸಿದರೆ ಉತ್ಪಾದನೆ 6 ರಿಂದ 9 ತಿಂಗಳವರೆಗೆ ಹಿಂದುಳಿದಿತ್ತು. ಕಳೆದ ಒಂದು ವರ್ಷದಿಂದ ಈ ವಿಳಂಬವನ್ನ ಕಡಿಮೆಗೊಳಿಸಲಾಗಿದೆ. ಮಾರ್ಚ್‌ ಅಂತ್ಯದಲ್ಲಿ ಆಪಲ್ 7% ಐಫೋನ್‌ ಉತ್ಪನ್ನಗಳನ್ನ ಭಾರತದಲ್ಲೇ ಉತ್ಪಾದಿಸಿದೆ. ಈ ವರ್ಷ ಈ ಅಂತರವನ್ನು ಪೂರ್ತಿಯಾಗಿ ತೊಡೆದು ಹಾಕುವ ಗುರಿಯನ್ನು ಕಂಪನಿ ಹೊಂದಿದೆ. ಇದು ಭಾರತದ ಐಫೋನ್ 15 ಉತ್ಪಾದನೆಯ ಪ್ರಮಾಣವು ಹೆಚ್ಚಾಗಿ ಆಮದು ಮಾಡಿಕೊಳ್ಳುವ ಬಿಡಿಭಾಗಗಳ ಲಭ್ಯತೆಯ ಮೇಲೆ ಅವಲಂಬಿತವಾಗಿರುತ್ತದೆ. ಜೊತೆಗೆ ಚೆನ್ನೈನ ಹೊರಗಿರುವ ಫಾಕ್ಸ್‌ಕಾನ್ ಕಾರ್ಖಾನೆಯಲ್ಲಿನ ಉತ್ಪಾದನಾ ಮಾರ್ಗಗಳ ಸುಗಮ ತಯಾರಿಯನ್ನೂ ಅವಲಂಬಿಸಿರುತ್ತದೆ.

ಹೊಸ ಐಫೋನ್ ಬಿಡುಗಡೆ ದಿನಾಂಕವನ್ನು ಸೆಪ್ಟೆಂಬರ್ 12 ರಂದು ಘೋಷಿಸುವ ಸಾಧ್ಯತೆಯಿದೆ. ಮೂರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಾಧನಕ್ಕೆ ಸಂಬಂಧಿಸಿದಂತೆ ಮೊದಲ ಅಪ್‌ಡೇಟ್ ಸಿಗಲಿದೆ. ನವೀಕೃತ ಕ್ಯಾಮೆರಾ ಸಿಸ್ಟಮ್‌, ಪ್ರೊ ಮಾದರಿಗಳಲ್ಲಿ ಸುಧಾರಿತ 3-ನ್ಯಾನೊಮೀಟರ್ ಎ16 ಪ್ರೊಸೆಸರ್ ಇರಲಿದೆ. ಭಾರತದಲ್ಲಿನ ಇತರ ಆಪಲ್ ಪೂರೈಕೆದಾರರಾದ ಪೆಗಾಟ್ರಾನ್ ಕಾರ್ಪ್ ಮತ್ತು ಟಾಟಾ ಗ್ರೂಪ್ ಸ್ವಾಧೀನಪಡಿಸಿಕೊಂಡಿರುವ ವಿಸ್ಟ್ರಾನ್ ಕಾರ್ಪ್ ಘಟಕವೂ ಶೀಘ್ರದಲ್ಲೇ ಐಫೋನ್ 15ರ ಜೋಡಣೆ ಆರಂಭಿಸಲಿದೆ ಎಂದು ತಿಳಿದುಬಂದಿದೆ.

ಆಪಲ್ ಭಾರತ ದೇಶದಾದ್ಯಂತ ಹೂಡಿಕೆ ಮಾಡಲು ಹಾಗೂ ಹೂಡಿಕೆ ಹೆಚ್ಚಿಸಲು ಬದ್ಧವಾಗಿದೆ ಎಂದು ಸಿಇಒ ಟಿಮ್ ಕುಕ್ ಅವರು ಏಪ್ರಿಲ್‌ನಲ್ಲಿ ತಮ್ಮ ಭಾರತ ಪ್ರವಾಸದ ಸಂದರ್ಭದಲ್ಲಿ ಮೋದಿ ಭೇಟಿ ಬಳಿಕ ಹೇಳಿದ್ದರು.

lokesh

Share
Published by
lokesh

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

15 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

15 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

18 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

20 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

20 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

2 days ago