ವಾಣಿಜ್ಯ

ತಮಿಳುನಾಡಿನಲ್ಲಿ ಐಫೋನ್ ಉತ್ಪಾದನೆ ಆರಂಭಿಸಿದ ಫಾಕ್ಸ್‌ಕಾನ್‌

ಚೆನ್ನೈ‌ : ಆಪಲ್‌ ಇಂಕ್‌ ತಮಿಳುನಾಡಿನಲ್ಲಿ ಐಫೋನ್-15ರ ಉತ್ಪಾದನೆ ಪ್ರಾರಂಭಿಸಿದೆ. ಫಾಕ್ಸ್‌ಕಾನ್ ಟೆಕ್ನಾಲಜಿ ಗ್ರೂಪ್ ಘಟಕವು ಶ್ರೀಪೆರಂಬದೂರಿನಲ್ಲಿರುವ ಉತ್ಪಾದನೆಗೆ ಬೇಕಾದ ಎಲ್ಲ ಸಿದ್ಧತೆ ಆರಂಭಿಸಿದೆ.

ಈ ಮೂಲಕ ಭಾರತ ಮತ್ತು ಚೀನಾದಲ್ಲಿನ ಮುಖ್ಯ ಉತ್ಪಾದನಾ ನೆಲೆಯ ಅಂತರವನ್ನು ಮತ್ತಷ್ಟು ಕಡಿಮೆಗೊಳಿಸುವ ಪ್ರಯತ್ನಕ್ಕೆ ಮುಂದಾಗಿದೆ. ಹೊಸ ಐಫೋನ್ ಬಿಡುಗಡೆ ದಿನಾಂಕವನ್ನ ಸೆಪ್ಟೆಂಬರ್ 12 ರಂದು ಘೋಷಿಸುವ ಸಾಧ್ಯತೆಯಿದೆ.

ಚೀನಾದ ಘಟಕಗಳು ಹೊಸ ಸಾಧನಗಳ ಪೂರೈಕೆ ಆರಂಭಿಸಿದ್ದು, ಇದಾದ ಒಂದು ವಾರಗಳ ಬಳಿಕ ಈ ಬೆಳವಣಿಗೆ ಕಂಡುಬಂದಿದೆ. ಆಪಲ್‌ ಕಂಪನಿಯು ಭಾರತದಲ್ಲಿ ತಯಾರಾಗುವ ಹೊಸ ಐಫೋನ್‌ಗಳ ವಾಲ್ಯೂಮ್‌ ಅನ್ನು ತ್ವರಿತವಾಗಿ ಹೆಚ್ಚಿಸಲು ಪ್ರಯತ್ನಿಸುತ್ತಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಐಫೋನ್ 14 ಉತ್ಪಾದನೆಗೂ ಮುನ್ನ ಆಪಲ್‌ ಭಾರತದಲ್ಲಿ ತನ್ನ ಐಫೋನ್‌ಗಳನ್ನ ಒಂದು ಭಾಗವನ್ನು ಜೋಡಣೆ ಮಾತ್ರ ಮಾಡುತ್ತಿತ್ತು. ಚೀನಾಕ್ಕೆ ಹೋಲಿಸಿದರೆ ಉತ್ಪಾದನೆ 6 ರಿಂದ 9 ತಿಂಗಳವರೆಗೆ ಹಿಂದುಳಿದಿತ್ತು. ಕಳೆದ ಒಂದು ವರ್ಷದಿಂದ ಈ ವಿಳಂಬವನ್ನ ಕಡಿಮೆಗೊಳಿಸಲಾಗಿದೆ. ಮಾರ್ಚ್‌ ಅಂತ್ಯದಲ್ಲಿ ಆಪಲ್ 7% ಐಫೋನ್‌ ಉತ್ಪನ್ನಗಳನ್ನ ಭಾರತದಲ್ಲೇ ಉತ್ಪಾದಿಸಿದೆ. ಈ ವರ್ಷ ಈ ಅಂತರವನ್ನು ಪೂರ್ತಿಯಾಗಿ ತೊಡೆದು ಹಾಕುವ ಗುರಿಯನ್ನು ಕಂಪನಿ ಹೊಂದಿದೆ. ಇದು ಭಾರತದ ಐಫೋನ್ 15 ಉತ್ಪಾದನೆಯ ಪ್ರಮಾಣವು ಹೆಚ್ಚಾಗಿ ಆಮದು ಮಾಡಿಕೊಳ್ಳುವ ಬಿಡಿಭಾಗಗಳ ಲಭ್ಯತೆಯ ಮೇಲೆ ಅವಲಂಬಿತವಾಗಿರುತ್ತದೆ. ಜೊತೆಗೆ ಚೆನ್ನೈನ ಹೊರಗಿರುವ ಫಾಕ್ಸ್‌ಕಾನ್ ಕಾರ್ಖಾನೆಯಲ್ಲಿನ ಉತ್ಪಾದನಾ ಮಾರ್ಗಗಳ ಸುಗಮ ತಯಾರಿಯನ್ನೂ ಅವಲಂಬಿಸಿರುತ್ತದೆ.

ಹೊಸ ಐಫೋನ್ ಬಿಡುಗಡೆ ದಿನಾಂಕವನ್ನು ಸೆಪ್ಟೆಂಬರ್ 12 ರಂದು ಘೋಷಿಸುವ ಸಾಧ್ಯತೆಯಿದೆ. ಮೂರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಾಧನಕ್ಕೆ ಸಂಬಂಧಿಸಿದಂತೆ ಮೊದಲ ಅಪ್‌ಡೇಟ್ ಸಿಗಲಿದೆ. ನವೀಕೃತ ಕ್ಯಾಮೆರಾ ಸಿಸ್ಟಮ್‌, ಪ್ರೊ ಮಾದರಿಗಳಲ್ಲಿ ಸುಧಾರಿತ 3-ನ್ಯಾನೊಮೀಟರ್ ಎ16 ಪ್ರೊಸೆಸರ್ ಇರಲಿದೆ. ಭಾರತದಲ್ಲಿನ ಇತರ ಆಪಲ್ ಪೂರೈಕೆದಾರರಾದ ಪೆಗಾಟ್ರಾನ್ ಕಾರ್ಪ್ ಮತ್ತು ಟಾಟಾ ಗ್ರೂಪ್ ಸ್ವಾಧೀನಪಡಿಸಿಕೊಂಡಿರುವ ವಿಸ್ಟ್ರಾನ್ ಕಾರ್ಪ್ ಘಟಕವೂ ಶೀಘ್ರದಲ್ಲೇ ಐಫೋನ್ 15ರ ಜೋಡಣೆ ಆರಂಭಿಸಲಿದೆ ಎಂದು ತಿಳಿದುಬಂದಿದೆ.

ಆಪಲ್ ಭಾರತ ದೇಶದಾದ್ಯಂತ ಹೂಡಿಕೆ ಮಾಡಲು ಹಾಗೂ ಹೂಡಿಕೆ ಹೆಚ್ಚಿಸಲು ಬದ್ಧವಾಗಿದೆ ಎಂದು ಸಿಇಒ ಟಿಮ್ ಕುಕ್ ಅವರು ಏಪ್ರಿಲ್‌ನಲ್ಲಿ ತಮ್ಮ ಭಾರತ ಪ್ರವಾಸದ ಸಂದರ್ಭದಲ್ಲಿ ಮೋದಿ ಭೇಟಿ ಬಳಿಕ ಹೇಳಿದ್ದರು.

lokesh

Share
Published by
lokesh

Recent Posts

ದ ಗ್ರೇಟ್‌ ನಿಕೋಬಾರ್‌ ಯೋಜನೆ : ವಿಕಾಸವೋ? ವಿನಾಶವೋ?

ಶುಭಾ ಖಟಾವಕರ ಮ್ಹೆತ್ರಸ್‌ 72,000 ಕೋಟಿ ರೂ.ಗಳಿಂದ 90,000 ಕೋಟಿ ರೂ.ವೆಚ್ಚದ ಯೋಜನೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ…

1 hour ago

ಕಳೆದ ಚುನಾವಣೆ : ಇಬ್ಬರು ಪರಿಣಿತರ ವಿಶ್ಲೇಷಣೆ

ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ…

2 hours ago

ತಾಯಂದಿರ ದಿನ ವಿಶೇಷ | ನನ್ನ ಕರುಳ ಕುಡಿ ನನ್ನದೇ ಆಯ್ಕೆ

ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ      ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…

3 hours ago

ಮಡಿಕೇರಿ | ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ; ಸಾರ್ವಜನಿಕೆ ಕೆಲಸ ವಿಳಂಬ

ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನಗರಸಭೆಯಲ್ಲಿ ಖಾಯಂ ಸಿಬ್ಬಂದಿ ಸಂಖ್ಯೆ ಕಡಿಮೆಯಿದ್ದು,…

3 hours ago

ಎಚ್.ಡಿ.ಕೋಟೆ | ಉತ್ತಮ ಮಳೆ ; ಕೃಷಿ ಚಟುವಟಿಕೆ ಚುರುಕುಗೊಳಿಸಿದ ರೈತರು

ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ…

3 hours ago

ಚಾ.ನಗರ ವಿ.ವಿ | ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪಿಎಚ್‌.ಡಿಗೆ ಅವಕಾಶ

ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ…

3 hours ago