ವಾಣಿಜ್ಯ

ಹಣಕೊಡದೇ ಟಿಕೆಟ್‌ ಪಡೆದು ರೈಲಿನಲ್ಲಿ ಪ್ರಯಾಣಿಸಿ…

ನವದೆಹಲಿ : ಟಿಕೆಟ್ ಗೆ ಕಾಸಿಲ್ಲದಿದ್ದರೂ ರೈಲಿನಲ್ಲಿ ಪ್ರಯಾಣಿಸುವ ಅವಕಾಶವನ್ನು ರೈಲ್ವೆ ಇಲಾಖೆ ನೀಡಿದೆ. ಆದರೆ, ನೀವು ಕ್ಯಾಷ್ ಇ ಪಾವತಿ ಆಯ್ಕೆ ಬಳಸಿ ಐಆರ್ ಟಿಸಿ ಆ್ಯಪ್ ನಲ್ಲಿ ಟಿಕೆಟ್ ಕಾಯ್ದಿರಿಸಬೇಕು, ಆದರೆ ಹಣವನ್ನು ಆಗಲೇ ಪಾವತಿಸಬೇಕಿಲ್ಲ, ಬದಲಿಗೆ ನಂತರ ಇಎಂಐ ಮೂಲಕ ಪಾವತಿ ಮಾಡಬಹುದು. ‘ಈಗ ಪ್ರಯಾಣಿಸಿ, ಆಮೇಲೆ ಪಾವತಿಸಿ’ ಎಂಬ ಈ ಹೊಸ ಯೋಜನೆಯನ್ನು ಭಾರತೀಯ ರೈಲ್ವೆ ಇಲಾಖೆಯ ಕ್ಯಾಟರಿಂಗ್ ಹಾಗೂ ಪ್ರವಾಸೋದ್ಯಮ ನಿಗಮವು ಹಣಕಾಸು ಸೇವೆಗಳನ್ನು ಒದಗಿಸುವ ಕ್ಯಾಶ್ ಇ ಸಂಸ್ಥೆ ಸಹಯೋಗದಲ್ಲಿ ಪರಿಚಯಿಸಿದೆ. ಈ ಸೇವೆಯು ರೈಲ್ವೆ ಇಲಾಖೆಯ ಐಆರ್ ಸಿಟಿಸಿ ಟ್ರಾವೆಲ್ ಆ್ಯಪ್ ನಲ್ಲಿ ಕ್ಯಾಶ್ ಇ ಪಾವತಿ ಆಯ್ಕೆ ಮೂಲಕ ಟಿಕೆಟ್ ಬುಕ್ ಮಾಡಿ ಹಣವನ್ನು 3 ಅಥವಾ 6 ತಿಂಗಳ ಅವಧಿಯ ತನಕದ ಇಎಂಐ ಮೂಲಕ ಪಾವತಿಸುವ ಅವಕಾಶವನ್ನು ಕಲ್ಪಿಸಿದೆ. ಇಎಂಐ ಪಾವತಿ ಆಯ್ಕೆಯು ಐಆರ್ ಸಿಟಿಸಿ ಟ್ರಾವೆಲ್  ಆ್ಯಪ್ ನಲ್ಲಿ ಕಾಯ್ದಿರಿಸಿದ ಹಾಗೂ ತತ್ಕಾಲ ಟಿಕೆಟ್ ಗಳ ಬುಕ್ಕಿಂಗ್ ಗೆ ಇರುವ ಚೆಕ್ ಔಟ್ ಪುಟದಲ್ಲಿದೆ.

ಕ್ಯಾಶ್ ಇಯ ಟಿಎನ್ ಪಿಎಲ್ ಇಎಂಐ ಪಾವತಿ ಆಯ್ಕೆ ಈ ಸೌಲಭ್ಯವನ್ನು ಯಾವುದೇ ದಾಖಲೆಗಳ ಅಗತ್ಯವಿಲ್ಲದೆ ಎಲ್ಲ ಬಳಕೆದಾರರು ಬಳಸಲು ಅನುವು ನೀಡಿದೆ. ಹೀಗಾಗಿ ಕ್ಯಾಶ್ ಇ ಟಿಎನ್ ಪಿಎಲ್ ಇಎಂಐ ಆಯ್ಕೆಯನ್ನು ಪ್ರಯಾಣಿಕರು ಸುಲಭವಾಗಿ ಬಳಸಿಕೊಳ್ಳಬಹುದು. ಐಆರ್ ಟಿಸಿ ಆ್ಯಪ್ 9 ಕೋಟಿ ಬಾರಿ ಡೌನ್ ಲೋಡ್ ಆಗಿದೆ. ಇದರ ಮೂಲಕ ಪ್ರತಿ ದಿನ 15 ಲಕ್ಷ ರೈಲ್ವೆ ಟಿಕೆಟ್ ಗಳನ್ನು ಕಾಯ್ದಿರಿಸಲಾಗುತ್ತಿದೆ.

‘ಐಆರ್ ಸಿಟಿಸಿ ನೆರವಿನಿಂದ ಇದು ಭಾರತದ ಅತೀದೊಡ್ಡ ಈಗ ಪ್ರಯಾಣಿಸಿ ನಂತರ ಪಾವತಿಸಿ ಎಂಬ ಇಎಂಐ ಪಾವತಿ ವ್ಯವಸ್ಥೆಯಾಗಿದೆ. ಐಆರ್ ಸಿಟಿಸಿ ಜೊತೆಗಿನ ನಮ್ಮ ಸಹಯೋಗ ದೇಶದಲ್ಲಿ ಡಿಜಿಟಲ್ ಇಎಂಐ ಪಾವತಿಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಇನ್ನೊಂದು ಹೆಜ್ಜೆಯಾಗಿದೆ. ಈ ಸಹಭಾಗಿತ್ವವು ಕ್ಯಾಶ್ ಇಗೆ ಐಆರ್ ಸಿಟಿಸಿಯ ಲಕ್ಷಾಂತರ ಗ್ರಾಹಕರನ್ನು ತಲುಪಲು ಹಾಗೂ ಅವರಿಗೆ ಈ ಹಿಂದೆ ಎಂದೂ ಸಿಗದ ಹಾಗೂ ಈಗ ಆರಾಮದಾಯಕವಾಗಿ ಪ್ರಯಾಣಿಸಿ ನಂತರ ಅವರ ರೈಲ್ವೆ ಟಿಕೆಟ್ ಗೆ ಇಎಂಐ ಮುಖಾಂತರ ಹಣ ಪಾವತಿಸುವ ಅವಕಾಶ ಕಲ್ಪಿಸಿದೆ’ ಎಂದು ಕ್ಯಾಶ್ ಇ ಸಂಸ್ಥಾಪಕ ಅಧ್ಯಕ್ಷ ವಿ.ರಮಣ್ ಕುಮಾರ್ ತಿಳಿಸಿದ್ದಾರೆ.

ಕ್ಯಾಶ್ ಇ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ. ಈಗ ಟಿಕೆಟ್ ಖರೀದಿಸಿ ನಂತರ ಪಾವತಿ ಮಾಡುವ ಆಯ್ಕೆ ನೀಡಿದ್ರೆ ಮೋಸ ಹೋಗುವ ಸಾಧ್ಯತೆ ಇಲ್ವಾ? ಎಂಬ ಪ್ರಶ್ನೆಯೂ ಮೂಡಬಹುದು. ಕ್ಯಾಶ್ ಇ ಕೃತಕ ಬುದ್ಧಿಮತ್ತೆ ಆಧಾರಿತ ಅಲ್ಗೊರಿಥಮ್ ಪ್ಲ್ಯಾಟ್ ಫಾರ್ಮ್ ನಲ್ಲಿ ಸೋಷಿಯಲ್ ಲೋನ್ ಕೋಟಿಂಟ್ ಮೂಲಕ ಕಾರ್ಯನಿರ್ವಹಿಸುತ್ತದೆ. ಈ SLQ ಸಾಲಗಾರನ ಪಾವತಿ ಸಾಮರ್ಥ್ಯವನ್ನು ಆತನ ಸೋಷಿಯಲ್ ಮೀಡಿಯಾ ಹಾಗೂ ಮೊಬೈಲ್ ದತ್ತಾಂಶಗಳ ಆಧಾರದಲ್ಲಿ ಗ್ರಹಿಸುತ್ತದೆ. ಆ ಬಳಿಕ ಆತ ಇಎಂಐ ಸೌಲಭ್ಯ ಪಡೆಲು ಅರ್ಹ ಹೌದು, ಅಲ್ಲ ಎಂಬುದನ್ನು ನಿರ್ಧರಿಸುತ್ತದೆ. ಇಎಂಐ ಮೂಲಕ ರೈಲ್ವೆ ಟಿಕೆಟ್ ಹಣ ಪಾವತಿಸುವ ವ್ಯವಸ್ಥೆ ತುರ್ತು ಸಂದರ್ಭದಲ್ಲಿ ಅನೇಕ ರೈಲ್ವೆ ಪ್ರಯಾಣಿಕರಿಗೆ ನೆರವಾಗೋದರಲ್ಲಿ ಸಂಶಯವಿಲ್ಲ.

andolana

Share
Published by
andolana

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

7 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

7 hours ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

7 hours ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

7 hours ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

10 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

10 hours ago