ವಾಣಿಜ್ಯ

ಹಣಕೊಡದೇ ಟಿಕೆಟ್‌ ಪಡೆದು ರೈಲಿನಲ್ಲಿ ಪ್ರಯಾಣಿಸಿ…

ನವದೆಹಲಿ : ಟಿಕೆಟ್ ಗೆ ಕಾಸಿಲ್ಲದಿದ್ದರೂ ರೈಲಿನಲ್ಲಿ ಪ್ರಯಾಣಿಸುವ ಅವಕಾಶವನ್ನು ರೈಲ್ವೆ ಇಲಾಖೆ ನೀಡಿದೆ. ಆದರೆ, ನೀವು ಕ್ಯಾಷ್ ಇ ಪಾವತಿ ಆಯ್ಕೆ ಬಳಸಿ ಐಆರ್ ಟಿಸಿ ಆ್ಯಪ್ ನಲ್ಲಿ ಟಿಕೆಟ್ ಕಾಯ್ದಿರಿಸಬೇಕು, ಆದರೆ ಹಣವನ್ನು ಆಗಲೇ ಪಾವತಿಸಬೇಕಿಲ್ಲ, ಬದಲಿಗೆ ನಂತರ ಇಎಂಐ ಮೂಲಕ ಪಾವತಿ ಮಾಡಬಹುದು. ‘ಈಗ ಪ್ರಯಾಣಿಸಿ, ಆಮೇಲೆ ಪಾವತಿಸಿ’ ಎಂಬ ಈ ಹೊಸ ಯೋಜನೆಯನ್ನು ಭಾರತೀಯ ರೈಲ್ವೆ ಇಲಾಖೆಯ ಕ್ಯಾಟರಿಂಗ್ ಹಾಗೂ ಪ್ರವಾಸೋದ್ಯಮ ನಿಗಮವು ಹಣಕಾಸು ಸೇವೆಗಳನ್ನು ಒದಗಿಸುವ ಕ್ಯಾಶ್ ಇ ಸಂಸ್ಥೆ ಸಹಯೋಗದಲ್ಲಿ ಪರಿಚಯಿಸಿದೆ. ಈ ಸೇವೆಯು ರೈಲ್ವೆ ಇಲಾಖೆಯ ಐಆರ್ ಸಿಟಿಸಿ ಟ್ರಾವೆಲ್ ಆ್ಯಪ್ ನಲ್ಲಿ ಕ್ಯಾಶ್ ಇ ಪಾವತಿ ಆಯ್ಕೆ ಮೂಲಕ ಟಿಕೆಟ್ ಬುಕ್ ಮಾಡಿ ಹಣವನ್ನು 3 ಅಥವಾ 6 ತಿಂಗಳ ಅವಧಿಯ ತನಕದ ಇಎಂಐ ಮೂಲಕ ಪಾವತಿಸುವ ಅವಕಾಶವನ್ನು ಕಲ್ಪಿಸಿದೆ. ಇಎಂಐ ಪಾವತಿ ಆಯ್ಕೆಯು ಐಆರ್ ಸಿಟಿಸಿ ಟ್ರಾವೆಲ್  ಆ್ಯಪ್ ನಲ್ಲಿ ಕಾಯ್ದಿರಿಸಿದ ಹಾಗೂ ತತ್ಕಾಲ ಟಿಕೆಟ್ ಗಳ ಬುಕ್ಕಿಂಗ್ ಗೆ ಇರುವ ಚೆಕ್ ಔಟ್ ಪುಟದಲ್ಲಿದೆ.

ಕ್ಯಾಶ್ ಇಯ ಟಿಎನ್ ಪಿಎಲ್ ಇಎಂಐ ಪಾವತಿ ಆಯ್ಕೆ ಈ ಸೌಲಭ್ಯವನ್ನು ಯಾವುದೇ ದಾಖಲೆಗಳ ಅಗತ್ಯವಿಲ್ಲದೆ ಎಲ್ಲ ಬಳಕೆದಾರರು ಬಳಸಲು ಅನುವು ನೀಡಿದೆ. ಹೀಗಾಗಿ ಕ್ಯಾಶ್ ಇ ಟಿಎನ್ ಪಿಎಲ್ ಇಎಂಐ ಆಯ್ಕೆಯನ್ನು ಪ್ರಯಾಣಿಕರು ಸುಲಭವಾಗಿ ಬಳಸಿಕೊಳ್ಳಬಹುದು. ಐಆರ್ ಟಿಸಿ ಆ್ಯಪ್ 9 ಕೋಟಿ ಬಾರಿ ಡೌನ್ ಲೋಡ್ ಆಗಿದೆ. ಇದರ ಮೂಲಕ ಪ್ರತಿ ದಿನ 15 ಲಕ್ಷ ರೈಲ್ವೆ ಟಿಕೆಟ್ ಗಳನ್ನು ಕಾಯ್ದಿರಿಸಲಾಗುತ್ತಿದೆ.

‘ಐಆರ್ ಸಿಟಿಸಿ ನೆರವಿನಿಂದ ಇದು ಭಾರತದ ಅತೀದೊಡ್ಡ ಈಗ ಪ್ರಯಾಣಿಸಿ ನಂತರ ಪಾವತಿಸಿ ಎಂಬ ಇಎಂಐ ಪಾವತಿ ವ್ಯವಸ್ಥೆಯಾಗಿದೆ. ಐಆರ್ ಸಿಟಿಸಿ ಜೊತೆಗಿನ ನಮ್ಮ ಸಹಯೋಗ ದೇಶದಲ್ಲಿ ಡಿಜಿಟಲ್ ಇಎಂಐ ಪಾವತಿಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಇನ್ನೊಂದು ಹೆಜ್ಜೆಯಾಗಿದೆ. ಈ ಸಹಭಾಗಿತ್ವವು ಕ್ಯಾಶ್ ಇಗೆ ಐಆರ್ ಸಿಟಿಸಿಯ ಲಕ್ಷಾಂತರ ಗ್ರಾಹಕರನ್ನು ತಲುಪಲು ಹಾಗೂ ಅವರಿಗೆ ಈ ಹಿಂದೆ ಎಂದೂ ಸಿಗದ ಹಾಗೂ ಈಗ ಆರಾಮದಾಯಕವಾಗಿ ಪ್ರಯಾಣಿಸಿ ನಂತರ ಅವರ ರೈಲ್ವೆ ಟಿಕೆಟ್ ಗೆ ಇಎಂಐ ಮುಖಾಂತರ ಹಣ ಪಾವತಿಸುವ ಅವಕಾಶ ಕಲ್ಪಿಸಿದೆ’ ಎಂದು ಕ್ಯಾಶ್ ಇ ಸಂಸ್ಥಾಪಕ ಅಧ್ಯಕ್ಷ ವಿ.ರಮಣ್ ಕುಮಾರ್ ತಿಳಿಸಿದ್ದಾರೆ.

ಕ್ಯಾಶ್ ಇ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ. ಈಗ ಟಿಕೆಟ್ ಖರೀದಿಸಿ ನಂತರ ಪಾವತಿ ಮಾಡುವ ಆಯ್ಕೆ ನೀಡಿದ್ರೆ ಮೋಸ ಹೋಗುವ ಸಾಧ್ಯತೆ ಇಲ್ವಾ? ಎಂಬ ಪ್ರಶ್ನೆಯೂ ಮೂಡಬಹುದು. ಕ್ಯಾಶ್ ಇ ಕೃತಕ ಬುದ್ಧಿಮತ್ತೆ ಆಧಾರಿತ ಅಲ್ಗೊರಿಥಮ್ ಪ್ಲ್ಯಾಟ್ ಫಾರ್ಮ್ ನಲ್ಲಿ ಸೋಷಿಯಲ್ ಲೋನ್ ಕೋಟಿಂಟ್ ಮೂಲಕ ಕಾರ್ಯನಿರ್ವಹಿಸುತ್ತದೆ. ಈ SLQ ಸಾಲಗಾರನ ಪಾವತಿ ಸಾಮರ್ಥ್ಯವನ್ನು ಆತನ ಸೋಷಿಯಲ್ ಮೀಡಿಯಾ ಹಾಗೂ ಮೊಬೈಲ್ ದತ್ತಾಂಶಗಳ ಆಧಾರದಲ್ಲಿ ಗ್ರಹಿಸುತ್ತದೆ. ಆ ಬಳಿಕ ಆತ ಇಎಂಐ ಸೌಲಭ್ಯ ಪಡೆಲು ಅರ್ಹ ಹೌದು, ಅಲ್ಲ ಎಂಬುದನ್ನು ನಿರ್ಧರಿಸುತ್ತದೆ. ಇಎಂಐ ಮೂಲಕ ರೈಲ್ವೆ ಟಿಕೆಟ್ ಹಣ ಪಾವತಿಸುವ ವ್ಯವಸ್ಥೆ ತುರ್ತು ಸಂದರ್ಭದಲ್ಲಿ ಅನೇಕ ರೈಲ್ವೆ ಪ್ರಯಾಣಿಕರಿಗೆ ನೆರವಾಗೋದರಲ್ಲಿ ಸಂಶಯವಿಲ್ಲ.

andolana

Share
Published by
andolana

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

2 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

3 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

3 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

3 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

3 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

3 hours ago