ವಾಣಿಜ್ಯ

ಹಣಕೊಡದೇ ಟಿಕೆಟ್‌ ಪಡೆದು ರೈಲಿನಲ್ಲಿ ಪ್ರಯಾಣಿಸಿ…

ನವದೆಹಲಿ : ಟಿಕೆಟ್ ಗೆ ಕಾಸಿಲ್ಲದಿದ್ದರೂ ರೈಲಿನಲ್ಲಿ ಪ್ರಯಾಣಿಸುವ ಅವಕಾಶವನ್ನು ರೈಲ್ವೆ ಇಲಾಖೆ ನೀಡಿದೆ. ಆದರೆ, ನೀವು ಕ್ಯಾಷ್ ಇ ಪಾವತಿ ಆಯ್ಕೆ ಬಳಸಿ ಐಆರ್ ಟಿಸಿ ಆ್ಯಪ್ ನಲ್ಲಿ ಟಿಕೆಟ್ ಕಾಯ್ದಿರಿಸಬೇಕು, ಆದರೆ ಹಣವನ್ನು ಆಗಲೇ ಪಾವತಿಸಬೇಕಿಲ್ಲ, ಬದಲಿಗೆ ನಂತರ ಇಎಂಐ ಮೂಲಕ ಪಾವತಿ ಮಾಡಬಹುದು. ‘ಈಗ ಪ್ರಯಾಣಿಸಿ, ಆಮೇಲೆ ಪಾವತಿಸಿ’ ಎಂಬ ಈ ಹೊಸ ಯೋಜನೆಯನ್ನು ಭಾರತೀಯ ರೈಲ್ವೆ ಇಲಾಖೆಯ ಕ್ಯಾಟರಿಂಗ್ ಹಾಗೂ ಪ್ರವಾಸೋದ್ಯಮ ನಿಗಮವು ಹಣಕಾಸು ಸೇವೆಗಳನ್ನು ಒದಗಿಸುವ ಕ್ಯಾಶ್ ಇ ಸಂಸ್ಥೆ ಸಹಯೋಗದಲ್ಲಿ ಪರಿಚಯಿಸಿದೆ. ಈ ಸೇವೆಯು ರೈಲ್ವೆ ಇಲಾಖೆಯ ಐಆರ್ ಸಿಟಿಸಿ ಟ್ರಾವೆಲ್ ಆ್ಯಪ್ ನಲ್ಲಿ ಕ್ಯಾಶ್ ಇ ಪಾವತಿ ಆಯ್ಕೆ ಮೂಲಕ ಟಿಕೆಟ್ ಬುಕ್ ಮಾಡಿ ಹಣವನ್ನು 3 ಅಥವಾ 6 ತಿಂಗಳ ಅವಧಿಯ ತನಕದ ಇಎಂಐ ಮೂಲಕ ಪಾವತಿಸುವ ಅವಕಾಶವನ್ನು ಕಲ್ಪಿಸಿದೆ. ಇಎಂಐ ಪಾವತಿ ಆಯ್ಕೆಯು ಐಆರ್ ಸಿಟಿಸಿ ಟ್ರಾವೆಲ್  ಆ್ಯಪ್ ನಲ್ಲಿ ಕಾಯ್ದಿರಿಸಿದ ಹಾಗೂ ತತ್ಕಾಲ ಟಿಕೆಟ್ ಗಳ ಬುಕ್ಕಿಂಗ್ ಗೆ ಇರುವ ಚೆಕ್ ಔಟ್ ಪುಟದಲ್ಲಿದೆ.

ಕ್ಯಾಶ್ ಇಯ ಟಿಎನ್ ಪಿಎಲ್ ಇಎಂಐ ಪಾವತಿ ಆಯ್ಕೆ ಈ ಸೌಲಭ್ಯವನ್ನು ಯಾವುದೇ ದಾಖಲೆಗಳ ಅಗತ್ಯವಿಲ್ಲದೆ ಎಲ್ಲ ಬಳಕೆದಾರರು ಬಳಸಲು ಅನುವು ನೀಡಿದೆ. ಹೀಗಾಗಿ ಕ್ಯಾಶ್ ಇ ಟಿಎನ್ ಪಿಎಲ್ ಇಎಂಐ ಆಯ್ಕೆಯನ್ನು ಪ್ರಯಾಣಿಕರು ಸುಲಭವಾಗಿ ಬಳಸಿಕೊಳ್ಳಬಹುದು. ಐಆರ್ ಟಿಸಿ ಆ್ಯಪ್ 9 ಕೋಟಿ ಬಾರಿ ಡೌನ್ ಲೋಡ್ ಆಗಿದೆ. ಇದರ ಮೂಲಕ ಪ್ರತಿ ದಿನ 15 ಲಕ್ಷ ರೈಲ್ವೆ ಟಿಕೆಟ್ ಗಳನ್ನು ಕಾಯ್ದಿರಿಸಲಾಗುತ್ತಿದೆ.

‘ಐಆರ್ ಸಿಟಿಸಿ ನೆರವಿನಿಂದ ಇದು ಭಾರತದ ಅತೀದೊಡ್ಡ ಈಗ ಪ್ರಯಾಣಿಸಿ ನಂತರ ಪಾವತಿಸಿ ಎಂಬ ಇಎಂಐ ಪಾವತಿ ವ್ಯವಸ್ಥೆಯಾಗಿದೆ. ಐಆರ್ ಸಿಟಿಸಿ ಜೊತೆಗಿನ ನಮ್ಮ ಸಹಯೋಗ ದೇಶದಲ್ಲಿ ಡಿಜಿಟಲ್ ಇಎಂಐ ಪಾವತಿಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಇನ್ನೊಂದು ಹೆಜ್ಜೆಯಾಗಿದೆ. ಈ ಸಹಭಾಗಿತ್ವವು ಕ್ಯಾಶ್ ಇಗೆ ಐಆರ್ ಸಿಟಿಸಿಯ ಲಕ್ಷಾಂತರ ಗ್ರಾಹಕರನ್ನು ತಲುಪಲು ಹಾಗೂ ಅವರಿಗೆ ಈ ಹಿಂದೆ ಎಂದೂ ಸಿಗದ ಹಾಗೂ ಈಗ ಆರಾಮದಾಯಕವಾಗಿ ಪ್ರಯಾಣಿಸಿ ನಂತರ ಅವರ ರೈಲ್ವೆ ಟಿಕೆಟ್ ಗೆ ಇಎಂಐ ಮುಖಾಂತರ ಹಣ ಪಾವತಿಸುವ ಅವಕಾಶ ಕಲ್ಪಿಸಿದೆ’ ಎಂದು ಕ್ಯಾಶ್ ಇ ಸಂಸ್ಥಾಪಕ ಅಧ್ಯಕ್ಷ ವಿ.ರಮಣ್ ಕುಮಾರ್ ತಿಳಿಸಿದ್ದಾರೆ.

ಕ್ಯಾಶ್ ಇ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ. ಈಗ ಟಿಕೆಟ್ ಖರೀದಿಸಿ ನಂತರ ಪಾವತಿ ಮಾಡುವ ಆಯ್ಕೆ ನೀಡಿದ್ರೆ ಮೋಸ ಹೋಗುವ ಸಾಧ್ಯತೆ ಇಲ್ವಾ? ಎಂಬ ಪ್ರಶ್ನೆಯೂ ಮೂಡಬಹುದು. ಕ್ಯಾಶ್ ಇ ಕೃತಕ ಬುದ್ಧಿಮತ್ತೆ ಆಧಾರಿತ ಅಲ್ಗೊರಿಥಮ್ ಪ್ಲ್ಯಾಟ್ ಫಾರ್ಮ್ ನಲ್ಲಿ ಸೋಷಿಯಲ್ ಲೋನ್ ಕೋಟಿಂಟ್ ಮೂಲಕ ಕಾರ್ಯನಿರ್ವಹಿಸುತ್ತದೆ. ಈ SLQ ಸಾಲಗಾರನ ಪಾವತಿ ಸಾಮರ್ಥ್ಯವನ್ನು ಆತನ ಸೋಷಿಯಲ್ ಮೀಡಿಯಾ ಹಾಗೂ ಮೊಬೈಲ್ ದತ್ತಾಂಶಗಳ ಆಧಾರದಲ್ಲಿ ಗ್ರಹಿಸುತ್ತದೆ. ಆ ಬಳಿಕ ಆತ ಇಎಂಐ ಸೌಲಭ್ಯ ಪಡೆಲು ಅರ್ಹ ಹೌದು, ಅಲ್ಲ ಎಂಬುದನ್ನು ನಿರ್ಧರಿಸುತ್ತದೆ. ಇಎಂಐ ಮೂಲಕ ರೈಲ್ವೆ ಟಿಕೆಟ್ ಹಣ ಪಾವತಿಸುವ ವ್ಯವಸ್ಥೆ ತುರ್ತು ಸಂದರ್ಭದಲ್ಲಿ ಅನೇಕ ರೈಲ್ವೆ ಪ್ರಯಾಣಿಕರಿಗೆ ನೆರವಾಗೋದರಲ್ಲಿ ಸಂಶಯವಿಲ್ಲ.

andolana

Share
Published by
andolana

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

6 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

7 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

11 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

11 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

11 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

11 hours ago