ವಾಣಿಜ್ಯ

ದೇಶದ ಆರ್ಥಿಕತೆಗೆ ಶುಭ ಸುದ್ದಿ : ಇಳಿಕೆಯತ್ತ ಮುಖ ಮಾಡಿದ ಕಚ್ಚಾ ತೈಲದ ಬೆಲೆ

ನವದೆಹಲಿ : ವಿದೇಶಿ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ನಾಲ್ಕು ತಿಂಗಳ ಅವಧಿಯಲ್ಲಿ ಕನಿಷ್ಠ ಮಟ್ಟಕ್ಕೆ ಕುಸಿದಿದೆ.

ಇದರಿಂದ ಭಾರತೀಯ ಆರ್ಥಿಕತೆಗೆ ಬೃಹತ್ ಮಟ್ಟದ ಉತ್ತೇಜನ ಸಿಗುವ ಸಾಧ್ಯತೆಗಳಿವೆ. ಬೃಹತ್ ತೈಲದ ಅಮದು ವೆಚ್ಚದಿಂದಾಗಿ ದೇಶದ ಚಾಲ್ತಿ ಖಾತೆ ನಿಯಂತ್ರಣ ಮಿತಿಮೀರಲು ಶುರುವಾಗಿತ್ತು.ದುಬಾರಿ ತೈಲವನ್ನು ಖರೀದಿ ಮಾಡಲು ಹೆಚ್ಚು ಹಣ ನೀಡಬೇಕಾದುದರಿಂದ ದೇಶದ ರೂಪಾಯಿಯ ಮೌಲ್ಯ ಕುಸಿಯುತ್ತಿತ್ತು.

ಇದೀಗ ಜಾಗತಿಕ ಬೆಂಚ್ ಮಾರ್ಕ್ ಬ್ರೆಂಟ್ ಕಚ್ಚಾ ತೈಲ ಬೆಲೆ ಬ್ಯಾರೆಲ್ ಗೆ 4.63 ರಷ್ಟು ಕುಸಿದಿದೆ. ಇದರಿಂದ ತೈಲದ ಬೆಲೆ 77.42 ಡಾಲರ್ ಗೆ ತಲುಪಿದೆ . ಕ್ರೂಡ್ ಆಯಿಲ್ ಫ್ಯೂಚರ್ಸ್ ಶೇ.4.9 ರಷ್ಟು ಕುಸಿತ ಕಂಡಿದ್ದು,ಬ್ಯಾರೆಲ್ ಗೆ 72.90 ಡಾಲರ್ ಗೆ ತಲುಪಿದೆ.

ಯು ಎಸ್ ನ ಕಚ್ಚಾ ತೈಲದ ದಾಸ್ತಾನುಗಳಲ್ಲಿನ ಹೆಚ್ಚಳದಿಂದ ಇಳುವರಿಯಲ್ಲಿ ಚೇತರಿಕೆಯಲ್ಲಿ ಕಂಡಿದೆ. ನಾಲ್ಕು ವಾರಗಳಿಂದ ಕಚ್ಚಾ ತೈಲದ ಬೆಲೆಯಲ್ಲಿ ನಿರಂತರವಾಗಿ ಇಳಿಕೆ ಕಂಡುಬರುತ್ತಿದೆ.

ಅಕ್ಟೋಬರ್ ನಲ್ಲಿ ದೇಶದ ಸರಕು ವ್ಯಾಪಾರದ ಕೊರತೆ ಗರಿಷ್ಠ ಮಟ್ಟಕ್ಕೇರಿತ್ತು. ಸದ್ಯ ತೈಲದ ಬೆಲೆ ಇಳಿಕೆ ಆಗುತ್ತಿರುವುದರಿಂದ ವ್ಯಾಪಾರದ ಕೊರತೆ ಕಡಿಮೆಯಾಗುವ ನಿರೀಕ್ಷೆ ಇದೆ.

ಭಾರತ ದೇಶವು ಕಚ್ಚಾತೈಲದ ಅಗತ್ಯಕ್ಕಿಂತ ಶೇಕಡ 80 ಹೆಚ್ಚಿಗೆ ಆಮದು ಮಾಡಿಕೊಳ್ಳುತ್ತದೆ. ಇದರಿಂದ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಹೆಚ್ಚಳವಾದಾಗ ಚಾಲ್ತಿ ಖಾತೆ ಕೊರತೆಯ ಹೆಚ್ಚಳಕ್ಕೆ ಕಾರಣವಾಗುತ್ತದೆ.

ತೈಲಬೆಲೆಗಳು ಹಣದುಬ್ಬರವನ್ನು ಹೆಚ್ಚು ಮಾಡುತ್ತವೆ. ಸಿ ಎನ್ ಜಿ ಮತ್ತು ಎಲ್ ಪಿ ಜಿ ಹಾಗೂ ರಸ ಗೊಬ್ಬರಗಳ ಮೇಲಿನ ಸರ್ಕಾರದ ಸಬ್ಸಿಡಿ ಹೆಚ್ಚಾಗಲು ಕಾರಣವಾಗುತ್ತವೆ.

ವಿದೇಶಿ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ನಾಲ್ಕು ತಿಂಗಳ ಅವಧಿಯಲ್ಲಿ ಕನಿಷ್ಠ ಮಟ್ಟಕ್ಕೆ ಕುಸಿದಿರುವುದು ಭಾರತ ದೇಶದ ಆರ್ಥಿಕತೆಗೆ ಪೂರಕವಾಗಲಿದೆ.

lokesh

Share
Published by
lokesh
Tags: Crude oil

Recent Posts

ನಾಳೆ ರಾಜ್ಯ ಬಜೆಟ್:‌ ಬಸ್‌ ನಿಲ್ದಾಣಗಳಲ್ಲಿ ನೇರ ಪ್ರಸಾರ

ಬೆಂಗಳೂರು: ನಾಳೆ ರಾಜ್ಯ ಬಜೆಟ್‌ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್‌ ಮಂಡನೆಯ…

2 hours ago

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ: ಬೈಕ್ ಸವಾರ ಸಾವು

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…

2 hours ago

ಹನೂರು: ವಿಶ್ವ ವನ್ಯಜೀವಿ ದಿನ ಕಾರ್ಯಕ್ರಮ ಆಯೋಜನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…

2 hours ago

ಸಚಿವ ದಿನೇಶ್‌ ಗುಂಡೂರಾವ್‌ಗೆ ಮಹತ್ವದ ಜವಾಬ್ದಾರಿ ಕೊಟ್ಟ ಎಐಸಿಸಿ: ಏನದು ಗೊತ್ತಾ?

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…

2 hours ago

ಮಂಡ್ಯ: ಕೃಷಿ ಯಂತ್ರೋಪಕರಣದಿಂದ ಆಧುನಿಕ ಕೃಷಿಯತ್ತ ರೈತರು: ಡಾ. ಕೆ.ಸಿ.ನಾರಾಯಣಸ್ವಾಮಿ

ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…

2 hours ago

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್‌ಇಡಿ ದೀಪ ಅಳವಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…

3 hours ago