ನವದೆಹಲಿ : ವಿದೇಶಿ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ನಾಲ್ಕು ತಿಂಗಳ ಅವಧಿಯಲ್ಲಿ ಕನಿಷ್ಠ ಮಟ್ಟಕ್ಕೆ ಕುಸಿದಿದೆ.
ಇದರಿಂದ ಭಾರತೀಯ ಆರ್ಥಿಕತೆಗೆ ಬೃಹತ್ ಮಟ್ಟದ ಉತ್ತೇಜನ ಸಿಗುವ ಸಾಧ್ಯತೆಗಳಿವೆ. ಬೃಹತ್ ತೈಲದ ಅಮದು ವೆಚ್ಚದಿಂದಾಗಿ ದೇಶದ ಚಾಲ್ತಿ ಖಾತೆ ನಿಯಂತ್ರಣ ಮಿತಿಮೀರಲು ಶುರುವಾಗಿತ್ತು.ದುಬಾರಿ ತೈಲವನ್ನು ಖರೀದಿ ಮಾಡಲು ಹೆಚ್ಚು ಹಣ ನೀಡಬೇಕಾದುದರಿಂದ ದೇಶದ ರೂಪಾಯಿಯ ಮೌಲ್ಯ ಕುಸಿಯುತ್ತಿತ್ತು.
ಇದೀಗ ಜಾಗತಿಕ ಬೆಂಚ್ ಮಾರ್ಕ್ ಬ್ರೆಂಟ್ ಕಚ್ಚಾ ತೈಲ ಬೆಲೆ ಬ್ಯಾರೆಲ್ ಗೆ 4.63 ರಷ್ಟು ಕುಸಿದಿದೆ. ಇದರಿಂದ ತೈಲದ ಬೆಲೆ 77.42 ಡಾಲರ್ ಗೆ ತಲುಪಿದೆ . ಕ್ರೂಡ್ ಆಯಿಲ್ ಫ್ಯೂಚರ್ಸ್ ಶೇ.4.9 ರಷ್ಟು ಕುಸಿತ ಕಂಡಿದ್ದು,ಬ್ಯಾರೆಲ್ ಗೆ 72.90 ಡಾಲರ್ ಗೆ ತಲುಪಿದೆ.
ಯು ಎಸ್ ನ ಕಚ್ಚಾ ತೈಲದ ದಾಸ್ತಾನುಗಳಲ್ಲಿನ ಹೆಚ್ಚಳದಿಂದ ಇಳುವರಿಯಲ್ಲಿ ಚೇತರಿಕೆಯಲ್ಲಿ ಕಂಡಿದೆ. ನಾಲ್ಕು ವಾರಗಳಿಂದ ಕಚ್ಚಾ ತೈಲದ ಬೆಲೆಯಲ್ಲಿ ನಿರಂತರವಾಗಿ ಇಳಿಕೆ ಕಂಡುಬರುತ್ತಿದೆ.
ಅಕ್ಟೋಬರ್ ನಲ್ಲಿ ದೇಶದ ಸರಕು ವ್ಯಾಪಾರದ ಕೊರತೆ ಗರಿಷ್ಠ ಮಟ್ಟಕ್ಕೇರಿತ್ತು. ಸದ್ಯ ತೈಲದ ಬೆಲೆ ಇಳಿಕೆ ಆಗುತ್ತಿರುವುದರಿಂದ ವ್ಯಾಪಾರದ ಕೊರತೆ ಕಡಿಮೆಯಾಗುವ ನಿರೀಕ್ಷೆ ಇದೆ.
ಭಾರತ ದೇಶವು ಕಚ್ಚಾತೈಲದ ಅಗತ್ಯಕ್ಕಿಂತ ಶೇಕಡ 80 ಹೆಚ್ಚಿಗೆ ಆಮದು ಮಾಡಿಕೊಳ್ಳುತ್ತದೆ. ಇದರಿಂದ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಹೆಚ್ಚಳವಾದಾಗ ಚಾಲ್ತಿ ಖಾತೆ ಕೊರತೆಯ ಹೆಚ್ಚಳಕ್ಕೆ ಕಾರಣವಾಗುತ್ತದೆ.
ತೈಲಬೆಲೆಗಳು ಹಣದುಬ್ಬರವನ್ನು ಹೆಚ್ಚು ಮಾಡುತ್ತವೆ. ಸಿ ಎನ್ ಜಿ ಮತ್ತು ಎಲ್ ಪಿ ಜಿ ಹಾಗೂ ರಸ ಗೊಬ್ಬರಗಳ ಮೇಲಿನ ಸರ್ಕಾರದ ಸಬ್ಸಿಡಿ ಹೆಚ್ಚಾಗಲು ಕಾರಣವಾಗುತ್ತವೆ.
ವಿದೇಶಿ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ನಾಲ್ಕು ತಿಂಗಳ ಅವಧಿಯಲ್ಲಿ ಕನಿಷ್ಠ ಮಟ್ಟಕ್ಕೆ ಕುಸಿದಿರುವುದು ಭಾರತ ದೇಶದ ಆರ್ಥಿಕತೆಗೆ ಪೂರಕವಾಗಲಿದೆ.
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದ ಸುತ್ತಮುತ್ತ ಹುಲಿಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರಿಸಲಾಗಿದೆ. ಚಾಮರಾಜನಗರ ತಾಲ್ಲೂಕಿನ…
ಬೆಂಗಳೂರು: ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ಎಂಬಂತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳಿನ ಪಂದ್ಯಕ್ಕೆ ಅವಕಾಶ ಇಲ್ಲ ಎಂದು ತಿಳಿದುಬಂದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ…
ಮೈಸೂರು: ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ವ್ಯಕ್ತಿಯಿಂದ 80 ಸಾವಿರ ರೂ ದೋಚಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ರಮೇಶ್ ಹಾಗೂ…
ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.…
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಸ್ಟಾರ್ ವಾರ್ ಬಗ್ಗೆ ನಟ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ಧ ಮಾತಿಗೆ…
ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…