ನವದೆಹಲಿ : ವಿದೇಶಿ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ನಾಲ್ಕು ತಿಂಗಳ ಅವಧಿಯಲ್ಲಿ ಕನಿಷ್ಠ ಮಟ್ಟಕ್ಕೆ ಕುಸಿದಿದೆ.
ಇದರಿಂದ ಭಾರತೀಯ ಆರ್ಥಿಕತೆಗೆ ಬೃಹತ್ ಮಟ್ಟದ ಉತ್ತೇಜನ ಸಿಗುವ ಸಾಧ್ಯತೆಗಳಿವೆ. ಬೃಹತ್ ತೈಲದ ಅಮದು ವೆಚ್ಚದಿಂದಾಗಿ ದೇಶದ ಚಾಲ್ತಿ ಖಾತೆ ನಿಯಂತ್ರಣ ಮಿತಿಮೀರಲು ಶುರುವಾಗಿತ್ತು.ದುಬಾರಿ ತೈಲವನ್ನು ಖರೀದಿ ಮಾಡಲು ಹೆಚ್ಚು ಹಣ ನೀಡಬೇಕಾದುದರಿಂದ ದೇಶದ ರೂಪಾಯಿಯ ಮೌಲ್ಯ ಕುಸಿಯುತ್ತಿತ್ತು.
ಇದೀಗ ಜಾಗತಿಕ ಬೆಂಚ್ ಮಾರ್ಕ್ ಬ್ರೆಂಟ್ ಕಚ್ಚಾ ತೈಲ ಬೆಲೆ ಬ್ಯಾರೆಲ್ ಗೆ 4.63 ರಷ್ಟು ಕುಸಿದಿದೆ. ಇದರಿಂದ ತೈಲದ ಬೆಲೆ 77.42 ಡಾಲರ್ ಗೆ ತಲುಪಿದೆ . ಕ್ರೂಡ್ ಆಯಿಲ್ ಫ್ಯೂಚರ್ಸ್ ಶೇ.4.9 ರಷ್ಟು ಕುಸಿತ ಕಂಡಿದ್ದು,ಬ್ಯಾರೆಲ್ ಗೆ 72.90 ಡಾಲರ್ ಗೆ ತಲುಪಿದೆ.
ಯು ಎಸ್ ನ ಕಚ್ಚಾ ತೈಲದ ದಾಸ್ತಾನುಗಳಲ್ಲಿನ ಹೆಚ್ಚಳದಿಂದ ಇಳುವರಿಯಲ್ಲಿ ಚೇತರಿಕೆಯಲ್ಲಿ ಕಂಡಿದೆ. ನಾಲ್ಕು ವಾರಗಳಿಂದ ಕಚ್ಚಾ ತೈಲದ ಬೆಲೆಯಲ್ಲಿ ನಿರಂತರವಾಗಿ ಇಳಿಕೆ ಕಂಡುಬರುತ್ತಿದೆ.
ಅಕ್ಟೋಬರ್ ನಲ್ಲಿ ದೇಶದ ಸರಕು ವ್ಯಾಪಾರದ ಕೊರತೆ ಗರಿಷ್ಠ ಮಟ್ಟಕ್ಕೇರಿತ್ತು. ಸದ್ಯ ತೈಲದ ಬೆಲೆ ಇಳಿಕೆ ಆಗುತ್ತಿರುವುದರಿಂದ ವ್ಯಾಪಾರದ ಕೊರತೆ ಕಡಿಮೆಯಾಗುವ ನಿರೀಕ್ಷೆ ಇದೆ.
ಭಾರತ ದೇಶವು ಕಚ್ಚಾತೈಲದ ಅಗತ್ಯಕ್ಕಿಂತ ಶೇಕಡ 80 ಹೆಚ್ಚಿಗೆ ಆಮದು ಮಾಡಿಕೊಳ್ಳುತ್ತದೆ. ಇದರಿಂದ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಹೆಚ್ಚಳವಾದಾಗ ಚಾಲ್ತಿ ಖಾತೆ ಕೊರತೆಯ ಹೆಚ್ಚಳಕ್ಕೆ ಕಾರಣವಾಗುತ್ತದೆ.
ತೈಲಬೆಲೆಗಳು ಹಣದುಬ್ಬರವನ್ನು ಹೆಚ್ಚು ಮಾಡುತ್ತವೆ. ಸಿ ಎನ್ ಜಿ ಮತ್ತು ಎಲ್ ಪಿ ಜಿ ಹಾಗೂ ರಸ ಗೊಬ್ಬರಗಳ ಮೇಲಿನ ಸರ್ಕಾರದ ಸಬ್ಸಿಡಿ ಹೆಚ್ಚಾಗಲು ಕಾರಣವಾಗುತ್ತವೆ.
ವಿದೇಶಿ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ನಾಲ್ಕು ತಿಂಗಳ ಅವಧಿಯಲ್ಲಿ ಕನಿಷ್ಠ ಮಟ್ಟಕ್ಕೆ ಕುಸಿದಿರುವುದು ಭಾರತ ದೇಶದ ಆರ್ಥಿಕತೆಗೆ ಪೂರಕವಾಗಲಿದೆ.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…