ವಾಣಿಜ್ಯ

ಜನವರಿಯಲ್ಲಿ 1.55 ಲಕ್ಷ ಕೋಟಿ ರೂ. ದಾಟಿದ ಜಿಎಸ್‌ಟಿ ಸಂಗ್ರಹ

ಹೊಸದಿಲ್ಲಿ: ಜನವರಿ ತಿಂಗಳಲ್ಲಿ 1.55 ಲಕ್ಷ ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ತಿಂಗಳೊಂದರಲ್ಲಿ ಸಂಗ್ರಹವಾದ ಎರಡನೇ ಅತಿಹೆಚ್ಚಿನ ಜಿಎಸ್ಟಿ ಸಂಗ್ರಹ ಇದಾಗಿದೆ. ಈ ಹಿಂದೆ 2022ರ ಏಪ್ರಿಲ್​​ನಲ್ಲಿ 1.68 ಲಕ್ಷ ಕೋಟಿ ರೂ. ಜಿಎಸ್​ಟಿ ಸಂಗ್ರಹವಾಗಿತ್ತು. ಜನವರಿ 31ರ ಸಂಜೆ 5 ಗಂಟೆ ವೇಳೆಗೆ ತಿಂಗಳ ಜಿಎಸ್​ಟಿ ಸಂಗ್ರಹ 1,55,922 ಕೋಟಿ ರೂ. ಆಗಿದೆ. ಈ ಪೈಕಿ 28,963 ಕೋಟಿ ರೂ. ಕೇಂದ್ರ ಜಿಎಸ್​​ಟಿ, 36,730 ಕೋಟಿ ರೂ. ರಾಜ್ಯ ಜಿಎಸ್​​ಟಿ, 79,599 ಕೋಟಿ ರೂ. ಐಜಿಎಸ್​ಟಿ (ಆಮದು ಸರಕುಗಳಿಂದ ಸಂಗ್ರಹಿಸಿದ 37,118 ಕೋಟಿ ರೂ. ಸೇರಿ) ಹಾಗೂ 10,630 ಕೋಟಿ ರೂ. ಸೆಸ್ (ಆಮದು ಸರಕುಗಳಿಂದ ಸಂಗ್ರಹಿಸಿರುವ 768 ಕೋಟಿ ರೂ. ಸೇರಿ) ಒಳಗೊಂಡಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಕಳೆದ ಹಣಕಾಸು ವರ್ಷದ ಜನವರಿ ವರೆಗಿನ ಅವಧಿಗೆ ಹೋಲಿಸಿದರೆ ಪ್ರಸಕ್ತ ಹಣಕಾಸು ವರ್ಷದಲ್ಲಿ 2023ರ ಜನವರಿ ವರೆಗೆ ಜಿಎಸ್​ಟಿ ಆದಾಯ ಶೇ 24ರಷ್ಟು ಹೆಚ್ಚಳವಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಎಸ್​ಟಿ ಸಂಗ್ರಹ 1.50 ಲಕ್ಷ ಕೋಟಿ ದಾಟಿರುವುದು ಇದೇ ಮೂರನೇ ಬಾರಿ ಎಂದು ಸಚಿವಾಲಯ ಹೇಳಿದೆ.

‘ಕಳೆದ ಒಂದು ವರ್ಷದಲ್ಲಿ ತೆರಿಗೆ ಮೂಲಗಳನ್ನು ಹೆಚ್ಚಿಸಲು ಮತ್ತು ಸಹಕಾರ ಹೆಚ್ಚಿಸಲು ವಿವಿಧ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಎಸ್​ಟಿ ರಿಟರ್ನ್ಸ್ ಫೈಲ್ ಮಾಡುವವರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ’ ಎಂದು ಸಚಿವಾಲಯ ಹೇಳಿದೆ.

2022ರ ಅಕ್ಟೋಬರ್ – ಡಿಸೆಂಬರ್ ತ್ರೈಮಾಸಿಕದಲ್ಲಿ ಒಟ್ಟು 2.42 ಕೋಟಿ ಜಿಎಸ್​ಟಿ ರಿಟರ್ನ್ಸ್ ಫೈಲ್ ಮಾಡಲಾಗಿದೆ. ಅದಕ್ಕೂ ಹಿಂದಿನ ವರ್ಷದ ಅಕ್ಟೋಬರ್ – ಡಿಸೆಂಬರ್ ತ್ರೈಮಾಸಿಕದಲ್ಲಿ 2.19 ಕೋಟಿ ಜಿಎಸ್​ಟಿ ರಿಟರ್ನ್ಸ್ ಫೈಲ್ ಮಾಡಲಾಗಿತ್ತು. ಇದು ತೆರಿಗೆ ಮೂಲಗಳನ್ನು ಹೆಚ್ಚಿಸಲು ಮತ್ತು ಸಹಕಾರ ಹೆಚ್ಚಿಸಲು ಕೈಗೊಂಡಿರುವ ಹಲವು ಕ್ರಮಗಳ ಪರಿಣಾಮವಾಗಿದೆ ಎಂದೂ ಸಚಿವಾಲಯ ತಿಳಿಸಿದೆ.

lokesh

Recent Posts

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

4 hours ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

5 hours ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

5 hours ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

5 hours ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

5 hours ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

5 hours ago