ವಾಣಿಜ್ಯ

ಜನವರಿಯಲ್ಲಿ 1.55 ಲಕ್ಷ ಕೋಟಿ ರೂ. ದಾಟಿದ ಜಿಎಸ್‌ಟಿ ಸಂಗ್ರಹ

ಹೊಸದಿಲ್ಲಿ: ಜನವರಿ ತಿಂಗಳಲ್ಲಿ 1.55 ಲಕ್ಷ ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ತಿಂಗಳೊಂದರಲ್ಲಿ ಸಂಗ್ರಹವಾದ ಎರಡನೇ ಅತಿಹೆಚ್ಚಿನ ಜಿಎಸ್ಟಿ ಸಂಗ್ರಹ ಇದಾಗಿದೆ. ಈ ಹಿಂದೆ 2022ರ ಏಪ್ರಿಲ್​​ನಲ್ಲಿ 1.68 ಲಕ್ಷ ಕೋಟಿ ರೂ. ಜಿಎಸ್​ಟಿ ಸಂಗ್ರಹವಾಗಿತ್ತು. ಜನವರಿ 31ರ ಸಂಜೆ 5 ಗಂಟೆ ವೇಳೆಗೆ ತಿಂಗಳ ಜಿಎಸ್​ಟಿ ಸಂಗ್ರಹ 1,55,922 ಕೋಟಿ ರೂ. ಆಗಿದೆ. ಈ ಪೈಕಿ 28,963 ಕೋಟಿ ರೂ. ಕೇಂದ್ರ ಜಿಎಸ್​​ಟಿ, 36,730 ಕೋಟಿ ರೂ. ರಾಜ್ಯ ಜಿಎಸ್​​ಟಿ, 79,599 ಕೋಟಿ ರೂ. ಐಜಿಎಸ್​ಟಿ (ಆಮದು ಸರಕುಗಳಿಂದ ಸಂಗ್ರಹಿಸಿದ 37,118 ಕೋಟಿ ರೂ. ಸೇರಿ) ಹಾಗೂ 10,630 ಕೋಟಿ ರೂ. ಸೆಸ್ (ಆಮದು ಸರಕುಗಳಿಂದ ಸಂಗ್ರಹಿಸಿರುವ 768 ಕೋಟಿ ರೂ. ಸೇರಿ) ಒಳಗೊಂಡಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಕಳೆದ ಹಣಕಾಸು ವರ್ಷದ ಜನವರಿ ವರೆಗಿನ ಅವಧಿಗೆ ಹೋಲಿಸಿದರೆ ಪ್ರಸಕ್ತ ಹಣಕಾಸು ವರ್ಷದಲ್ಲಿ 2023ರ ಜನವರಿ ವರೆಗೆ ಜಿಎಸ್​ಟಿ ಆದಾಯ ಶೇ 24ರಷ್ಟು ಹೆಚ್ಚಳವಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಎಸ್​ಟಿ ಸಂಗ್ರಹ 1.50 ಲಕ್ಷ ಕೋಟಿ ದಾಟಿರುವುದು ಇದೇ ಮೂರನೇ ಬಾರಿ ಎಂದು ಸಚಿವಾಲಯ ಹೇಳಿದೆ.

‘ಕಳೆದ ಒಂದು ವರ್ಷದಲ್ಲಿ ತೆರಿಗೆ ಮೂಲಗಳನ್ನು ಹೆಚ್ಚಿಸಲು ಮತ್ತು ಸಹಕಾರ ಹೆಚ್ಚಿಸಲು ವಿವಿಧ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಎಸ್​ಟಿ ರಿಟರ್ನ್ಸ್ ಫೈಲ್ ಮಾಡುವವರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ’ ಎಂದು ಸಚಿವಾಲಯ ಹೇಳಿದೆ.

2022ರ ಅಕ್ಟೋಬರ್ – ಡಿಸೆಂಬರ್ ತ್ರೈಮಾಸಿಕದಲ್ಲಿ ಒಟ್ಟು 2.42 ಕೋಟಿ ಜಿಎಸ್​ಟಿ ರಿಟರ್ನ್ಸ್ ಫೈಲ್ ಮಾಡಲಾಗಿದೆ. ಅದಕ್ಕೂ ಹಿಂದಿನ ವರ್ಷದ ಅಕ್ಟೋಬರ್ – ಡಿಸೆಂಬರ್ ತ್ರೈಮಾಸಿಕದಲ್ಲಿ 2.19 ಕೋಟಿ ಜಿಎಸ್​ಟಿ ರಿಟರ್ನ್ಸ್ ಫೈಲ್ ಮಾಡಲಾಗಿತ್ತು. ಇದು ತೆರಿಗೆ ಮೂಲಗಳನ್ನು ಹೆಚ್ಚಿಸಲು ಮತ್ತು ಸಹಕಾರ ಹೆಚ್ಚಿಸಲು ಕೈಗೊಂಡಿರುವ ಹಲವು ಕ್ರಮಗಳ ಪರಿಣಾಮವಾಗಿದೆ ಎಂದೂ ಸಚಿವಾಲಯ ತಿಳಿಸಿದೆ.

lokesh

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

1 hour ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

1 hour ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

2 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

2 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

2 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

2 hours ago