ವಾಣಿಜ್ಯ

ಜನವರಿಯಲ್ಲಿ 1.55 ಲಕ್ಷ ಕೋಟಿ ರೂ. ದಾಟಿದ ಜಿಎಸ್‌ಟಿ ಸಂಗ್ರಹ

ಹೊಸದಿಲ್ಲಿ: ಜನವರಿ ತಿಂಗಳಲ್ಲಿ 1.55 ಲಕ್ಷ ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ತಿಂಗಳೊಂದರಲ್ಲಿ ಸಂಗ್ರಹವಾದ ಎರಡನೇ ಅತಿಹೆಚ್ಚಿನ ಜಿಎಸ್ಟಿ ಸಂಗ್ರಹ ಇದಾಗಿದೆ. ಈ ಹಿಂದೆ 2022ರ ಏಪ್ರಿಲ್​​ನಲ್ಲಿ 1.68 ಲಕ್ಷ ಕೋಟಿ ರೂ. ಜಿಎಸ್​ಟಿ ಸಂಗ್ರಹವಾಗಿತ್ತು. ಜನವರಿ 31ರ ಸಂಜೆ 5 ಗಂಟೆ ವೇಳೆಗೆ ತಿಂಗಳ ಜಿಎಸ್​ಟಿ ಸಂಗ್ರಹ 1,55,922 ಕೋಟಿ ರೂ. ಆಗಿದೆ. ಈ ಪೈಕಿ 28,963 ಕೋಟಿ ರೂ. ಕೇಂದ್ರ ಜಿಎಸ್​​ಟಿ, 36,730 ಕೋಟಿ ರೂ. ರಾಜ್ಯ ಜಿಎಸ್​​ಟಿ, 79,599 ಕೋಟಿ ರೂ. ಐಜಿಎಸ್​ಟಿ (ಆಮದು ಸರಕುಗಳಿಂದ ಸಂಗ್ರಹಿಸಿದ 37,118 ಕೋಟಿ ರೂ. ಸೇರಿ) ಹಾಗೂ 10,630 ಕೋಟಿ ರೂ. ಸೆಸ್ (ಆಮದು ಸರಕುಗಳಿಂದ ಸಂಗ್ರಹಿಸಿರುವ 768 ಕೋಟಿ ರೂ. ಸೇರಿ) ಒಳಗೊಂಡಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಕಳೆದ ಹಣಕಾಸು ವರ್ಷದ ಜನವರಿ ವರೆಗಿನ ಅವಧಿಗೆ ಹೋಲಿಸಿದರೆ ಪ್ರಸಕ್ತ ಹಣಕಾಸು ವರ್ಷದಲ್ಲಿ 2023ರ ಜನವರಿ ವರೆಗೆ ಜಿಎಸ್​ಟಿ ಆದಾಯ ಶೇ 24ರಷ್ಟು ಹೆಚ್ಚಳವಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಎಸ್​ಟಿ ಸಂಗ್ರಹ 1.50 ಲಕ್ಷ ಕೋಟಿ ದಾಟಿರುವುದು ಇದೇ ಮೂರನೇ ಬಾರಿ ಎಂದು ಸಚಿವಾಲಯ ಹೇಳಿದೆ.

‘ಕಳೆದ ಒಂದು ವರ್ಷದಲ್ಲಿ ತೆರಿಗೆ ಮೂಲಗಳನ್ನು ಹೆಚ್ಚಿಸಲು ಮತ್ತು ಸಹಕಾರ ಹೆಚ್ಚಿಸಲು ವಿವಿಧ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಎಸ್​ಟಿ ರಿಟರ್ನ್ಸ್ ಫೈಲ್ ಮಾಡುವವರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ’ ಎಂದು ಸಚಿವಾಲಯ ಹೇಳಿದೆ.

2022ರ ಅಕ್ಟೋಬರ್ – ಡಿಸೆಂಬರ್ ತ್ರೈಮಾಸಿಕದಲ್ಲಿ ಒಟ್ಟು 2.42 ಕೋಟಿ ಜಿಎಸ್​ಟಿ ರಿಟರ್ನ್ಸ್ ಫೈಲ್ ಮಾಡಲಾಗಿದೆ. ಅದಕ್ಕೂ ಹಿಂದಿನ ವರ್ಷದ ಅಕ್ಟೋಬರ್ – ಡಿಸೆಂಬರ್ ತ್ರೈಮಾಸಿಕದಲ್ಲಿ 2.19 ಕೋಟಿ ಜಿಎಸ್​ಟಿ ರಿಟರ್ನ್ಸ್ ಫೈಲ್ ಮಾಡಲಾಗಿತ್ತು. ಇದು ತೆರಿಗೆ ಮೂಲಗಳನ್ನು ಹೆಚ್ಚಿಸಲು ಮತ್ತು ಸಹಕಾರ ಹೆಚ್ಚಿಸಲು ಕೈಗೊಂಡಿರುವ ಹಲವು ಕ್ರಮಗಳ ಪರಿಣಾಮವಾಗಿದೆ ಎಂದೂ ಸಚಿವಾಲಯ ತಿಳಿಸಿದೆ.

lokesh

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

5 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

6 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

7 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

8 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

12 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

12 hours ago