ವಾಣಿಜ್ಯ

ಜನವರಿಯಲ್ಲಿ 1.55 ಲಕ್ಷ ಕೋಟಿ ರೂ. ದಾಟಿದ ಜಿಎಸ್‌ಟಿ ಸಂಗ್ರಹ

ಹೊಸದಿಲ್ಲಿ: ಜನವರಿ ತಿಂಗಳಲ್ಲಿ 1.55 ಲಕ್ಷ ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ತಿಂಗಳೊಂದರಲ್ಲಿ ಸಂಗ್ರಹವಾದ ಎರಡನೇ ಅತಿಹೆಚ್ಚಿನ ಜಿಎಸ್ಟಿ ಸಂಗ್ರಹ ಇದಾಗಿದೆ. ಈ ಹಿಂದೆ 2022ರ ಏಪ್ರಿಲ್​​ನಲ್ಲಿ 1.68 ಲಕ್ಷ ಕೋಟಿ ರೂ. ಜಿಎಸ್​ಟಿ ಸಂಗ್ರಹವಾಗಿತ್ತು. ಜನವರಿ 31ರ ಸಂಜೆ 5 ಗಂಟೆ ವೇಳೆಗೆ ತಿಂಗಳ ಜಿಎಸ್​ಟಿ ಸಂಗ್ರಹ 1,55,922 ಕೋಟಿ ರೂ. ಆಗಿದೆ. ಈ ಪೈಕಿ 28,963 ಕೋಟಿ ರೂ. ಕೇಂದ್ರ ಜಿಎಸ್​​ಟಿ, 36,730 ಕೋಟಿ ರೂ. ರಾಜ್ಯ ಜಿಎಸ್​​ಟಿ, 79,599 ಕೋಟಿ ರೂ. ಐಜಿಎಸ್​ಟಿ (ಆಮದು ಸರಕುಗಳಿಂದ ಸಂಗ್ರಹಿಸಿದ 37,118 ಕೋಟಿ ರೂ. ಸೇರಿ) ಹಾಗೂ 10,630 ಕೋಟಿ ರೂ. ಸೆಸ್ (ಆಮದು ಸರಕುಗಳಿಂದ ಸಂಗ್ರಹಿಸಿರುವ 768 ಕೋಟಿ ರೂ. ಸೇರಿ) ಒಳಗೊಂಡಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಕಳೆದ ಹಣಕಾಸು ವರ್ಷದ ಜನವರಿ ವರೆಗಿನ ಅವಧಿಗೆ ಹೋಲಿಸಿದರೆ ಪ್ರಸಕ್ತ ಹಣಕಾಸು ವರ್ಷದಲ್ಲಿ 2023ರ ಜನವರಿ ವರೆಗೆ ಜಿಎಸ್​ಟಿ ಆದಾಯ ಶೇ 24ರಷ್ಟು ಹೆಚ್ಚಳವಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಎಸ್​ಟಿ ಸಂಗ್ರಹ 1.50 ಲಕ್ಷ ಕೋಟಿ ದಾಟಿರುವುದು ಇದೇ ಮೂರನೇ ಬಾರಿ ಎಂದು ಸಚಿವಾಲಯ ಹೇಳಿದೆ.

‘ಕಳೆದ ಒಂದು ವರ್ಷದಲ್ಲಿ ತೆರಿಗೆ ಮೂಲಗಳನ್ನು ಹೆಚ್ಚಿಸಲು ಮತ್ತು ಸಹಕಾರ ಹೆಚ್ಚಿಸಲು ವಿವಿಧ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಎಸ್​ಟಿ ರಿಟರ್ನ್ಸ್ ಫೈಲ್ ಮಾಡುವವರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ’ ಎಂದು ಸಚಿವಾಲಯ ಹೇಳಿದೆ.

2022ರ ಅಕ್ಟೋಬರ್ – ಡಿಸೆಂಬರ್ ತ್ರೈಮಾಸಿಕದಲ್ಲಿ ಒಟ್ಟು 2.42 ಕೋಟಿ ಜಿಎಸ್​ಟಿ ರಿಟರ್ನ್ಸ್ ಫೈಲ್ ಮಾಡಲಾಗಿದೆ. ಅದಕ್ಕೂ ಹಿಂದಿನ ವರ್ಷದ ಅಕ್ಟೋಬರ್ – ಡಿಸೆಂಬರ್ ತ್ರೈಮಾಸಿಕದಲ್ಲಿ 2.19 ಕೋಟಿ ಜಿಎಸ್​ಟಿ ರಿಟರ್ನ್ಸ್ ಫೈಲ್ ಮಾಡಲಾಗಿತ್ತು. ಇದು ತೆರಿಗೆ ಮೂಲಗಳನ್ನು ಹೆಚ್ಚಿಸಲು ಮತ್ತು ಸಹಕಾರ ಹೆಚ್ಚಿಸಲು ಕೈಗೊಂಡಿರುವ ಹಲವು ಕ್ರಮಗಳ ಪರಿಣಾಮವಾಗಿದೆ ಎಂದೂ ಸಚಿವಾಲಯ ತಿಳಿಸಿದೆ.

lokesh

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

21 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

21 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

21 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

21 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

21 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

21 hours ago