ವಾಣಿಜ್ಯ

ನಾನು ವಾರದಲ್ಲಿ 85 ರಿಂದ 90 ಗಂಟೆ ಕೆಲಸ ಮಾಡ್ತಿದ್ದೆ : ನಾರಾಯಣ ಮೂರ್ತಿ

ನವದೆಹಲಿ : ನಾನು 40 ವರ್ಷಗಳ ಕಾಲ ವಾರದ ಆರು ದಿನಗಳು 85 ರಿಂದ 90 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದೆ ಎಂದು ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿದ್ದಾರೆ.

ಮಾಧ್ಯಮವೊಂದರ ಜೊತೆ ಮಾತನಾಡಿರುವ ನಾರಾಯಣ ಮೂರ್ತಿ ಅವರು ತಾವು ಕಂಪನಿ ಸ್ಥಾಪನೆ ಮಾಡುವ ಸಂಧರ್ಭಲ್ಲಿ ನಾನು ಬೆಳಗ್ಗೆ 6 20 ಕ್ಕೆ ಕಚೇರಿಗೆ ಹೋದರೆ ರಾತ್ರಿ 8 30 ಕ್ಕೆ ಮನೆಗೆ ಹೋಗುತ್ತಿದ್ದೆ ಎಂದು ಹೇಳಿದ್ದಾರೆ. ಈ ಮೂಲಕ ತಾವು ನೀಡಿದ್ದ 70 ಗಂಟೆಗಳ ಕೆಲಸದ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

ಕಳೆದ ಅಕ್ಟೋಬರ್‌ ನಲ್ಲಿ ಇನ್ಫೋಸಿಸ್‌ ಮಾಜಿ ಸಿಎಫ್‌ಒ ಮೋಹನ್‌ ದಾಸ್‌ ಪೈ ಅವರ ಜೊತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ನಾರಾಯಣ ಮೂರ್ತಿಯವರು ನಾವು ಪಾಶ್ಚಿಮಾತ್ಯರಿಂದ ಅನಪೇಕ್ಷಿತ ಹವ್ಯಾಸಗಳನ್ನು ಕಲಿಯಬಾರದು. ಭಾರತ ನನ್ನ ದೇಶ ಇದಕ್ಕಾಗಿ ನಾನು ವಾರಕ್ಕೆ 70 ಗಂಟೆಗಳ ಕಾಲ ದುಡಿಯುತ್ತೇನೆ ಎನ್ನುವ ಮನಃಸ್ಥಿತಿಯನ್ನು ಬೆಳೆಸಿಕೊಳ್ಳಬೇಕು ಎಂದು ಯುವ ಜನತೆಗೆ ಕರೆ ನೀಡಿದ್ದರು.

ನಾರಾಯಣ ಮೂರ್ತಿಯವರ ಈ ಹೇಳಿಕೆ ಸಾರ್ವಜನಿಕ ವಲಯದಲ್ಲಿ ಠೀಕೆಗೆ ಕಾಣವಾಗಿತ್ತು. ಕಾಂಗ್ರೆಸ್‌ ನಾಯಕರು ಕೂಡ ನಾರಾಯಣಮೂರ್ತಿಯವರ ಹೇಳಿಕೆಯನ್ನು ಖಂಡಿಸಿದ್ದರು. ಮೂರ್ತಿಯವರು ಸಹಾನುಭೂತಿಯ ಬಂಡವಾಳಶಾಹಿ ಇರಬೇಕು. ಆದರೆ ಕೆಲವು ಕಪನಿಗಳು ಮಾತ್ರ ಅದನ್ನು ಪ್ರದರ್ಶಿಸುತ್ತಿವೆ. ಸಹಾನುಭೂತಿಯ ಬಂಡವಾಳಶಾಹಿ ಇದ್ದಿದ್ದರೆ ಕಾರ್ಪೊರೆಟ್‌ ಸಾಮಾಜಿಕ ಹೊಣೆಗಾರಿಕೆ ಕಾಯ್ದೆಯನ್ನು ತರುವ ಅಗತ್ಯ ಏನಿತ್ತು ಎಂದು ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಕೂಡ ನಾರಾಯಣ ಮೂರ್ತಿಯವರ ವಿರುದ್ಧ ಕಿಡಿ ಕಾರಿದ್ದರು. ಕಳೆದ ದಶಕಗಳ ಬಡತನದ ಸೂಚ್ಯಾಂಕವನ್ನು ಪರಿಗಣನೆಗೆ ತೆಗೆದುಕೊಂಡರೆ ಬಡವರು ಬಡವರಾಗಿಯೇ ಇರುತ್ತಿದ್ದಾರೆ. ಅವರ ಸಲಹೆಗಳು ಜನರ ಅಭಿವೃದ್ಧಿಯ ಭಾಗವಾಗಿದೆ. ಇದು ಅಂತಿಮವಾಗಿ ಸರ್ಕಾರದ ನಿರ್ಧಾರವಾಗಿದೆ ಎಂದಿದ್ದರು.

lokesh

Share
Published by
lokesh

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

9 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

12 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

16 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

18 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

19 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

20 hours ago