ವಾಣಿಜ್ಯ

ನಾನು ವಾರದಲ್ಲಿ 85 ರಿಂದ 90 ಗಂಟೆ ಕೆಲಸ ಮಾಡ್ತಿದ್ದೆ : ನಾರಾಯಣ ಮೂರ್ತಿ

ನವದೆಹಲಿ : ನಾನು 40 ವರ್ಷಗಳ ಕಾಲ ವಾರದ ಆರು ದಿನಗಳು 85 ರಿಂದ 90 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದೆ ಎಂದು ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿದ್ದಾರೆ.

ಮಾಧ್ಯಮವೊಂದರ ಜೊತೆ ಮಾತನಾಡಿರುವ ನಾರಾಯಣ ಮೂರ್ತಿ ಅವರು ತಾವು ಕಂಪನಿ ಸ್ಥಾಪನೆ ಮಾಡುವ ಸಂಧರ್ಭಲ್ಲಿ ನಾನು ಬೆಳಗ್ಗೆ 6 20 ಕ್ಕೆ ಕಚೇರಿಗೆ ಹೋದರೆ ರಾತ್ರಿ 8 30 ಕ್ಕೆ ಮನೆಗೆ ಹೋಗುತ್ತಿದ್ದೆ ಎಂದು ಹೇಳಿದ್ದಾರೆ. ಈ ಮೂಲಕ ತಾವು ನೀಡಿದ್ದ 70 ಗಂಟೆಗಳ ಕೆಲಸದ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

ಕಳೆದ ಅಕ್ಟೋಬರ್‌ ನಲ್ಲಿ ಇನ್ಫೋಸಿಸ್‌ ಮಾಜಿ ಸಿಎಫ್‌ಒ ಮೋಹನ್‌ ದಾಸ್‌ ಪೈ ಅವರ ಜೊತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ನಾರಾಯಣ ಮೂರ್ತಿಯವರು ನಾವು ಪಾಶ್ಚಿಮಾತ್ಯರಿಂದ ಅನಪೇಕ್ಷಿತ ಹವ್ಯಾಸಗಳನ್ನು ಕಲಿಯಬಾರದು. ಭಾರತ ನನ್ನ ದೇಶ ಇದಕ್ಕಾಗಿ ನಾನು ವಾರಕ್ಕೆ 70 ಗಂಟೆಗಳ ಕಾಲ ದುಡಿಯುತ್ತೇನೆ ಎನ್ನುವ ಮನಃಸ್ಥಿತಿಯನ್ನು ಬೆಳೆಸಿಕೊಳ್ಳಬೇಕು ಎಂದು ಯುವ ಜನತೆಗೆ ಕರೆ ನೀಡಿದ್ದರು.

ನಾರಾಯಣ ಮೂರ್ತಿಯವರ ಈ ಹೇಳಿಕೆ ಸಾರ್ವಜನಿಕ ವಲಯದಲ್ಲಿ ಠೀಕೆಗೆ ಕಾಣವಾಗಿತ್ತು. ಕಾಂಗ್ರೆಸ್‌ ನಾಯಕರು ಕೂಡ ನಾರಾಯಣಮೂರ್ತಿಯವರ ಹೇಳಿಕೆಯನ್ನು ಖಂಡಿಸಿದ್ದರು. ಮೂರ್ತಿಯವರು ಸಹಾನುಭೂತಿಯ ಬಂಡವಾಳಶಾಹಿ ಇರಬೇಕು. ಆದರೆ ಕೆಲವು ಕಪನಿಗಳು ಮಾತ್ರ ಅದನ್ನು ಪ್ರದರ್ಶಿಸುತ್ತಿವೆ. ಸಹಾನುಭೂತಿಯ ಬಂಡವಾಳಶಾಹಿ ಇದ್ದಿದ್ದರೆ ಕಾರ್ಪೊರೆಟ್‌ ಸಾಮಾಜಿಕ ಹೊಣೆಗಾರಿಕೆ ಕಾಯ್ದೆಯನ್ನು ತರುವ ಅಗತ್ಯ ಏನಿತ್ತು ಎಂದು ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಕೂಡ ನಾರಾಯಣ ಮೂರ್ತಿಯವರ ವಿರುದ್ಧ ಕಿಡಿ ಕಾರಿದ್ದರು. ಕಳೆದ ದಶಕಗಳ ಬಡತನದ ಸೂಚ್ಯಾಂಕವನ್ನು ಪರಿಗಣನೆಗೆ ತೆಗೆದುಕೊಂಡರೆ ಬಡವರು ಬಡವರಾಗಿಯೇ ಇರುತ್ತಿದ್ದಾರೆ. ಅವರ ಸಲಹೆಗಳು ಜನರ ಅಭಿವೃದ್ಧಿಯ ಭಾಗವಾಗಿದೆ. ಇದು ಅಂತಿಮವಾಗಿ ಸರ್ಕಾರದ ನಿರ್ಧಾರವಾಗಿದೆ ಎಂದಿದ್ದರು.

lokesh

Share
Published by
lokesh

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

19 mins ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

55 mins ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

1 hour ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

2 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

3 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

3 hours ago