ವಾಣಿಜ್ಯ

ಶೀಘ್ರದಲ್ಲೇ ಅತಿ ಕಡಿಮೆ ಬೆಲೆಯ ಲ್ಯಾಪ್‌ಟಾಪ್ ಬಿಡುಗಡೆ ಮಾಡಲಿದೆ ಜಿಯೋ

ನವದೆಹಲಿ : ದೇಶದ ಅತ್ಯಂತ ಶ್ರೀಮಂತ ಉದ್ಯಮಿ ಮುಖೇಶ್‌ ಅಂಬಾನಿ ಈಗಾಗಲೇ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯ ಎಲೆಕ್ಟ್ರಾನಿಕ್‌ ವಸ್ತುಗಳು ಹಾಗೂ ಇಂಟರ್ನೆಟ್‌ ನೀಡುವ ಮೂಲಕ ಗ್ರಾಹಕರನ್ನು ತನ್ನತ್ತ ಸೆಳೆದುಕೊಂಡಿದ್ದಾರೆ. ಇದೀಗ ಮಾರುಕಟ್ಟೆಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಲ್ಯಾಪ್‌ಟಾಪ್ ಬಿಡುಗಡೆ ಮಾಡಲು ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಖೇಶ್‌ ಅಂಬಾನಿ ಅವರು ವಾರ್ಷಿಕವಾಗಿ ಸುಮಾರು 70,000 ಕೋಟಿ ಆದಾಯದ ಅವಕಾಶವನ್ನು ಬೆನ್ನಟ್ಟುತ್ತಿದ್ದಾರೆ. ಇನ್ನು ಅದಕ್ಕೆ ಹತ್ತಿರವಾಗುವ ಸಲುವಾಗಿ ಭಾರತದಲ್ಲಿ ಅತೀ ಕಡಿಮೆ ಬೆಲೆಯಲ್ಲಿ ಲ್ಯಾಪ್‌ಟಾಪ್ ಅನ್ನು ಬಿಡುಗಡೆ ಮಾಡಲು ಚಿಂತನೆ ನಡೆಸುತ್ತಿದ್ದಾರೆ.

ಕೇವಲ 15.000 ಸಾವಿರ ರೂ.ಗೆ ರಿಲಯನ್ಸ್ ಕಂಪನಿಯ ಜಿಯೋ ಲ್ಯಾಪ್‌ಟಾಪ್ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ.

ಮುಂಬರುವ ದಿನಗಳಲ್ಲಿ ಈ ಹೊಸ ಸಾಧನವನವನ್ನು ಪ್ರಾರಂಭಿಸಲು ಕಂಪನಿಯು ಪ್ರಸಿದ್ಧ ಲ್ಯಾಪ್‌ಟಾಪ್ ತಯಾರಕ ಕಂಪನಿಗಳಾದ HP,Acer,Lenovo ಜೋತೆ ಮಾತು ಕಥೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಜಿಯೋ ಕಂಪನಿ ತನ್ನ ಹೊಸ ಲ್ಯಾಪ್‌ಟಾಪ್ ಬಿಡುಗಡೆಯ ಕುರಿತಂತೆ ಅಧಿಕೃತವಾಗಿ ಈವರೆಗೆ ಯಾವುದೇ ವಿವರಗಳನ್ನು ನೀಡಿಲ್ಲ. ಸಧ್ಯ ಜಿಯೋ ಬುಕ್‌ ಬಿಡುಗಡೆ ಜೊತೆಗೆ ಈ ವಿಭಾಗವೂ ಕೂಡ ತೆಗೆದುಕೊಳ್ಳುವ ಉದ್ದೇಶ ಸ್ಪಷ್ಟವಾಗಿದೆ. ರಿಲಯನ್ಸ್‌ ಜಿಯೋ ಕಂಪನಿಯು ಲ್ಯಾಪ್‌ಟಾಪ್‌ ಖರೀದಿಯ ಜೊತೆಗೆ ಗ್ರಾಹಕರಿಗೆ 100 GB ಉಚಿತ ಕ್ಲೌಡ್‌ ಸ್ಟೋರೆಜ್‌ ನೀಡಲಿದೆ.

ಜಿಯೋ ಕಂಪನಿಯು ಭಾರತ ದೇಶದ ಅತಿ ದೊಡ್ಡ ಹಾಗೂ ಸುಪ್ರಸಿದ್ಧ ಮೊಬೈಲ್‌ ನೆಟ್ವರ್ಕ್‌ ಕಂಪನಿಯಾಗಿದೆ. ಜಿಯೋ ರಿಲಯನ್ಸ್‌ ಕಂಪನಿಯ ಒಂದು ಅಂಗ ಸಂಸ್ಥೆಯಾಗಿದೆ. ಇದು ದೇಶದ 22 ಟೆಲಿಕಾಂ ವಲಯಗಳಲ್ಲಿಯೂ ಕೂಡ ಉತ್ತಮ ಇಂಟರ್ನೆಟ್‌ ಸೇವೆ ಒದಗಿಸುತ್ತಿದೆ. ಜಿಯೋ ಕಂಪನಿಯೂ ದೇಶದಲ್ಲೇ ಅತಿ ವೇಗದ ಇಂಟರ್ನೆಟ್‌ ಪೂರೈಸುವ ನಂ.ಒನ್‌ ಕಂಪನಿ ಎಂಬ ಹೆಗ್ಗಳಿಕೆಗೂ ಕೂಡ ಪಾತ್ರವಾಗಿದೆ.

lokesh

Share
Published by
lokesh
Tags: jiolaptop

Recent Posts

ಗಣೇಶೋತ್ಸವದ ವೇಳೆ ಪ್ರಸಾದಕ್ಕೆ ಪರವಾನಗಿ ಕಡ್ಡಾಯ ಆದೇಶಕ್ಕೆ ಪ್ರಹ್ಲಾದ್‌ ಜೋಶಿ ಆಕ್ರೋಶ

ಹುಬ್ಬಳ್ಳಿ: ಗಣೇಶೋತ್ಸವ ಆಚರಣೆ ವೇಳೆ ಪೆಂಡಾಲ್‌ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂಬ ರಾಜ್ಯ ಸರ್ಕಾರದ…

9 mins ago

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

25 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

42 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

55 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago