ನವದೆಹಲಿ : ದೇಶದ ಅತ್ಯಂತ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಈಗಾಗಲೇ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯ ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಇಂಟರ್ನೆಟ್ ನೀಡುವ ಮೂಲಕ ಗ್ರಾಹಕರನ್ನು ತನ್ನತ್ತ ಸೆಳೆದುಕೊಂಡಿದ್ದಾರೆ. ಇದೀಗ ಮಾರುಕಟ್ಟೆಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಲ್ಯಾಪ್ಟಾಪ್ ಬಿಡುಗಡೆ ಮಾಡಲು ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಮುಖೇಶ್ ಅಂಬಾನಿ ಅವರು ವಾರ್ಷಿಕವಾಗಿ ಸುಮಾರು 70,000 ಕೋಟಿ ಆದಾಯದ ಅವಕಾಶವನ್ನು ಬೆನ್ನಟ್ಟುತ್ತಿದ್ದಾರೆ. ಇನ್ನು ಅದಕ್ಕೆ ಹತ್ತಿರವಾಗುವ ಸಲುವಾಗಿ ಭಾರತದಲ್ಲಿ ಅತೀ ಕಡಿಮೆ ಬೆಲೆಯಲ್ಲಿ ಲ್ಯಾಪ್ಟಾಪ್ ಅನ್ನು ಬಿಡುಗಡೆ ಮಾಡಲು ಚಿಂತನೆ ನಡೆಸುತ್ತಿದ್ದಾರೆ.
ಕೇವಲ 15.000 ಸಾವಿರ ರೂ.ಗೆ ರಿಲಯನ್ಸ್ ಕಂಪನಿಯ ಜಿಯೋ ಲ್ಯಾಪ್ಟಾಪ್ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ.
ಮುಂಬರುವ ದಿನಗಳಲ್ಲಿ ಈ ಹೊಸ ಸಾಧನವನವನ್ನು ಪ್ರಾರಂಭಿಸಲು ಕಂಪನಿಯು ಪ್ರಸಿದ್ಧ ಲ್ಯಾಪ್ಟಾಪ್ ತಯಾರಕ ಕಂಪನಿಗಳಾದ HP,Acer,Lenovo ಜೋತೆ ಮಾತು ಕಥೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಜಿಯೋ ಕಂಪನಿ ತನ್ನ ಹೊಸ ಲ್ಯಾಪ್ಟಾಪ್ ಬಿಡುಗಡೆಯ ಕುರಿತಂತೆ ಅಧಿಕೃತವಾಗಿ ಈವರೆಗೆ ಯಾವುದೇ ವಿವರಗಳನ್ನು ನೀಡಿಲ್ಲ. ಸಧ್ಯ ಜಿಯೋ ಬುಕ್ ಬಿಡುಗಡೆ ಜೊತೆಗೆ ಈ ವಿಭಾಗವೂ ಕೂಡ ತೆಗೆದುಕೊಳ್ಳುವ ಉದ್ದೇಶ ಸ್ಪಷ್ಟವಾಗಿದೆ. ರಿಲಯನ್ಸ್ ಜಿಯೋ ಕಂಪನಿಯು ಲ್ಯಾಪ್ಟಾಪ್ ಖರೀದಿಯ ಜೊತೆಗೆ ಗ್ರಾಹಕರಿಗೆ 100 GB ಉಚಿತ ಕ್ಲೌಡ್ ಸ್ಟೋರೆಜ್ ನೀಡಲಿದೆ.
ಜಿಯೋ ಕಂಪನಿಯು ಭಾರತ ದೇಶದ ಅತಿ ದೊಡ್ಡ ಹಾಗೂ ಸುಪ್ರಸಿದ್ಧ ಮೊಬೈಲ್ ನೆಟ್ವರ್ಕ್ ಕಂಪನಿಯಾಗಿದೆ. ಜಿಯೋ ರಿಲಯನ್ಸ್ ಕಂಪನಿಯ ಒಂದು ಅಂಗ ಸಂಸ್ಥೆಯಾಗಿದೆ. ಇದು ದೇಶದ 22 ಟೆಲಿಕಾಂ ವಲಯಗಳಲ್ಲಿಯೂ ಕೂಡ ಉತ್ತಮ ಇಂಟರ್ನೆಟ್ ಸೇವೆ ಒದಗಿಸುತ್ತಿದೆ. ಜಿಯೋ ಕಂಪನಿಯೂ ದೇಶದಲ್ಲೇ ಅತಿ ವೇಗದ ಇಂಟರ್ನೆಟ್ ಪೂರೈಸುವ ನಂ.ಒನ್ ಕಂಪನಿ ಎಂಬ ಹೆಗ್ಗಳಿಕೆಗೂ ಕೂಡ ಪಾತ್ರವಾಗಿದೆ.
ಬೆಂಗಳೂರು: ಮಾರ್ಚ್.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾರ್ಚ್.31ಕ್ಕ ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಪರೀಕ್ಷಾ ಬೋರ್ಡ್ ಮಾಹಿತಿ ನೀಡಿದ್ದು,…
ಬೆಂಗಳೂರು: ಆರು ವರ್ಷ ತುಂಬದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಂದನೇ ತರಗತಿಗೆ 6 ವರ್ಷ ತುಂಬಬೇಕೆಂಬ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಕುರಿತು ನಡೆಸಿದ ಚರ್ಚೆಯ ಮೇಲಿನ ಉತ್ತರದ ಪ್ರಮುಖ ಅಂಶಗಳು ಈ ಕೆಳಕಂಡಂತಿವೆ.…
ಬೆಂಗಳೂರು: ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದ ವಾರಸುದಾರರಿಗೆ ಸರ್ಕಾರಿ ನೌಕರಿ ನೀಡಲು ಸರ್ಕಾರಿ ಆದೇಶದನ್ವಯ ಅವಕಾಶ ಇರುವುದಿಲ್ಲ ಎಂದು ಅರಣ್ಯ,…
ಜೆರುಸೇಲಂ: ಬಂದರ್ ಅಬ್ಬಾಸ್ನಲ್ಲಿ ಅಮೇರಿಕಾ-ಇಸ್ರೇಲಿ ದಾಳಿಯಲ್ಲಿ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್ ಕಾಪ್ಸ್ ನೌಕಾ ಕಮಾಂಡರ್ ಅಲಿರೆಜಾ ತಂಗ್ ಸಿರಿ ಮೃತಪಟ್ಟಿದ್ದಾರೆ.…
ಬೆಂಗಳೂರು: ಮೈಸೂರು ಮುಡಾ ಅಕ್ರಮ ಸೈಟ್ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ…