ವಾಣಿಜ್ಯ

ಶೀಘ್ರದಲ್ಲೇ ಅತಿ ಕಡಿಮೆ ಬೆಲೆಯ ಲ್ಯಾಪ್‌ಟಾಪ್ ಬಿಡುಗಡೆ ಮಾಡಲಿದೆ ಜಿಯೋ

ನವದೆಹಲಿ : ದೇಶದ ಅತ್ಯಂತ ಶ್ರೀಮಂತ ಉದ್ಯಮಿ ಮುಖೇಶ್‌ ಅಂಬಾನಿ ಈಗಾಗಲೇ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯ ಎಲೆಕ್ಟ್ರಾನಿಕ್‌ ವಸ್ತುಗಳು ಹಾಗೂ ಇಂಟರ್ನೆಟ್‌ ನೀಡುವ ಮೂಲಕ ಗ್ರಾಹಕರನ್ನು ತನ್ನತ್ತ ಸೆಳೆದುಕೊಂಡಿದ್ದಾರೆ. ಇದೀಗ ಮಾರುಕಟ್ಟೆಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಲ್ಯಾಪ್‌ಟಾಪ್ ಬಿಡುಗಡೆ ಮಾಡಲು ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಖೇಶ್‌ ಅಂಬಾನಿ ಅವರು ವಾರ್ಷಿಕವಾಗಿ ಸುಮಾರು 70,000 ಕೋಟಿ ಆದಾಯದ ಅವಕಾಶವನ್ನು ಬೆನ್ನಟ್ಟುತ್ತಿದ್ದಾರೆ. ಇನ್ನು ಅದಕ್ಕೆ ಹತ್ತಿರವಾಗುವ ಸಲುವಾಗಿ ಭಾರತದಲ್ಲಿ ಅತೀ ಕಡಿಮೆ ಬೆಲೆಯಲ್ಲಿ ಲ್ಯಾಪ್‌ಟಾಪ್ ಅನ್ನು ಬಿಡುಗಡೆ ಮಾಡಲು ಚಿಂತನೆ ನಡೆಸುತ್ತಿದ್ದಾರೆ.

ಕೇವಲ 15.000 ಸಾವಿರ ರೂ.ಗೆ ರಿಲಯನ್ಸ್ ಕಂಪನಿಯ ಜಿಯೋ ಲ್ಯಾಪ್‌ಟಾಪ್ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ.

ಮುಂಬರುವ ದಿನಗಳಲ್ಲಿ ಈ ಹೊಸ ಸಾಧನವನವನ್ನು ಪ್ರಾರಂಭಿಸಲು ಕಂಪನಿಯು ಪ್ರಸಿದ್ಧ ಲ್ಯಾಪ್‌ಟಾಪ್ ತಯಾರಕ ಕಂಪನಿಗಳಾದ HP,Acer,Lenovo ಜೋತೆ ಮಾತು ಕಥೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಜಿಯೋ ಕಂಪನಿ ತನ್ನ ಹೊಸ ಲ್ಯಾಪ್‌ಟಾಪ್ ಬಿಡುಗಡೆಯ ಕುರಿತಂತೆ ಅಧಿಕೃತವಾಗಿ ಈವರೆಗೆ ಯಾವುದೇ ವಿವರಗಳನ್ನು ನೀಡಿಲ್ಲ. ಸಧ್ಯ ಜಿಯೋ ಬುಕ್‌ ಬಿಡುಗಡೆ ಜೊತೆಗೆ ಈ ವಿಭಾಗವೂ ಕೂಡ ತೆಗೆದುಕೊಳ್ಳುವ ಉದ್ದೇಶ ಸ್ಪಷ್ಟವಾಗಿದೆ. ರಿಲಯನ್ಸ್‌ ಜಿಯೋ ಕಂಪನಿಯು ಲ್ಯಾಪ್‌ಟಾಪ್‌ ಖರೀದಿಯ ಜೊತೆಗೆ ಗ್ರಾಹಕರಿಗೆ 100 GB ಉಚಿತ ಕ್ಲೌಡ್‌ ಸ್ಟೋರೆಜ್‌ ನೀಡಲಿದೆ.

ಜಿಯೋ ಕಂಪನಿಯು ಭಾರತ ದೇಶದ ಅತಿ ದೊಡ್ಡ ಹಾಗೂ ಸುಪ್ರಸಿದ್ಧ ಮೊಬೈಲ್‌ ನೆಟ್ವರ್ಕ್‌ ಕಂಪನಿಯಾಗಿದೆ. ಜಿಯೋ ರಿಲಯನ್ಸ್‌ ಕಂಪನಿಯ ಒಂದು ಅಂಗ ಸಂಸ್ಥೆಯಾಗಿದೆ. ಇದು ದೇಶದ 22 ಟೆಲಿಕಾಂ ವಲಯಗಳಲ್ಲಿಯೂ ಕೂಡ ಉತ್ತಮ ಇಂಟರ್ನೆಟ್‌ ಸೇವೆ ಒದಗಿಸುತ್ತಿದೆ. ಜಿಯೋ ಕಂಪನಿಯೂ ದೇಶದಲ್ಲೇ ಅತಿ ವೇಗದ ಇಂಟರ್ನೆಟ್‌ ಪೂರೈಸುವ ನಂ.ಒನ್‌ ಕಂಪನಿ ಎಂಬ ಹೆಗ್ಗಳಿಕೆಗೂ ಕೂಡ ಪಾತ್ರವಾಗಿದೆ.

lokesh

Share
Published by
lokesh
Tags: jiolaptop

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

6 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

6 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

6 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

6 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

6 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

6 hours ago