ವಾಣಿಜ್ಯ

ಶೀಘ್ರದಲ್ಲೇ ಅತಿ ಕಡಿಮೆ ಬೆಲೆಯ ಲ್ಯಾಪ್‌ಟಾಪ್ ಬಿಡುಗಡೆ ಮಾಡಲಿದೆ ಜಿಯೋ

ನವದೆಹಲಿ : ದೇಶದ ಅತ್ಯಂತ ಶ್ರೀಮಂತ ಉದ್ಯಮಿ ಮುಖೇಶ್‌ ಅಂಬಾನಿ ಈಗಾಗಲೇ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯ ಎಲೆಕ್ಟ್ರಾನಿಕ್‌ ವಸ್ತುಗಳು ಹಾಗೂ ಇಂಟರ್ನೆಟ್‌ ನೀಡುವ ಮೂಲಕ ಗ್ರಾಹಕರನ್ನು ತನ್ನತ್ತ ಸೆಳೆದುಕೊಂಡಿದ್ದಾರೆ. ಇದೀಗ ಮಾರುಕಟ್ಟೆಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಲ್ಯಾಪ್‌ಟಾಪ್ ಬಿಡುಗಡೆ ಮಾಡಲು ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಖೇಶ್‌ ಅಂಬಾನಿ ಅವರು ವಾರ್ಷಿಕವಾಗಿ ಸುಮಾರು 70,000 ಕೋಟಿ ಆದಾಯದ ಅವಕಾಶವನ್ನು ಬೆನ್ನಟ್ಟುತ್ತಿದ್ದಾರೆ. ಇನ್ನು ಅದಕ್ಕೆ ಹತ್ತಿರವಾಗುವ ಸಲುವಾಗಿ ಭಾರತದಲ್ಲಿ ಅತೀ ಕಡಿಮೆ ಬೆಲೆಯಲ್ಲಿ ಲ್ಯಾಪ್‌ಟಾಪ್ ಅನ್ನು ಬಿಡುಗಡೆ ಮಾಡಲು ಚಿಂತನೆ ನಡೆಸುತ್ತಿದ್ದಾರೆ.

ಕೇವಲ 15.000 ಸಾವಿರ ರೂ.ಗೆ ರಿಲಯನ್ಸ್ ಕಂಪನಿಯ ಜಿಯೋ ಲ್ಯಾಪ್‌ಟಾಪ್ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ.

ಮುಂಬರುವ ದಿನಗಳಲ್ಲಿ ಈ ಹೊಸ ಸಾಧನವನವನ್ನು ಪ್ರಾರಂಭಿಸಲು ಕಂಪನಿಯು ಪ್ರಸಿದ್ಧ ಲ್ಯಾಪ್‌ಟಾಪ್ ತಯಾರಕ ಕಂಪನಿಗಳಾದ HP,Acer,Lenovo ಜೋತೆ ಮಾತು ಕಥೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಜಿಯೋ ಕಂಪನಿ ತನ್ನ ಹೊಸ ಲ್ಯಾಪ್‌ಟಾಪ್ ಬಿಡುಗಡೆಯ ಕುರಿತಂತೆ ಅಧಿಕೃತವಾಗಿ ಈವರೆಗೆ ಯಾವುದೇ ವಿವರಗಳನ್ನು ನೀಡಿಲ್ಲ. ಸಧ್ಯ ಜಿಯೋ ಬುಕ್‌ ಬಿಡುಗಡೆ ಜೊತೆಗೆ ಈ ವಿಭಾಗವೂ ಕೂಡ ತೆಗೆದುಕೊಳ್ಳುವ ಉದ್ದೇಶ ಸ್ಪಷ್ಟವಾಗಿದೆ. ರಿಲಯನ್ಸ್‌ ಜಿಯೋ ಕಂಪನಿಯು ಲ್ಯಾಪ್‌ಟಾಪ್‌ ಖರೀದಿಯ ಜೊತೆಗೆ ಗ್ರಾಹಕರಿಗೆ 100 GB ಉಚಿತ ಕ್ಲೌಡ್‌ ಸ್ಟೋರೆಜ್‌ ನೀಡಲಿದೆ.

ಜಿಯೋ ಕಂಪನಿಯು ಭಾರತ ದೇಶದ ಅತಿ ದೊಡ್ಡ ಹಾಗೂ ಸುಪ್ರಸಿದ್ಧ ಮೊಬೈಲ್‌ ನೆಟ್ವರ್ಕ್‌ ಕಂಪನಿಯಾಗಿದೆ. ಜಿಯೋ ರಿಲಯನ್ಸ್‌ ಕಂಪನಿಯ ಒಂದು ಅಂಗ ಸಂಸ್ಥೆಯಾಗಿದೆ. ಇದು ದೇಶದ 22 ಟೆಲಿಕಾಂ ವಲಯಗಳಲ್ಲಿಯೂ ಕೂಡ ಉತ್ತಮ ಇಂಟರ್ನೆಟ್‌ ಸೇವೆ ಒದಗಿಸುತ್ತಿದೆ. ಜಿಯೋ ಕಂಪನಿಯೂ ದೇಶದಲ್ಲೇ ಅತಿ ವೇಗದ ಇಂಟರ್ನೆಟ್‌ ಪೂರೈಸುವ ನಂ.ಒನ್‌ ಕಂಪನಿ ಎಂಬ ಹೆಗ್ಗಳಿಕೆಗೂ ಕೂಡ ಪಾತ್ರವಾಗಿದೆ.

lokesh

Share
Published by
lokesh
Tags: jiolaptop

Recent Posts

ಓದುಗರ ಪತ್ರ: ಅರಮನೆ ಸುತ್ತಲಿನ ಪಾದಚಾರಿ ಮಾರ್ಗ ದುರಸ್ತಿ ಮಾಡಿ

ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…

1 min ago

ಓದುಗರ ಪತ್ರ: ಕೆರೆಗಳಿಗೆ ಹೇಮಾವತಿ ಜಲಾಶಯದಿಂದ ನೀರು ತುಂಬಿಸಿ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…

3 mins ago

ಓದುಗರ ಪತ್ರ: ಕೋಚಿಂಗ್ ದಂಧೆಗೆ ಕಡಿವಾಣ ಹಾಕಿ

ಖಾಸಗಿ ಶಾಲೆಗಳು ೬ನೇ ತರಗತಿಯಿಂದಲೇ ಐಐಟಿ ಮತ್ತು ನೀಟ್ ತರಬೇತಿಯನ್ನು ಕಡ್ಡಾಯಗೊಳಿಸಿವೆ. ೧೧-೧೨ ವರ್ಷದ ಪುಟ್ಟ ಮಕ್ಕಳ ಮೇಲೆ ಸ್ಪರ್ಧಾತ್ಮಕ…

5 mins ago

ಶುಶ್ರೂಷೆ ವೃತ್ತಿಗೆ ಮೆರುಗು ನೀಡಿದ ಫ್ಲಾರೆನ್ಸ್ ನೈಟಿಂಗೇಲ್

ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…

3 hours ago

ಜನಮೆಚ್ಚುಗೆ ಗಳಿಸಿದ ರಾಜ್ಯಮಟ್ಟದ ಯಿಫಾ ಹಾಕಿ

ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್‌ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…

3 hours ago

ಮಾರುಕಟ್ಟೆ ಬಂದ್ ಭೀತಿ; ಹೊಗೆಸೊಪ್ಪು ತಂದ ರೈತರ ಪರದಾಟ

ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್‌ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…

3 hours ago