ವಾಣಿಜ್ಯ

ರಾಜ್ಯೋತ್ಸವ ದಿನದಂದೇ ಆರ್‌ಬಿಐನಿಂದ ಡಿಜಿಟಲ್‌ ಕರೆನ್ಸಿ ಬಿಡುಗಡೆ

ಮುಂಬೈ: ಪ್ರಾಯೋಗಿಕ ಹಂತದ ಡಿಜಿಟಲ್ ಕರೆನ್ಸಿ ಡಿಜಿಟಲ್ ರೂಪಾಯಿಯನ್ನು (ಸಗಟು ವಿಭಾಗ) ಮಂಗಳವಾರ ಬಿಡುಗಡೆ ಮಾಡುವುದಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತಿಳಿಸಿದೆ. ಸರ್ಕಾರಿ ಸೆಕ್ಯುರಿಟೀಸ್ ವಹಿವಾಟಿಗಾಗಿ ಈ ರೂಪಾಯಿ ಬಳಕೆಯಾಗಲಿದೆ. ಸರ್ಕಾರಿ ಸೆಕ್ಯುರಿಟೀಸ್​ನ ಸೆಕೆಂಡರಿ ಮಾರುಕಟ್ಟೆ ವ್ಯವಹಾರಗಳಿಗಾಗಿ ಪ್ರಾಯೋಗಿಕ ಡಿಜಿಟಲ್ ರೂಪಾಯಿ ಬಳಕೆಯಾಗಲಿದೆ ಎಂದು ಆರ್​ಬಿಐ ಪ್ರಕಟಣೆ ತಿಳಿಸಿದೆ.

ಪ್ರಾಯೋಗಿಕ ಡಿಜಿಟಲ್ ರೂಪಾಯಿ ಬಿಡುಗಡೆಗಾಗಿ 9 ಬ್ಯಾಂಕ್​ಗಳನ್ನು ಆರ್​ಬಿಐ ಗುರುತಿಸಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಬರೋಡ, ಎಚ್​ಡಿಎಫ್​ಸಿ ಬ್ಯಾಂಕ್​, ಐಸಿಐಸಿಐ ಬ್ಯಾಂಕ್, ಕೋಟಕ್ ಮಹೀಂದ್ರಾ ಬ್ಯಾಂಕ್, ಯೆಸ್ ಬ್ಯಾಂಕ್, ಐಡಿಎಫ್​ಸಿ ಫಸ್ಟ್ ಬ್ಯಾಂಕ್ ಹಾಗೂ ಎಚ್​​ಎಸ್​ಬಿಸಿ ಬ್ಯಾಂಕ್​ಗಳನ್ನು ಪ್ರಾಯೋಗಿಕ ಡಿಜಿಟಲ್ ರೂಪಾಯಿ ವಹಿವಾಟಿಗಾಗಿ ಗುರುತಿಸಲಾಗಿದೆ.

ಮುಂದಿನ ಒಂದು ತಿಂಗಳ ಒಳಗಾಗಿ ಚಿಲ್ಲರೆ ವಿಭಾಗದ ಪ್ರಾಯೋಗಿಕ ಡಿಜಿಟಲ್ ರೂಪಾಯಿಯನ್ನು ಬಿಡುಗಡೆ ಮಾಡುವುದಾಗಿ ಆರ್​ಬಿಐ ತಿಳಿಸಿದೆ. ಆಯ್ದ ಪ್ರದೇಶಗಳಲ್ಲಿ ಸೀಮಿತ ವ್ಯಾಪಾರಿಗಳು ಮತ್ತು ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ಚಿಲ್ಲರೆ ವಿಭಾಗದ ಪ್ರಾಯೋಗಿಕ ಡಿಜಿಟಲ್ ರೂಪಾಯಿ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರೀಯ ಬ್ಯಾಂಕ್ ತಿಳಿಸಿದೆ.

ಹಣಕಾಸು ಅಕ್ರಮ ಮತ್ತು ಹಣದ ದುರ್ಬಳಕೆಯನ್ನು ತಡೆಗಟ್ಟಲು ಡಿಜಿಟಲ್ ರೂಪಾಯಿಯನ್ನು ಪ್ರಾಯೋಗಿಕವಾಗಿ ಶೀಘ್ರದಲ್ಲೇ ಪ್ರಾರಂಭಿಸುವುದಾಗಿ ಆರ್​ಬಿಐ ಇತ್ತೀಚೆಗೆ ಹೇಳಿತ್ತು. ಕೆಲವು ಸಮಯದಿಂದ ಡಿಜಿಟಲ್ ಕರೆನ್ಸಿಯ ಸಾಧಕ-ಬಾಧಕಗಳನ್ನು ಅನ್ವೇಷಿಸಲಾಗುತ್ತಿದೆ ಮತ್ತು ಪ್ರಸ್ತುತ ಹಂತ ಹಂತದ ಅನುಷ್ಠಾನದ ಕಾರ್ಯತಂತ್ರದ ಕಡೆಗೆ ಗಮನಹರಿಸಲಾಗುತ್ತಿದೆ. ಹಣಕಾಸಿನ ವ್ಯವಸ್ಥೆಗೆ ಯಾವುದೇ ಅಡ್ಡಿಯಾಗದ ರೀತಿಯಲ್ಲಿ ಡಿಜಿಟಲ್ ರೂಪಾಯಿ ಬಳಕೆ ಮಾಡಲಾಗುವುದು ಮತ್ತು ಇದಕ್ಕೆ ಸಂಬಂಧಿದ ಕಾರ್ಯವ್ಯಾಪ್ತಿಯನ್ನು ಶೀಘ್ರದಲ್ಲೇ ನಿರ್ಧಾರಿಸಲಾಗುವುದು. ಇದೀಗ ಇದನ್ನು ಅನುಷ್ಠಾನಗೊಳಿಸುವ ಕಾರ್ಯತಂತ್ರಗಳ ಬಗ್ಗೆ ಯೋಜನೆ ರೂಪಿಸಲಾಗುತ್ತಿದೆ ಎಂದು ಆರ್​ಬಿಐ ಹೇಳಿತ್ತು.

andolana

Share
Published by
andolana

Recent Posts

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

2 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

2 hours ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಮೂಳೆಗಳು ಮುರಿಯುತ್ತಿದ್ದರೂ ಬದುಕು ಕಟ್ಟಿಕೊಂಡ ರಾಧಿಕಾ

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…

2 hours ago

ಪಣ್ಣೇದೊಡ್ಡಿ ಡೇರಿ ಆಡಳಿತ-ಹಾಲು ಉತ್ಪಾದಕರ ಮಾರಾಮಾರಿ

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…

2 hours ago