ವಾಣಿಜ್ಯ

ರಾಜ್ಯೋತ್ಸವ ದಿನದಂದೇ ಆರ್‌ಬಿಐನಿಂದ ಡಿಜಿಟಲ್‌ ಕರೆನ್ಸಿ ಬಿಡುಗಡೆ

ಮುಂಬೈ: ಪ್ರಾಯೋಗಿಕ ಹಂತದ ಡಿಜಿಟಲ್ ಕರೆನ್ಸಿ ಡಿಜಿಟಲ್ ರೂಪಾಯಿಯನ್ನು (ಸಗಟು ವಿಭಾಗ) ಮಂಗಳವಾರ ಬಿಡುಗಡೆ ಮಾಡುವುದಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತಿಳಿಸಿದೆ. ಸರ್ಕಾರಿ ಸೆಕ್ಯುರಿಟೀಸ್ ವಹಿವಾಟಿಗಾಗಿ ಈ ರೂಪಾಯಿ ಬಳಕೆಯಾಗಲಿದೆ. ಸರ್ಕಾರಿ ಸೆಕ್ಯುರಿಟೀಸ್​ನ ಸೆಕೆಂಡರಿ ಮಾರುಕಟ್ಟೆ ವ್ಯವಹಾರಗಳಿಗಾಗಿ ಪ್ರಾಯೋಗಿಕ ಡಿಜಿಟಲ್ ರೂಪಾಯಿ ಬಳಕೆಯಾಗಲಿದೆ ಎಂದು ಆರ್​ಬಿಐ ಪ್ರಕಟಣೆ ತಿಳಿಸಿದೆ.

ಪ್ರಾಯೋಗಿಕ ಡಿಜಿಟಲ್ ರೂಪಾಯಿ ಬಿಡುಗಡೆಗಾಗಿ 9 ಬ್ಯಾಂಕ್​ಗಳನ್ನು ಆರ್​ಬಿಐ ಗುರುತಿಸಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಬರೋಡ, ಎಚ್​ಡಿಎಫ್​ಸಿ ಬ್ಯಾಂಕ್​, ಐಸಿಐಸಿಐ ಬ್ಯಾಂಕ್, ಕೋಟಕ್ ಮಹೀಂದ್ರಾ ಬ್ಯಾಂಕ್, ಯೆಸ್ ಬ್ಯಾಂಕ್, ಐಡಿಎಫ್​ಸಿ ಫಸ್ಟ್ ಬ್ಯಾಂಕ್ ಹಾಗೂ ಎಚ್​​ಎಸ್​ಬಿಸಿ ಬ್ಯಾಂಕ್​ಗಳನ್ನು ಪ್ರಾಯೋಗಿಕ ಡಿಜಿಟಲ್ ರೂಪಾಯಿ ವಹಿವಾಟಿಗಾಗಿ ಗುರುತಿಸಲಾಗಿದೆ.

ಮುಂದಿನ ಒಂದು ತಿಂಗಳ ಒಳಗಾಗಿ ಚಿಲ್ಲರೆ ವಿಭಾಗದ ಪ್ರಾಯೋಗಿಕ ಡಿಜಿಟಲ್ ರೂಪಾಯಿಯನ್ನು ಬಿಡುಗಡೆ ಮಾಡುವುದಾಗಿ ಆರ್​ಬಿಐ ತಿಳಿಸಿದೆ. ಆಯ್ದ ಪ್ರದೇಶಗಳಲ್ಲಿ ಸೀಮಿತ ವ್ಯಾಪಾರಿಗಳು ಮತ್ತು ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ಚಿಲ್ಲರೆ ವಿಭಾಗದ ಪ್ರಾಯೋಗಿಕ ಡಿಜಿಟಲ್ ರೂಪಾಯಿ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರೀಯ ಬ್ಯಾಂಕ್ ತಿಳಿಸಿದೆ.

ಹಣಕಾಸು ಅಕ್ರಮ ಮತ್ತು ಹಣದ ದುರ್ಬಳಕೆಯನ್ನು ತಡೆಗಟ್ಟಲು ಡಿಜಿಟಲ್ ರೂಪಾಯಿಯನ್ನು ಪ್ರಾಯೋಗಿಕವಾಗಿ ಶೀಘ್ರದಲ್ಲೇ ಪ್ರಾರಂಭಿಸುವುದಾಗಿ ಆರ್​ಬಿಐ ಇತ್ತೀಚೆಗೆ ಹೇಳಿತ್ತು. ಕೆಲವು ಸಮಯದಿಂದ ಡಿಜಿಟಲ್ ಕರೆನ್ಸಿಯ ಸಾಧಕ-ಬಾಧಕಗಳನ್ನು ಅನ್ವೇಷಿಸಲಾಗುತ್ತಿದೆ ಮತ್ತು ಪ್ರಸ್ತುತ ಹಂತ ಹಂತದ ಅನುಷ್ಠಾನದ ಕಾರ್ಯತಂತ್ರದ ಕಡೆಗೆ ಗಮನಹರಿಸಲಾಗುತ್ತಿದೆ. ಹಣಕಾಸಿನ ವ್ಯವಸ್ಥೆಗೆ ಯಾವುದೇ ಅಡ್ಡಿಯಾಗದ ರೀತಿಯಲ್ಲಿ ಡಿಜಿಟಲ್ ರೂಪಾಯಿ ಬಳಕೆ ಮಾಡಲಾಗುವುದು ಮತ್ತು ಇದಕ್ಕೆ ಸಂಬಂಧಿದ ಕಾರ್ಯವ್ಯಾಪ್ತಿಯನ್ನು ಶೀಘ್ರದಲ್ಲೇ ನಿರ್ಧಾರಿಸಲಾಗುವುದು. ಇದೀಗ ಇದನ್ನು ಅನುಷ್ಠಾನಗೊಳಿಸುವ ಕಾರ್ಯತಂತ್ರಗಳ ಬಗ್ಗೆ ಯೋಜನೆ ರೂಪಿಸಲಾಗುತ್ತಿದೆ ಎಂದು ಆರ್​ಬಿಐ ಹೇಳಿತ್ತು.

andolana

Share
Published by
andolana

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

3 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

9 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

9 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

10 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

10 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

10 hours ago