ವಾಣಿಜ್ಯ

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಏರಿಕೆ

ನವದೆಹಲಿ : ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಏರಿಕೆಯಾಗಿದೆ. ಇಂದಿನಿಂದ (ಡಿಸೆಂಬರ್‌ 1)ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್‌ ಗಳ ಬೆಲೆಯಲ್ಲಿ 21 ರೂ. ಗಳಷ್ಟು ಏರಿಕೆ ಮಾಡಲಾಗಿದೆ.

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌, ಭಾರತ್‌ ಪೆಟ್ರೋಲಿಯಂ ಕಾರ್ಪೊರೇಷನ್‌ ಹಾಗೂ ಹಿಂದೂಸ್ತಾನ್‌ ಪೆಟ್ರೋಲಿಯಂ ಕಾರ್ಪೊರೇಷನ್‌ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್‌ ನ ರಿಟೇಲ್‌ ದರವನ್ನು ಇಂದಿನಿಂದ ಜಾರಿಗೆ ಬರುವಂತೆ 21 ರೂ ಗಳನ್ನು ಹೆಚ್ಚಳ ಮಾಡಿದೆ. ಈ ಮೂಲಕ 1775.50 ಇದ್ದ ಸಿಲಿಂಡರ್‌ ನ ಚಿಲ್ಲರೆ ಮಾರಾಟ ಬೆಲೆ ಇಂದಿನಿಂದ 1796.50 ರೂ. ಗೆ ಹೆಚ್ಚಳವಾಗಿದೆ. ಇನ್ನು, ಮುಂಬೈ ನಲ್ಲಿ 902. 5 ಹಾಗೂ ಕೋಲ್ಕತ್ತಾದಲ್ಲಿ 929 ರೂ. ಮತ್ತು ಚೆನ್ನೈ ನಲ್ಲಿ 918.5 ರೂ. ಇದೆ.

ಬೆಲೆ ಏರಿಕೆಯ ನಂತರ ದೇಶದ ಪ್ರಮುಖ ರಾಜ್ಯಗಳಲ್ಲಿನ ರಿಟೇಲ್‌ ದರ

ನವದೆಹಲಿಯಲ್ಲಿ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್‌ ನ ಬೆಲೆ 1,796.5 ರೂ ಇದ್ದು, ಮುಂಬೈ ನಲ್ಲಿ 1,749 ರೂ. ಆಗಿದೆ. ಇನ್ನು ಗುರುಗ್ರಾಮದಲ್ಲಿ 1804 ರೂ. ಇದೆ. ಬೆಂಗಳೂರಿನಲ್ಲಿ 21 ರೂಪಾಯಿಯ ಬದಲಿಗೆ 26 ರೂ ಏರಿಕೆಯಾಗಿದ್ದು, ಸಿಲಿಂಡರ್‌ ನ ಬೆಲೆ 1883 ರೂ ತಲುಪಿದೆ.

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ನ ಬೆಲೆಯನ್ನು ಏರಿಕೆ ಮಾಡಲಾಗಿದೆಯಾದರೂ ಗೃಹ ಬಳಕೆಯ ಸಿಲಿಂಡರ್‌ ಬೆಲೆಯನ್ನು ಏರಿಸಿಲ್ಲ. ಹಾಗಾಗಿ ರಾಜ್ಯದ ಪ್ರಮುಖ ವಾಣಿಜ್ಯ ನಗರವಾದ ಬೆಂಗಳೂರಿನಲ್ಲಿ 14.2 ಕೆಜಿಯ ಎಲ್ ಪಿಜಿ ಸಿಲಿಂಡರ್‌ ನ ಬೆಲೆ ಪ್ರಸ್ತುತ 929 ರೂ. ಇದೆ. ಇನ್ನು, ಮುಂಬೈ ನಲ್ಲಿ 902. 5 ಹಾಗೂ ಕೋಲ್ಕತ್ತಾದಲ್ಲಿ 929 ರೂ. ಮತ್ತು ಚೆನ್ನೈ ನಲ್ಲಿ 918.5 ರೂ. ಇದೆ.

ನವೆಂಬರ್‌ ತಿಂಗಳಿನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್‌ ಬೆಲೆ ಇಳಿಕೆಯಾಗಿ, 1775.50 ರೂ. ಆಗಿತ್ತು. ಇದೀಗ 19 ಕೆಜಿ ಸಿಲಿಂಡರ್‌ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಗ್ರಾಹಕರ ಕೈ ಸುಟ್ಟಿದೆ.

lokesh

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಹಾರದಲ್ಲಿ ನಿತೀಶ್ ಕುಮಾರ್ ಆಡಳಿತಕ್ಕೆ ಎಳ್ಳುನೀರು

ಬಿಹಾರ ವಿಧಾನಸಭೆಗೆ ಚುನಾವಣೆ ನಡೆದು ಮೂರೂವರೆ ತಿಂಗಳಾಗುವಷ್ಟರಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಗೆ ಏಕಿಷ್ಟು ಆತುರ? ಏನು ಕಾರಣ ಎನ್ನುವುದಕ್ಕೆಲ್ಲ ಉತ್ತರ…

2 hours ago

ಕೊಡಗಿನಲ್ಲಿ ಜೀತ ಪದ್ಧತಿ ಇನ್ನೂ ಜೀವಂತ

ಕೃಷ್ಣ ಸಿದ್ದಾಪುರ ತೋಟದ ಮಾಲೀಕನ ದೌರ್ಜನ್ಯಕ್ಕೆ ತುತ್ತಾದ ೮ ಕುಟುಂಬಗಳ ೨೬ ಮಂದಿ ರಕ್ಷಣೆ; ಸಾಬೀತಾಗದ ಆರೋಪ  ಸಿದ್ದಾಪುರ: ವ್ಯವಸ್ಥೆಯಲ್ಲಿ ಶತಮಾನಗಳಿಂದ…

3 hours ago

ಹನೂರು: ಗ್ರಾಮದೇವತೆ ಬೆಟ್ಟಳ್ಳಿ ಮಾರಮ್ಮ ಜಾತ್ರೆಗೆ ಸಿದ್ಧತೆ

ಮಹಾದೇಶ್‌ ಎಂ ಗೌಡ  ಮಾ.೯ರಿಂದ ೫ ದಿನಗಳ ಕಾಲ ನಡೆಯಲಿರುವ ಹಬ್ಬ; ಸಾವಿರಾರು ಜನರು ಸೇರುವ ನಿರೀಕ್ಷೆ ಹನೂರು: ಪಟ್ಟಣದ…

3 hours ago

ಮಹಿಳಾ ದಿನದಂದು ಮಹಾರಾಣಿ ವಾಣಿವಿಲಾಸ ಸ್ಮರಣೆ

ಸಿರಿ ಮೈಸೂರು ಮೈಸೂರಿನ ನ್ಯಾಯಾಲಯದ ಮುಂಭಾಗದಿಂದ ಮಾಧವ ರಾವ್ ವೃತ್ತದವರೆಗೂ (ಅಗ್ರಹಾರ ವೃತ್ತ) ಇರುವ ರಸ್ತೆಯನ್ನು ವಾಣಿವಿಲಾಸ ರಸ್ತೆ ಎಂದು…

3 hours ago

ಊರ ಕಾಯುವ ಹೆಣ್ಣು ದೇವಿಯರು ನಮ್ಮನ್ನು ಪೊರೆಯುವ ಸ್ತ್ರೀ ಚೈತನ್ಯದ ಕಥೆ ಹೇಳುವರು

ರಾಧಾ ಆದಿಕಾಲದಿಂದ ಮಾನವರನ್ನು ಮೂಕವಿಸ್ಮಿತನನ್ನಾಗಿ ಮಾಡುತ್ತಾ ಬಂದ ವಿಚಿತ್ರಮಯ ಜಗತ್ ಸೃಷ್ಟಿ ಅವರ ಪಾಲಿಗೆ ಬಿಡಿಸಲಾರದ ಒಗಟು. ಆದಿಮಾನವರಿಗಂತೂ, ಭೂಮ್ಯಾಕಾಶಗಳಲ್ಲಿ…

3 hours ago

ಯಾಕೆ ಇವತ್ತಿನ ಈ ಮಹಿಳಾ ದಿನ?

ಸುಕನ್ಯಾ ಕನಾರಳ್ಳಿ ಹೆಣ್ಣು ನಿಮ್ಮ ಆಸ್ತಿಗೆ ವಾರಸುದಾರರನ್ನ ಹುಟ್ಟಿಸುವ ಕೇವಲ ಗರ್ಭ ಅಲ್ಲ, ಅವಳೊಬ್ಬ ಪ್ರಜೆ, ಅಂತ ಸಾರಿ ಸಾರಿ…

3 hours ago