ವಾಣಿಜ್ಯ

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಏರಿಕೆ

ನವದೆಹಲಿ : ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಏರಿಕೆಯಾಗಿದೆ. ಇಂದಿನಿಂದ (ಡಿಸೆಂಬರ್‌ 1)ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್‌ ಗಳ ಬೆಲೆಯಲ್ಲಿ 21 ರೂ. ಗಳಷ್ಟು ಏರಿಕೆ ಮಾಡಲಾಗಿದೆ.

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌, ಭಾರತ್‌ ಪೆಟ್ರೋಲಿಯಂ ಕಾರ್ಪೊರೇಷನ್‌ ಹಾಗೂ ಹಿಂದೂಸ್ತಾನ್‌ ಪೆಟ್ರೋಲಿಯಂ ಕಾರ್ಪೊರೇಷನ್‌ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್‌ ನ ರಿಟೇಲ್‌ ದರವನ್ನು ಇಂದಿನಿಂದ ಜಾರಿಗೆ ಬರುವಂತೆ 21 ರೂ ಗಳನ್ನು ಹೆಚ್ಚಳ ಮಾಡಿದೆ. ಈ ಮೂಲಕ 1775.50 ಇದ್ದ ಸಿಲಿಂಡರ್‌ ನ ಚಿಲ್ಲರೆ ಮಾರಾಟ ಬೆಲೆ ಇಂದಿನಿಂದ 1796.50 ರೂ. ಗೆ ಹೆಚ್ಚಳವಾಗಿದೆ. ಇನ್ನು, ಮುಂಬೈ ನಲ್ಲಿ 902. 5 ಹಾಗೂ ಕೋಲ್ಕತ್ತಾದಲ್ಲಿ 929 ರೂ. ಮತ್ತು ಚೆನ್ನೈ ನಲ್ಲಿ 918.5 ರೂ. ಇದೆ.

ಬೆಲೆ ಏರಿಕೆಯ ನಂತರ ದೇಶದ ಪ್ರಮುಖ ರಾಜ್ಯಗಳಲ್ಲಿನ ರಿಟೇಲ್‌ ದರ

ನವದೆಹಲಿಯಲ್ಲಿ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್‌ ನ ಬೆಲೆ 1,796.5 ರೂ ಇದ್ದು, ಮುಂಬೈ ನಲ್ಲಿ 1,749 ರೂ. ಆಗಿದೆ. ಇನ್ನು ಗುರುಗ್ರಾಮದಲ್ಲಿ 1804 ರೂ. ಇದೆ. ಬೆಂಗಳೂರಿನಲ್ಲಿ 21 ರೂಪಾಯಿಯ ಬದಲಿಗೆ 26 ರೂ ಏರಿಕೆಯಾಗಿದ್ದು, ಸಿಲಿಂಡರ್‌ ನ ಬೆಲೆ 1883 ರೂ ತಲುಪಿದೆ.

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ನ ಬೆಲೆಯನ್ನು ಏರಿಕೆ ಮಾಡಲಾಗಿದೆಯಾದರೂ ಗೃಹ ಬಳಕೆಯ ಸಿಲಿಂಡರ್‌ ಬೆಲೆಯನ್ನು ಏರಿಸಿಲ್ಲ. ಹಾಗಾಗಿ ರಾಜ್ಯದ ಪ್ರಮುಖ ವಾಣಿಜ್ಯ ನಗರವಾದ ಬೆಂಗಳೂರಿನಲ್ಲಿ 14.2 ಕೆಜಿಯ ಎಲ್ ಪಿಜಿ ಸಿಲಿಂಡರ್‌ ನ ಬೆಲೆ ಪ್ರಸ್ತುತ 929 ರೂ. ಇದೆ. ಇನ್ನು, ಮುಂಬೈ ನಲ್ಲಿ 902. 5 ಹಾಗೂ ಕೋಲ್ಕತ್ತಾದಲ್ಲಿ 929 ರೂ. ಮತ್ತು ಚೆನ್ನೈ ನಲ್ಲಿ 918.5 ರೂ. ಇದೆ.

ನವೆಂಬರ್‌ ತಿಂಗಳಿನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್‌ ಬೆಲೆ ಇಳಿಕೆಯಾಗಿ, 1775.50 ರೂ. ಆಗಿತ್ತು. ಇದೀಗ 19 ಕೆಜಿ ಸಿಲಿಂಡರ್‌ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಗ್ರಾಹಕರ ಕೈ ಸುಟ್ಟಿದೆ.

lokesh

Recent Posts

ಗುಲ್‌ಮೊಹರ್‌ ಮೋಹದಲ್ಲಿ ಮೋಹಕ ಮೈಸೂರು

ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್‌ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…

1 hour ago

ಬೇಸತ್ತ ಮನಸ್ಸುಗಳು ಸಿನೆಮಾ ನಾಯಕರಿಗೆ ಯಾಕೆ ಮಾರುಹೋಗುತ್ತವೆ?

ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.18 ಭಾನುವಾರ

2 hours ago

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

16 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

16 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

17 hours ago