ನವದೆಹಲಿ : ವಾಣಿಜ್ಯ ಬಳಕೆಯ 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿದೆ. ಇಂದಿನಿಂದ (ಡಿಸೆಂಬರ್ 1)ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಗಳ ಬೆಲೆಯಲ್ಲಿ 21 ರೂ. ಗಳಷ್ಟು ಏರಿಕೆ ಮಾಡಲಾಗಿದೆ.
ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ನ ರಿಟೇಲ್ ದರವನ್ನು ಇಂದಿನಿಂದ ಜಾರಿಗೆ ಬರುವಂತೆ 21 ರೂ ಗಳನ್ನು ಹೆಚ್ಚಳ ಮಾಡಿದೆ. ಈ ಮೂಲಕ 1775.50 ಇದ್ದ ಸಿಲಿಂಡರ್ ನ ಚಿಲ್ಲರೆ ಮಾರಾಟ ಬೆಲೆ ಇಂದಿನಿಂದ 1796.50 ರೂ. ಗೆ ಹೆಚ್ಚಳವಾಗಿದೆ. ಇನ್ನು, ಮುಂಬೈ ನಲ್ಲಿ 902. 5 ಹಾಗೂ ಕೋಲ್ಕತ್ತಾದಲ್ಲಿ 929 ರೂ. ಮತ್ತು ಚೆನ್ನೈ ನಲ್ಲಿ 918.5 ರೂ. ಇದೆ.
ಬೆಲೆ ಏರಿಕೆಯ ನಂತರ ದೇಶದ ಪ್ರಮುಖ ರಾಜ್ಯಗಳಲ್ಲಿನ ರಿಟೇಲ್ ದರ
ನವದೆಹಲಿಯಲ್ಲಿ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ನ ಬೆಲೆ 1,796.5 ರೂ ಇದ್ದು, ಮುಂಬೈ ನಲ್ಲಿ 1,749 ರೂ. ಆಗಿದೆ. ಇನ್ನು ಗುರುಗ್ರಾಮದಲ್ಲಿ 1804 ರೂ. ಇದೆ. ಬೆಂಗಳೂರಿನಲ್ಲಿ 21 ರೂಪಾಯಿಯ ಬದಲಿಗೆ 26 ರೂ ಏರಿಕೆಯಾಗಿದ್ದು, ಸಿಲಿಂಡರ್ ನ ಬೆಲೆ 1883 ರೂ ತಲುಪಿದೆ.
ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ನ ಬೆಲೆಯನ್ನು ಏರಿಕೆ ಮಾಡಲಾಗಿದೆಯಾದರೂ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು ಏರಿಸಿಲ್ಲ. ಹಾಗಾಗಿ ರಾಜ್ಯದ ಪ್ರಮುಖ ವಾಣಿಜ್ಯ ನಗರವಾದ ಬೆಂಗಳೂರಿನಲ್ಲಿ 14.2 ಕೆಜಿಯ ಎಲ್ ಪಿಜಿ ಸಿಲಿಂಡರ್ ನ ಬೆಲೆ ಪ್ರಸ್ತುತ 929 ರೂ. ಇದೆ. ಇನ್ನು, ಮುಂಬೈ ನಲ್ಲಿ 902. 5 ಹಾಗೂ ಕೋಲ್ಕತ್ತಾದಲ್ಲಿ 929 ರೂ. ಮತ್ತು ಚೆನ್ನೈ ನಲ್ಲಿ 918.5 ರೂ. ಇದೆ.
ನವೆಂಬರ್ ತಿಂಗಳಿನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆಯಾಗಿ, 1775.50 ರೂ. ಆಗಿತ್ತು. ಇದೀಗ 19 ಕೆಜಿ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಗ್ರಾಹಕರ ಕೈ ಸುಟ್ಟಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…