ನವದೆಹಲಿ: ಹೊಸವರ್ಷದ ಸಂಭ್ರಮದಲ್ಲಿದ್ದ ಜನತೆ ತೈಲ ಮಾರುಕಟ್ಟೆ ಕಂಪನಿ ಶಾಕ್ ನೀಡಿದ್ದು, ನೂತನ ವರ್ಷದ ಮೊದಲ ದಿನವೇ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 25 ರೂ.ಗೆ ಹೆಚ್ಚಳ ಮಾಡಿದೆ. ನೂತನ ಪರಿಷ್ಕೃತ ದರ ಭಾನುವಾರದಿಂದಲೇ ಜಾರಿಗೆ ಬಂದಿದೆ.
ಇದಲ್ಲದೆ ವರ್ಷಾರಂಭದಲ್ಲಿ ಟೋಲ್ ತೆರಿಗೆ, ಬ್ಯಾಂಕ್ ಲಾಕರ್ ಸೇರಿದಂತೆ ಹಲವು ನಿಯಮಗಳು ಕೂಡ ಬದಲಾಗಿದ್ದು, ಜನಸಾಮಾನ್ಯರ ಜೇಬಿಗೆ ಹೊರೆ ಬೀಳಲಿದೆ.
ಕಾರು ಖರೀದಿಯು ಕೂಡ ದುಬಾರಿಯಾಗಲಿದೆ. ಕ್ರೆಡಿಟ್ ಕಾರ್ಡ್ ನಿಯಮಗಳಲ್ಲೂ ದೊಡ್ಡ ಬದಲಾವಣೆಯಾಗಲಿದೆ. ವಾಹನಗಳ ದರವನ್ನು ಹೆಚ್ಚಿಸಲಾಗಿದ್ದು, ಮಾರುತಿ, ಸುಜುಕಿ, ಹೊಂಡೈ, ಮೋಟಾರ್, ಟಾಟಾ ಮೋಟಾರ್ಸ್, ಮರ್ಸಿಡಿಸ್ ಬೆಂಜ್, ಆಡಿ, ರೆನಾಲ್ಟ್, ಎಂಜಿ ಮೋಟಾರ್ಸ್ ಸೇರಿದಂತೆ ಹಲವು ಕಂಪನಿಗಳು ದರ ಹೆಚ್ಚಿಸಿವೆ.
ಲಾಕರ್ ನಿಯಮಗಳಲ್ಲಿ ಬದಲಾವಣೆಯಾಗಲಿದ್ದು, ಜಿಎಸ್ಟಿ ನಿಯಮಗಳಲ್ಲೂ ಕೂಡ ಬದಲಾವಣೆಯಾಗಿದೆ, ವಾರ್ಷಿಕ 5 ಕೋಟಿಗೂ ಹೆಚ್ಚು ವಹಿವಾಟು ಹೊಂದಿರುವ ಉದ್ಯಮಿಗಳಿಗೆ ಇನ್ವಾಯ್ಸ್ಗಳನ್ನು ಉತ್ಪಾದಿಸುವುದು ಅಗತ್ಯವಾಗಿದೆ. ಪ್ರತಿ ಫೋನ್ ತಯಾರಕರು ಆಮದು ಮತ್ತು ರಫ್ತು ಕಂಪನಿಗಳಿಗೆ ಇಎಂಇಐ ಸಂಖ್ಯೆಯನ್ನು ನೊಂದಾಯಿಸಬೇಕಾಗಿದೆ.
ಕಳೆದ ಸೆಪ್ಟೆಂಬರ್ 1ರಂದು ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ 91.50 ಪೈಸೆ ಇಳಿಕೆ ಮಾಡಿದ್ದವು. ಪ್ರತಿ ತಿಂಗಳ 1ನೇ ತಾರೀಖಿನಂದು ತೈಲ ಕಂಪನಿಗಳು ಗ್ಯಾಸ್ ಸಿಲಿಂಡರ್ ಬೆಲೆ ಪರಿಷ್ಕರಿಸುತ್ತವೆ.
ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…
ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…
ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…
ಹಲವು ಹೋಟೆಲ್ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್ಫುಡ್ಗಳ ದರವೂ ಗಗನಮುಖಿ • ಚಿರಂಜೀವಿ ಸಿ…
• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ಹತ್ತಿರತ್ತಿರ ಒಂದೂ ಕಾಲು ಶತಮಾನದ ಚಿರನೂತನ ಶಾಲೆ... ವೃದ್ಧಾಪ್ಯದಲ್ಲೂ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಂಡು…
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…