ವಾಣಿಜ್ಯ

ಹೊಸ ವರ್ಷಕ್ಕೆ ಬೆಲೆ ಏರಿಕೆ ಬಿಸಿ: ವಾಣಿಜ್ಯ ಸಿಲಿಂಡರ್ ದರ ಹೆಚ್ಚಳ

ನವದೆಹಲಿ: ಹೊಸವರ್ಷದ ಸಂಭ್ರಮದಲ್ಲಿದ್ದ ಜನತೆ ತೈಲ ಮಾರುಕಟ್ಟೆ ಕಂಪನಿ ಶಾಕ್ ನೀಡಿದ್ದು, ನೂತನ ವರ್ಷದ ಮೊದಲ ದಿನವೇ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 25 ರೂ.ಗೆ ಹೆಚ್ಚಳ ಮಾಡಿದೆ. ನೂತನ ಪರಿಷ್ಕೃತ ದರ ಭಾನುವಾರದಿಂದಲೇ ಜಾರಿಗೆ ಬಂದಿದೆ.

ಇದಲ್ಲದೆ ವರ್ಷಾರಂಭದಲ್ಲಿ ಟೋಲ್ ತೆರಿಗೆ, ಬ್ಯಾಂಕ್ ಲಾಕರ್ ಸೇರಿದಂತೆ ಹಲವು ನಿಯಮಗಳು ಕೂಡ ಬದಲಾಗಿದ್ದು, ಜನಸಾಮಾನ್ಯರ ಜೇಬಿಗೆ ಹೊರೆ ಬೀಳಲಿದೆ.
ಕಾರು ಖರೀದಿಯು ಕೂಡ ದುಬಾರಿಯಾಗಲಿದೆ. ಕ್ರೆಡಿಟ್ ಕಾರ್ಡ್ ನಿಯಮಗಳಲ್ಲೂ ದೊಡ್ಡ ಬದಲಾವಣೆಯಾಗಲಿದೆ. ವಾಹನಗಳ ದರವನ್ನು ಹೆಚ್ಚಿಸಲಾಗಿದ್ದು, ಮಾರುತಿ, ಸುಜುಕಿ, ಹೊಂಡೈ, ಮೋಟಾರ್, ಟಾಟಾ ಮೋಟಾರ್ಸ್, ಮರ್ಸಿಡಿಸ್ ಬೆಂಜ್, ಆಡಿ, ರೆನಾಲ್ಟ್, ಎಂಜಿ ಮೋಟಾರ್ಸ್ ಸೇರಿದಂತೆ ಹಲವು ಕಂಪನಿಗಳು ದರ ಹೆಚ್ಚಿಸಿವೆ.

ಲಾಕರ್ ನಿಯಮಗಳಲ್ಲಿ ಬದಲಾವಣೆಯಾಗಲಿದ್ದು, ಜಿಎಸ್ಟಿ ನಿಯಮಗಳಲ್ಲೂ ಕೂಡ ಬದಲಾವಣೆಯಾಗಿದೆ, ವಾರ್ಷಿಕ 5 ಕೋಟಿಗೂ ಹೆಚ್ಚು ವಹಿವಾಟು ಹೊಂದಿರುವ ಉದ್ಯಮಿಗಳಿಗೆ ಇನ್ವಾಯ್ಸ್ಗಳನ್ನು ಉತ್ಪಾದಿಸುವುದು ಅಗತ್ಯವಾಗಿದೆ. ಪ್ರತಿ ಫೋನ್ ತಯಾರಕರು ಆಮದು ಮತ್ತು ರಫ್ತು ಕಂಪನಿಗಳಿಗೆ ಇಎಂಇಐ ಸಂಖ್ಯೆಯನ್ನು ನೊಂದಾಯಿಸಬೇಕಾಗಿದೆ.
ಕಳೆದ ಸೆಪ್ಟೆಂಬರ್ 1ರಂದು ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ 91.50 ಪೈಸೆ ಇಳಿಕೆ ಮಾಡಿದ್ದವು. ಪ್ರತಿ ತಿಂಗಳ 1ನೇ ತಾರೀಖಿನಂದು ತೈಲ ಕಂಪನಿಗಳು ಗ್ಯಾಸ್ ಸಿಲಿಂಡರ್ ಬೆಲೆ ಪರಿಷ್ಕರಿಸುತ್ತವೆ.

andolana

Recent Posts

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

6 mins ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

22 mins ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

42 mins ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

1 hour ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

2 hours ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

2 hours ago