ನವದೆಹಲಿ: ಹೊಸವರ್ಷದ ಸಂಭ್ರಮದಲ್ಲಿದ್ದ ಜನತೆ ತೈಲ ಮಾರುಕಟ್ಟೆ ಕಂಪನಿ ಶಾಕ್ ನೀಡಿದ್ದು, ನೂತನ ವರ್ಷದ ಮೊದಲ ದಿನವೇ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 25 ರೂ.ಗೆ ಹೆಚ್ಚಳ ಮಾಡಿದೆ. ನೂತನ ಪರಿಷ್ಕೃತ ದರ ಭಾನುವಾರದಿಂದಲೇ ಜಾರಿಗೆ ಬಂದಿದೆ.
ಇದಲ್ಲದೆ ವರ್ಷಾರಂಭದಲ್ಲಿ ಟೋಲ್ ತೆರಿಗೆ, ಬ್ಯಾಂಕ್ ಲಾಕರ್ ಸೇರಿದಂತೆ ಹಲವು ನಿಯಮಗಳು ಕೂಡ ಬದಲಾಗಿದ್ದು, ಜನಸಾಮಾನ್ಯರ ಜೇಬಿಗೆ ಹೊರೆ ಬೀಳಲಿದೆ.
ಕಾರು ಖರೀದಿಯು ಕೂಡ ದುಬಾರಿಯಾಗಲಿದೆ. ಕ್ರೆಡಿಟ್ ಕಾರ್ಡ್ ನಿಯಮಗಳಲ್ಲೂ ದೊಡ್ಡ ಬದಲಾವಣೆಯಾಗಲಿದೆ. ವಾಹನಗಳ ದರವನ್ನು ಹೆಚ್ಚಿಸಲಾಗಿದ್ದು, ಮಾರುತಿ, ಸುಜುಕಿ, ಹೊಂಡೈ, ಮೋಟಾರ್, ಟಾಟಾ ಮೋಟಾರ್ಸ್, ಮರ್ಸಿಡಿಸ್ ಬೆಂಜ್, ಆಡಿ, ರೆನಾಲ್ಟ್, ಎಂಜಿ ಮೋಟಾರ್ಸ್ ಸೇರಿದಂತೆ ಹಲವು ಕಂಪನಿಗಳು ದರ ಹೆಚ್ಚಿಸಿವೆ.
ಲಾಕರ್ ನಿಯಮಗಳಲ್ಲಿ ಬದಲಾವಣೆಯಾಗಲಿದ್ದು, ಜಿಎಸ್ಟಿ ನಿಯಮಗಳಲ್ಲೂ ಕೂಡ ಬದಲಾವಣೆಯಾಗಿದೆ, ವಾರ್ಷಿಕ 5 ಕೋಟಿಗೂ ಹೆಚ್ಚು ವಹಿವಾಟು ಹೊಂದಿರುವ ಉದ್ಯಮಿಗಳಿಗೆ ಇನ್ವಾಯ್ಸ್ಗಳನ್ನು ಉತ್ಪಾದಿಸುವುದು ಅಗತ್ಯವಾಗಿದೆ. ಪ್ರತಿ ಫೋನ್ ತಯಾರಕರು ಆಮದು ಮತ್ತು ರಫ್ತು ಕಂಪನಿಗಳಿಗೆ ಇಎಂಇಐ ಸಂಖ್ಯೆಯನ್ನು ನೊಂದಾಯಿಸಬೇಕಾಗಿದೆ.
ಕಳೆದ ಸೆಪ್ಟೆಂಬರ್ 1ರಂದು ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ 91.50 ಪೈಸೆ ಇಳಿಕೆ ಮಾಡಿದ್ದವು. ಪ್ರತಿ ತಿಂಗಳ 1ನೇ ತಾರೀಖಿನಂದು ತೈಲ ಕಂಪನಿಗಳು ಗ್ಯಾಸ್ ಸಿಲಿಂಡರ್ ಬೆಲೆ ಪರಿಷ್ಕರಿಸುತ್ತವೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…