ವಾಣಿಜ್ಯ

ಡಿಸೆಂಬರ್‌ 4ಕ್ಕೆ ಬಿಡುಗಡೆಯಾಗುತ್ತಿದೆ ಒನ್‌ಪ್ಲಸ್‌ 12

ಮೊಬೈಲ್‌ ಪ್ರಿಯರು ಬಹುದಿನಗಳಿಂದ ಕಾಯುತ್ತಿದ್ದ ಬಹುನಿರೀಕ್ಷಿತ ಒನ್‌ಪ್ಲಸ್ 12 ಸ್ಮಾರ್ಟ್‌ ಫೋನ್‌ ಬಿಡುಗಡೆಗೆ ದಿನಾಂಕ ನಿಗಧಿಯಾಗಿದೆ. ಇದೇ ಡಿಸೆಂಬರ್‌ 4 ರಂದು ಕಂಪನಿಯು ತನ್ನ 10 ನೇ ವರ್ಷದ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಅದೇ ದಿನದಂದು ಒನ್‌ಪ್ಲಸ್ 12 ಸ್ಮಾರ್ಟ್‌ ಫೋನ್‌ ಅನ್ನೂ ಕೂಡ ಬಿಡುಗಡೆ ಮಾಡಲು ಕಂಪನಿ ಸಿದ್ಧತೆ ಮಾಡಿಕೊಂಡಿದೆ.

ಬಿಡುಗಡೆಗೂ ಮುನ್ನವೇ ಒನ್‌ಪ್ಲಸ್‌ 12 ನ ಕೆಲವು ಫೀಚರ್ಸ್ ಗಳು ಮೊಬೈಲ್‌ ಪ್ರಿಯರನ್ನು ಸೆಳೆಯುತ್ತಿವೆ. ಅಧಿಕೃತವಾಗಿ ಈ ಫೋನಿನ ಫೀಚರ್ಸ್‌ ನ ಬಗೆಗಿನ ಮಾಹಿತಿ ತಿಳಿದುಬಂದಿಲ್ಲವಾದರೂ ಕೆಲವು ಟಿಪ್‌ಸ್ಟರ್ ಗಳು ಈ ಫೋನಿನ ರಿವ್ಯೂ ನೀಡಿದ್ದಾರೆ.

ರಿವ್ಯೂ ಪ್ರಕಾರ ಈ ಮೊಬೈಲ್‌ ಪೇಲ್‌ ಗ್ರೀನ್‌, ರಾಕ್‌ ಬ್ಲ್ಯಾಕ್‌ ಮತ್ತು ವೈಟ್‌, ಮೂರು ಬಣ್ಣಗಳಲ್ಲಿ ಲಭ್ಯವಿರಲಿದ್ದು, ನಯವಾದ ವಿನ್ಯಾಸದೊಂದಿಗೆ ಟ್ರಿಪಲ್‌ ಕ್ಯಾಮೆರಾ ಸೆಟಪ್‌ ಅನ್ನು ಹೋಂದಿರಲಿದೆ, ಪೆರಿಸ್ಕೋಪ್‌ ಜೂಮ್‌ ಲೆನ್ಸ್‌ ಹೊಂದಿರುವ ಈ ಮೋಬೈಲ್‌ ನಲ್ಲಿ ಟೆಲಿಫೋಟೊ ಲೆನ್ಸ್‌ ಅಳವಡಿಸಲಾಗಿದೆ. ಇದರಿಂದ ಅತ್ಯುತ್ತಮವಾದ ಫೋಟೋಗಳನ್ನು ಸೆರೆಹಿಡಿಯಲು ಅನುಕೂಲವಾಗುತ್ತದೆ.

ಆರಂಭದಲ್ಲಿ ಈ ಒನ್‌ಪ್ಲಸ್ 12 ಸ್ಮಾರ್ಟ್‌ ಫೋನ್‌ ಚೀನಾದಲ್ಲಿ ಬಿಡುಗಡೆಯಾಗಲಿದೆ. ನಂತರ ಜನವರಿಯ ಬಳಿಕ ಗ್ಲೋಬಲ್‌ ಮಾರ್ಕೆಟ್‌ ಗೆ ಲಗ್ಗೆ ಇಡಲಿದೆ.

ಕಳೆದ ವರ್ಷ ಭಾರತದಲ್ಲಿ ಒನ್‌ಪ್ಲಸ್ 11 ಸ್ಮಾರ್ಟ್‌ ಫೋನ್‌ ಅನ್ನು ಬಿಡುಗಡೆ ಮಾಡಲಾಗಿತ್ತು. ಇದೀಗ ಕಂಪನಿಯು ಒನ್‌ಪ್ಲಸ್ 12 ಬಿಡುಗಡೆಗೆ ಸಜ್ಜಾಗಿದ್ದು, ಭಾರತದಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂಬುದು ಇನ್ನೂ ಕೂಡ ತಿಳಿದುಬಂದಿಲ್ಲ.

lokesh

Share
Published by
lokesh

Recent Posts

ಓದುಗರ ಪತ್ರ | ಚಲನ ಚಿತ್ರದ ಅಶ್ಲೀಲ ಸಾಹಿತ್ಯ ನಿಷೇಧಿಸಿ

ಕನ್ನಡ ಚಲನಚಿತ್ರಗಳು ಭಾರತೀಯ ಸಿನಿರಂಗದಲ್ಲಿ ತನ್ನದೇ ಆದ ವೈಶಿಷ್ಟ್ಯವನ್ನು ಹೊಂದಿವೆ. ಎಪ್ಪತ್ತು, ಎಂಬತ್ತರ ದಶಕದಲ್ಲಿ ತೆರೆ ಕಂಡ ಚಿತ್ರಗಳ ಹಾಡುಗಳು…

53 mins ago

ಓದುಗರ ಪತ್ರ | ಹೆಚ್ಚುವರಿ ಬಸ್‌ ಸೌಲಭ್ಯ ಕಲ್ಪಿಸಿ

ಸರಗೂರು ಹಾಗೂ ಎಚ್‌.ಡಿ.ಕೋಟೆಯಿಂದ ಗುಂಡ್ಲುಪೇಟೆಗೆ ಪ್ರತಿನಿತ್ಯ ನೂರಾರು ಜನರು ಪ್ರಯಾಣಿಸುತ್ತಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳು ಸರಿಯಾದ ಸಮಯಕೆ…

1 hour ago

ಓದುಗರ ಪತ್ರ | ಕೆರೆಗಳ ಉಳಿವಿಗೆ ಜಿಯೋ ಫೆನ್ಸಿಂಗ್ ಕಡ್ಡಾಯಗೊಳಿಸಿ

ರಾಜ್ಯದ ಜಲಮೂಲಗಳ ಸ್ಥಿತಿ ಇಂದು ಶೋಚನೀಯವಾಗಿದೆ. ಅಂಕಿ-ಅಂಶಗಳ ಪ್ರಕಾರ ಕಳೆದ ಎರಡು ದಶಕಗಳಲ್ಲಿ ಅತಿಕ್ರಮಣದಿಂದಾಗಿ ನಗರ ಪ್ರದೇಶದ ಕೆರೆಗಳ ವಿಸ್ತೀರ್ಣ…

1 hour ago

ಓದುಗರ ಪತ್ರ | ನೀರು ಪೋಲು ಮಾಡದಂತೆ ಜಾಗೃತಿ ಮೂಡಿಸಿ

ಬೇಸಿಗೆಯ ತಾಪ ಹೆಚ್ಚಾದಂತೆ ರಾಜ್ಯದ ಹಲವೆಡೆ ಜನರು ಒಂದು ಬಿಂದಿಗೆ ನೀರಿಗಾಗಿ ವಾರಗಟ್ಟಲೆ ಕಾಯುವ ಪರಿಸ್ಥಿತಿ ಇದೆ. ಹೀಗಿರುವಾಗ, ಮೈಸೂರು…

1 hour ago

ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರ ರಾಜೀನಾಮೆಗೆ ಬಿಗಿಪಟ್ಟು

ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರ ರಾಜೀನಾಮೆಗೆ ಬಿಗಿಪಟ್ಟು • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ತಾಲ್ಲೂಕು ವೀರಶೈವ ಲಿಂಗಾಯತ ಮಹಾ…

1 hour ago

ಅಪಘಾತದಿಂದ ಹೊತ್ತಿ ಉರಿದ ಟಿಪ್ಪರ್‌, ಬಸ್‌ : 14 ಮಂದಿ ಸಜೀವ ದಹನ

ಹೈದರಾಬಾದ್ : ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯ ರಾಯವರಂ ಬಳಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ,…

1 hour ago